Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!!

Darshan in police custody: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಸಂಚಲನದ ಸಂಗತಿಗಳು ಹೊರಬೀಳುತ್ತಿವೆ. ನ್ಯಾಯಾಲಯ ಈಗಾಗಲೇ ದರ್ಶನ್‌ ಹಾಗೂ ಡಿ ಗ್ಯಾಂಗ್‌ನ್ನು ಹತ್ತು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Written by - Savita M B | Last Updated : Jun 16, 2024, 07:46 PM IST
  • ಕನ್ನಡದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಪ್ರಕರಣದಲ್ಲಿ ಶಾಕಿಂಗ್ ವಿಷಯಗಳು ಬೆಳಕಿಗೆ ಬರುತ್ತಿವೆ.
  • ರೇಣುಕಾ ಸ್ವಾಮಿಯನ್ನು ಕಿಡ್ನಾಪ್‌ ಮಾಡಿ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!! title=

Darshan Arrest: ಕನ್ನಡದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಪ್ರಕರಣದಲ್ಲಿ ಶಾಕಿಂಗ್ ವಿಷಯಗಳು ಬೆಳಕಿಗೆ ಬರುತ್ತಿವೆ. ರೇಣುಕಾ ಸ್ವಾಮಿಯನ್ನು ಕಿಡ್ನಾಪ್‌ ಮಾಡಿ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಈಗಾಗಲೇ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತೊಂದೆಡೆ ದರ್ಶನ್ ಹೇಳಿದಂತೆ ಮಾಡಿದ್ದೇವೆ ಎಂದು ಈ ಪ್ರಕರಣದ ಇತರ ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಇನ್ನುಳಿದ ಆರೋಪಿಗಳು ರೇಣುಕಾ ಸ್ವಾಮಿ ಅವರ ಬಾಯಲ್ಲಿ ಮಾಂಸದ ಬಿರಿಯಾನಿ ಹಾಕಿ ಹಿಂಸಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದೀಗ ಮತ್ತೊಂದು ಶಾಕಿಂಗ್‌ ಮಾಹಿತಿ ಬಹಿರಂಗವಾಗಿದ್ದು ಹತ್ಯೆಯಾದ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟಿದ್ದಾರೆ ಎಂದು ಹೇಳಲಾಗ್ತಿದೆ.. 

ಇದನ್ನೂ ಓದಿ-ನಯನತಾರಾ, ತ್ರಿಷಾ ಹಿಂದಿಕ್ಕಿದ ಕಿರಿಕ್‌ ಬೆಡಗಿ... ರಶ್ಮಿಕಾ ಮಂದಣ್ಣ ಹೊಸ ಸಿನಿಮಾ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ!!

ದರ್ಶನ್ ಅವರ ವಾದವೇ ಬೇರೆ. ಬರೀ ವಾರ್ನಿಂಗ್ ಕೊಡಲು ಹೇಳಿದ್ದೆ.. ಆದರೆ ಕೊಲೆ ಮಾಡುತ್ತಾರೆ ಎಂದುಕೊಂಡಿರಲಿಲ್ಲ.. ನಾನು ಎರಡು ಏಟು ಹೊಡೆದು ಸ್ಥಳದಿಂದ ತೆರಳಿದೆ ಆಮೇಲೆ ಏನಾಯಿತೋ ಗೊತ್ತಿಲ್ಲ ಎಂದು   ಪೊಲೀಸರಿಗೆ ದರ್ಶನ್ ಹೇಳಿದ್ದಾರಂತೆ.  

ಪೊಲೀಸರ ಮುಂದೆ ನಟಿ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದಾರೆ. ನಿಜವಾಗಿ ಈ ವಿಚಾರವನ್ನು ದರ್ಶನ್ ಗೆ ಹೇಳಿ ದೊಡ್ಡ ತಪ್ಪು ಮಾಡಿದೆ, ಹೇಳದೇ ಇದ್ದಿದ್ದರೆ ಇಂದು ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದಿದ್ದಾರೆ. ಇದೇ ವೇಳೆ ನ್ಯಾಯಾಲಯ ಅವರನ್ನು ಜೂನ್ 20ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನೊಂದೆಡೆ ಕೆಲವರು ನಟ ದರ್ಶನ್ ಮತ್ತು ಪವಿತ್ರ ಗೌಡಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.  

ಇದನ್ನೂ ಓದಿ-ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News