Daniel Balaji: ಯಶ್‌ ಅಭಿನಯದ 'ಕಿರಾತಕ' ಸಿನಿಮಾದ ವಿಲನ್‌ ಡೇನಿಯಲ್‌ ಬಾಲಾಜಿ ನಿಧನ!

Daniel Balaji passed away: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಕಿರಾತಕ ಸಿನಿಮಾದಲ್ಲಿ ಖಳನಾಯಕನ ಪಾತ್ರದಲ್ಲಿ ಮಿಂಚಿದ್ದ ತಮಿಳಿನ ಪ್ರಖ್ಯಾತ ನಟ ಡೇನಿಯಲ್‌ ಬಾಲಾಜಿ ಇಂದು (ಶುಕ್ರವಾರ) ನಿಧನರಾಗಿದ್ದಾರೆ.. 

Written by - Savita M B | Last Updated : Mar 30, 2024, 09:35 AM IST
  • ಕಿರಾತಕ ಸಿನಿಮಾದಲ್ಲಿ ವಿಲನ್‌ ಆಗಿ ನಟಿಸಿ ಕನ್ನಡಿಗರ ಮೆಚ್ಚುಗೆ ಪಡೆದುಕೊಂಡಿದ್ದ ನಟ ಡೇನಿಯಲ್‌ ಬಾಲಾಜಿ
  • ನಟ ಡೇನಿಯಲ್‌ ಬಾಲಾಜಿ ಇಂದು (ಶುಕ್ರವಾರ ಮಾರ್ಚ್‌ 29) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ..
Daniel Balaji: ಯಶ್‌ ಅಭಿನಯದ 'ಕಿರಾತಕ' ಸಿನಿಮಾದ ವಿಲನ್‌ ಡೇನಿಯಲ್‌ ಬಾಲಾಜಿ ನಿಧನ! title=

Daniel Balaji: ಕನ್ನಡದ ಸ್ಟಾರ್‌ ನಟ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್‌ ಆಗಿ ನಟಿಸಿ ಕನ್ನಡಿಗರ ಮೆಚ್ಚುಗೆ ಪಡೆದುಕೊಂಡಿದ್ದ ನಟ ಡೇನಿಯಲ್‌ ಬಾಲಾಜಿ ಇಂದು (ಶುಕ್ರವಾರ ಮಾರ್ಚ್‌ 29) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.. ಇವರಿಗೆ 48 ವರ್ಷ ವಯಸ್ಸಾಗಿತ್ತು.. 

ತಮಿಳು ಸಿನಿರಂಗದಲ್ಲಿ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದ ಡೇನಿಯಲ್‌ ಬಾಲಾಜಿ ಬಹುಭಾಷಾ ನಟನೆಂದು ಪ್ರಖ್ಯಾತಿ ಪಡೆದುಕೊಂಡಿದ್ದರು.. ಕನ್ನಡ, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಗುರುತಿಸಿಕೊಂಡಿರುವ ಡೇನಿಯಲ್‌ ಬಾಲಾಜಿ ಹೃದಯಾಘಾತದಿಂದ ನಮ್ಮನ್ನೆಲ್ಲ ಅಗಲಿದ್ದಾರೆ.. ದಿಢೀರ್‌ ಡೇನಿಯಲ್‌ ಬಾಲಾಜಿಗೆ ಹೃದಯಾಘಾತವಾಗಿದ್ದು.. ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.. 

ಇದನ್ನೂ ಓದಿ-Thalaivar 171: ಸೂಪರ್‌ ಸ್ಟಾರ್ ರಜನಿಕಾಂತ್‌ ಹೊಸ ಸಿನಿಮಾದ ಪೋಸ್ಟರ್‌ ಔಟ್!‌

ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬದ ಸದಸ್ಯರಾದ ಇವರ ಪಾರ್ಥಿವ ಶರೀರವನ್ನು ಶನಿವಾರ ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ವರದಿ ಮಾಡಲಾಗಿದೆ.. 

ಇದನ್ನೂ ಓದಿ-Samantha Ruth Prabhu: 'ಲೈಂಗಿಕತೆಯ ವಿಚಾರದಲ್ಲಿ ನಾನು ಯಾವಾಗಲೂ...', ಬೆಚ್ಚಿಬೀಳಿಸುವ ಹೇಳಿಕೆ ನೀಡಿದ ಸಮಂತಾ!

ನಟ ಡೇನಿಯಲ್‌ ಬಾಲಾಜಿ ಕನ್ನಡದಲ್ಲಿ ಕಿರಾತಕ,  ಬೆಂಗಳೂರು ಅಂಡರ್​ವರ್ಲ್ಡ್​​​, ಡವ್ ಹಾಗೂ ​ಶಿವಾಜಿನಗರ ಸಿನಿಮಾಗಳಲ್ಲಿ ನಟಿಸುವುದರ ಮೂಲಕ ಕನ್ನಡ ಜನರಿಗೆ ಹತ್ತಿರವಾಗಿದ್ದರು.. ಡೇನಿಯಲ್‌ ಬಾಲಾಜಿ ತಮಿಳಿನಲ್ಲಿ  ಗೌತಮ್ ವಾಸುದೇವ ಮೆನನ್ ನಿರ್ದೇಶನದ ‘ಕಾಖ ಕಾಖ’ ಚಿತ್ರದಲ್ಲಿ ನಟ ಸೂರ್ಯ ಅವರೊಂದಿಗೆ ತೆರೆಹಂಚಿಕೊಂಡಿದ್ದರು.. ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಆಗಿಯೂ ಗುರುತಿಸಿಕೊಂಡ ಇವರು ಕಮಲ್ ಹಾಸನ್ ಅವರ ಹಿಸ್ಟಾರಿಕ್ ಡ್ರಾಮಾ ‘ಮರುಢನಯಗಂ’ ಸಿನಿಮಾದಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಕೆಲಸ ಮಾಡಿದ್ದರು.. 
 
ಖಡಕ್‌ ವಿಲನ್‌ ಲುಕ್‌ ಹಾಗೂ ತಮ್ಮ ಕಂಠದಿಂದಲೇ ಜನಮನ್ನಣೆ ಗಳಿಸಿದ ಡೇನಿಯಲ್‌ ಬಾಲಾಜಿ ಖಳನಾಯಕನ ಪಾತ್ರಗಳಿಗೆ ಹೇಳಿಮಾಡಿಸಿದಂತಹ ವ್ಯಕ್ತಿಯಾಗಿದ್ದರು.. ಆದರೆ ಅವರ ಅಕಾಲಿಕ ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ಆಘಾತವುಂಟಾಗಿದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News