Kantara -1 teaser: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ

Kantara A Legend Chapter -1 Teaser: 'ಕಾಂತಾರ' ಜಗತ್ತನ್ನು ಪರಿಚಯಿಸುವ ಈ ಟೀಸರ್‍ನಲ್ಲಿ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ.

Written by - YASHODHA POOJARI | Edited by - Puttaraj K Alur | Last Updated : Nov 27, 2023, 08:41 PM IST
  • ಹೊಂಬಾಳೆ ಫಿಲ್ಮ್ಸ್ ನ ಬಹುನಿರೀಕ್ಷಿತ ‘ಕಾಂತಾರ ಅಧ್ಯಾಯ 1’ರ ಅದ್ಭುತ ಟೀಸರ್ ರಿಲೀಸ್
  • ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ‌
  • ವೀಕ್ಷಕರಲ್ಲಿ ಹೊಸ ಕೌತುಕವನ್ನು ಹುಟ್ಟುಹಾಕಿರುವ ನಟ-ನಿರ್ದೇಶಕ ರಿಷಭ್ ಶೆಟ್ಟಿ ಪಾತ್ರ
Kantara -1 teaser: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ title=
Kantara Chapter 1 teaser

ಬೆಂಗಳೂರು: ಕಳೆದ ವರ್ಷ ಬಿಡುಗಡೆಯಾಗಿ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ 'ಕಾಂತಾರ' ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ - ಅಧ್ಯಾಯ 1’ರ ಮೊದಲ ನೋಟ ಬಿಡುಗಡೆಯಾಗಿದ್ದು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ.

'ಕಾಂತಾರ' ಜಗತ್ತನ್ನು ಪರಿಚಯಿಸುವ ಈ ಟೀಸರ್‍ನಲ್ಲಿ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ. ಮೊದಲ ಭಾಗದ ಯಶಸ್ಸಿಗೆ ಕಾರಣವಾಗಿದ್ದ ಮತ್ತು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಸಂಗೀತವು ಈ ಟೀಸರ್ ಮೂಲಕ ವಾಪಸ್ಸಾಗಿದೆ. ಈ ಟೀಸರ್‍ನ ವೈಷಿಷ್ಟ್ಯವೆಂದರೆ ಚಿತ್ರವು 7 ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಪ್ರತಿಯೊಂದು ಭಾಷೆಯ ಟೀಸರ್ ಒಂದೊಂದು ರಾಗದ ಮೂಲಕ ಅಂತ್ಯವಾಗಲಿದೆ.

ಇದನ್ನೂ ಓದಿ: ​BBK10: ಬಿಗ್‌ ಬಾಸ್‌ ಮನೆಗೆ ಕ್ರಿಕೆಟರ್‌ ವೈಲ್ಡ್‌ ಕಾರ್ಡ್ ಎಂಟ್ರಿ.. ಈ ಸ್ಟೈಲಿಶ್ ಹಂಕ್ ಯಾರು ಗೊತ್ತೇ.!

'ಕಾಂತಾರ' ಚಿತ್ರವು ಕಳೆದ ವರ್ಷ ಜಗತ್ತಿನಾದ್ಯಂತ ಬಿಡುಗಡೆಯಾಗಿ ಅತ್ಯಂತ ಯಶಸ್ವಿಯಾಗಿತ್ತು. ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು, ಜನಪದ ಅಂಶಗಳನ್ನು ಬೆರೆಸಿ ಹೇಳಿದ ರೀತಿ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಪ್ರತಿ ಕಥೆಯನ್ನೂ ವಿಶಿಷ್ಟ ರೀತಿಯಲ್ಲಿ ಕಟ್ಟಿಕೊಡಬೇಕು ಎಂಬ ಹೊಂಬಾಳೆ ಫಿಲ್ಮ್ಸ್ ನ ಬದ್ಧತೆ 'ಕಾಂತಾರ - ಅಧ್ಯಾಯ 1' ರಲ್ಲೂ ಮುಂದುವರೆದಿದ್ದು, ದೈವತ್ವದ ಹೊಸ ವ್ಯಾಖ್ಯಾನ ಈ ಚಿತ್ರದಲ್ಲಾಗಲಿದೆ. ಕಳೆದ ವರ್ಷ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ 'ಕೆಜಿಎಫ್ 2' ಮತ್ತು 'ಕಾಂತಾರ' ಚಿತ್ರಗಳು ಜಾಗತಿಕವಾಗಿ 1,600 ಕೋಟಿ ರೂ. ಸಂಗ್ರಹಿಸಿತ್ತು. ಹೊಂಬಾಳೆಯ ಮುಂದಿನ ಚಿತ್ರ ಪ್ರಭಾಸ್ ನಟನೆಯ 'ಸಲಾರ್' ಈ ವರ್ಷದ ಬ್ಲಾಕ್‌ಬಸ್ಟರ್ ಆಗುವ ಲಕ್ಷಣಗಳು ಈಗಾಗಲೇ ಗೋಚರಿಸಿವೆ. ಈ ಬಹುನಿರೀಕ್ಷಿತ ಚಿತ್ರದ ಟ್ರೈಲರ್ ಡಿ.1ರಂದು ಬಿಡುಗಡೆಯಾಗಲಿದೆ.

'ಕಾಂತಾರ  ಅಧ್ಯಾಯ ೧' ಚಿತ್ರವು ಬಹುನಿರೀಕ್ಷಿತ ಚಿತ್ರವಾಗಿದ್ದು, ಮುಂದಿನ ವರ್ಷ 7 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಡಿಸೆಂಬರ್ ಅಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗಲಿದ್ದು, ತಾರಾಬಳಗದ ಬಗ್ಗೆ ಸದ್ಯದಲ್ಲೇ ಹೆಚ್ಚಿನ ಮಾಹಿತಿ ಹೊರಬೀಳಲಿದೆ. ಕುಂದಾಪುರ ಸಮೀಪದ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಸೋಮವಾರ ಈ ಚಿತ್ರದ ಸರಳಪೂಜಾ ಸಮಾರಂಭ ನಡೆಯಿತು. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಅಣ್ಣ ಮಂಜುನಾಥ್ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿದರು. ರಿಷಭ್ ಶೆಟ್ಟಿ ಪುತ್ರಿ ರಾಧ್ಯ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ರಶ್ಮಿಕಾ ರಣ್‌ಬೀರ್ ಜೊತೆಗೆ ಕಿಸ್ ಮಾಡಲು ಒಪ್ಪಿದಕ್ಕೆ ಕಾರಣ ರಿವಿಲ್:‌ ಹಾಗಾದ್ರೆ ಗೀತಾಂಜಲಿ ಏನ್ಹೇಳಿದ್ದಾರೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News