ವಿ.ಜಿ. ಸಿದ್ಧಾರ್ಥ್ ನಿಧನಕ್ಕೆ ಕಂಬನಿ ಮಿಡಿದ ಪುನೀತ್ ರಾಜ್ ಕುಮಾರ್

ಕಾಫಿ ಮೂಲಕ ಹಲವು ಜನರಿಗೆ ಉದ್ಯೋಗ ಸೃಷ್ಟಿಸಬಹುದು ಎಂದು ತೋರಿಸಿಕೊಟ್ಟ ಉದ್ಯಮಿ ವಿ.ಜಿ. ಸಿದ್ಧಾರ್ಥ್ ಎಂದು ಪುನೀತ್ ರಾಜ್ ಕುಮಾರ್ ತಮ್ಮ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಬರೆದಿದ್ದಾರೆ.

Last Updated : Jul 31, 2019, 01:34 PM IST
ವಿ.ಜಿ. ಸಿದ್ಧಾರ್ಥ್ ನಿಧನಕ್ಕೆ ಕಂಬನಿ ಮಿಡಿದ ಪುನೀತ್ ರಾಜ್ ಕುಮಾರ್ title=
Pic Courtesy: Twitter

ಬೆಂಗಳೂರು: ಹೆಸರಾಂತ ಉದ್ಯಮಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ್ ಅವರ ನಿಧನಕ್ಕೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಕಂಬನಿ ಮಿಡಿದಿದ್ದಾರೆ.

ಕಾಫಿ ಮೂಲಕ ಹಲವು ಜನರಿಗೆ ಉದ್ಯೋಗ ಸೃಷ್ಟಿಸಬಹುದು ಎಂದು ತೋರಿಸಿಕೊಟ್ಟ ಉದ್ಯಮಿ ವಿ.ಜಿ. ಸಿದ್ಧಾರ್ಥ್ ಎಂದು ತಮ್ಮ ಟ್ವಿಟ್ಟರ್ ಹ್ಯಾಂಡಲ್ ಸಿದ್ಧಾರ್ಥ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಪುನೀತ್ ರಾಜ್ ಕುಮಾರ್,
# ವಿ.ಜಿ.ಸಿದ್ದಾರ್ಥನ ಹಠಾತ್ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ನಮ್ಮ ಕಾಲದ ಮಹಾನ್ ಕ್ರಿಯಾತ್ಮಕ ಉದ್ಯಮಿ, ಕಾಫಿ ಅನೇಕರಿಗೆ ಉದ್ಯೋಗಾವಕಾಶಗಳನ್ನು ಹೇಗೆ ಸೃಷ್ಟಿಸುತ್ತದೆ ಎಂಬುದನ್ನು ಅವರು ನಮಗೆ ತೋರಿಸಿದರು. ಉದ್ಯಮಿಯಾಗಿ ಅವರ ಪ್ರಯಾಣ ಮತ್ತು ದಾನಕ್ಕಾಗಿ ಅವರು ಮಾಡಿದ ಕೆಲಸ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.
 

Trending News