ಹೊಸ ದಾಖಲೆ ಬರೆದ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ"ಯ "ದ್ವಾಪರ ದಾಟುತ" ಹಾಡು!

ಯೂಟ್ಯೂಬ್‌ನಲ್ಲಿ 8 ಮಿಲಿಯನ್‌ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್‌ನಲ್ಲಿ 2ನೇ ಸ್ಥಾನದಲ್ಲಿದೆ. ಟ್ವಿಟರ್‌ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್‌ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Jul 28, 2024, 10:33 AM IST
  • ಹೊಸ ದಾಖಲೆ ಬರೆದ "ಕೃಷ್ಣಂ ಪ್ರಣಯ ಸಖಿ"ಯ "ದ್ವಾಪರ ದಾಟುತ" ಹಾಡು
  • ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್‌ ರೀಲ್ಸ್‌ಗಳಲ್ಲಿ ಭಾರೀ ಟ್ರೆಂಡ್
  • ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, ಜಸಕರಣ್ ಸಿಂಗ್ ಹಾಡಿರುವ ಹಾಡು
ಹೊಸ ದಾಖಲೆ ಬರೆದ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ"ಯ "ದ್ವಾಪರ ದಾಟುತ" ಹಾಡು!     title=
"ದ್ವಾಪರ ದಾಟುತ" ಹಾಡು ಸಖತ್‌ ಟ್ರೆಂಡ್!

Krishnam Pranaya Sakhi Kannada Movie: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ "ಕಷ್ಣಂ ಪ್ರಣಯ ಸಖಿ" ಚಿತ್ರದ "ಮೈ ಮ್ಯಾರೇಜ್ ಇಸ್ ಫಿಕ್ಸ್ಡ್", "ಚಿನ್ನಮ್ಮ" ಹಾಗೂ "ದ್ವಾಪರ ದಾಟುತ" 3 ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಈ ಹಾಡುಗಳ ಪೈಕಿ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, ʼಸರಿಗಮಪʼ ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ "ದ್ವಾಪರ ದಾಟುತ" ಹಾಡು ಟ್ವಿಟರ್, ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್‌ ರೀಲ್ಸ್‌ಗಳಲ್ಲಿ  ಭಾರೀ ಟ್ರೆಂಡ್ ಹುಟ್ಟುಹಾಕಿದೆ.

ಇದನ್ನೂ ಓದಿ: ನನ್ನಲ್ಲಿ ʼಆʼ ಕೊರತೆ ಇದೆ ಅದಕ್ಕೆ... ಐಶ್ವರ್ಯ ಜೊತೆಗಿನ ದಾಂಪತ್ಯದ ಗುಟ್ಟು ಬಿಚ್ಚಿಟ್ಟ ಅಭಿಷೇಕ್‌ ಬಚ್ಚನ್! ಡಿವೋರ್ಸ್‌ ಖಚಿತವೇ?

ಯೂಟ್ಯೂಬ್‌ನಲ್ಲಿ 8 ಮಿಲಿಯನ್‌ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್‌ನಲ್ಲಿ 2ನೇ ಸ್ಥಾನದಲ್ಲಿದೆ. ಟ್ವಿಟರ್‌ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್‌ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ. "ಮುಂಗಾರು ಮಳೆ"ಯ ನಂತರ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಇದನ್ನೂ ಓದಿಪತಿಯೊಂದಿಗೆ ವಿಚ್ಛೇದನ..ಬಾಯ್‌ ಫ್ರೆಂಡ್‌ ಜೊತೆ ಬ್ರೇಕಪ್‌..50ನೇ ವಯಸ್ಸಿನಲ್ಲಿ ಹೊಸ ವ್ಯಕ್ತಿಗೆ ಸೆಟ್‌ ಹಾಕಿದ ಹಾಟ್‌ ಬ್ಯೂಟಿ..?

ಈಗಾಗಲೇ ಬಿಡುಗಡೆಯಾಗಿರುವ 3 ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಖುಷಿ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News