ಕೀರ್ತಿ ಸುರೇಶ್ ಗೆ ಸಿಕ್ತು ಬಂಪರ್ ಆಫರ್.. ಪ್ಯಾನ್ ಇಂಡಿಯಾ ಸ್ಟಾರ್ ಜೊತೆ ಲಕ್ಕಿ ಚಾನ್ಸ್ !

Keerthy Suresh New Movie With Allu Arjun : 'ಮಹಾನಟಿ' ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಗಳಿಸಿದ ನಟಿ ಕೀರ್ತಿ ಸುರೇಶ್. 

Written by - Chetana Devarmani | Last Updated : Mar 18, 2024, 03:12 PM IST
  • ಕೀರ್ತಿ ಸುರೇಶ್ʼಗೆ ತೆಲುಗಿನಲ್ಲಿ ಮತ್ತೊಂದು ಬಂಪರ್ ಆಫರ್
  • ಅಲ್ಲು ಅರ್ಜುನ್‌ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ!
  • ಅಟ್ಲಿ ನಿರ್ದೇಶನದ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್?
ಕೀರ್ತಿ ಸುರೇಶ್ ಗೆ ಸಿಕ್ತು ಬಂಪರ್ ಆಫರ್.. ಪ್ಯಾನ್ ಇಂಡಿಯಾ ಸ್ಟಾರ್ ಜೊತೆ ಲಕ್ಕಿ ಚಾನ್ಸ್ ! title=

Keerthy Suresh New Movie : 'ಮಹಾನಟಿ' ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಗಳಿಸಿದ ನಟಿ ಕೀರ್ತಿ ಸುರೇಶ್. ಆ ಚಿತ್ರದಲ್ಲಿನ ಅಭಿನಯಕ್ಕಾಗಿ ಕೀರ್ತಿ ರಾಷ್ಟ್ರ ಪ್ರಶಸ್ತಿ ಪಡೆದರು. ಇದೀಗ ಮತ್ತೊಂದು ಬಂಪರ್‌ ಆಫರ್‌ ಕೀರ್ತಿ ಸುರೇಶ್‌ ಅವರನ್ನು ಅರಸಿ ಬಂದಿದೆ. 

ನಟಿ ಕೀರ್ತಿ ಸುರೇಶ್ ಇತ್ತೀಚೆಗೆ ದಸರಾ ಚಿತ್ರದ ಮೂಲಕ ಬಂಪರ್ ಹಿಟ್ ಪಡೆದರು. ಈ ಚಿತ್ರದ ನಂತರ ಅವರು ತೆಲುಗಿನಲ್ಲಿ ಚಿರಂಜೀವಿ ಅಭಿನಯದ ಭೋಲಾ ಶಂಕರ್ ಚಿತ್ರದಲ್ಲಿ ನಟಿಸಿದರು. ಈ ಚಿತ್ರವು ಆಗಸ್ಟ್ 11, 2023 ರಂದು ಬಿಡುಗಡೆಯಾಗಿ ಡಿಸಾಸ್ಟರ್ ಟಾಕ್ ಪಡೆದುಕೊಂಡಿದೆ. ಮೆಹರ್ ರಮೇಶ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ತಮಿಳಿನ ವೇದಾಲಂ ಚಿತ್ರದ ರಿಮೇಕ್ ಅಗಿದೆ. ತಮನ್ನಾ ನಾಯಕಿಯಾಗಿ ನಟಿಸಿದ್ದಾರೆ. ಭೋಲಾ ಶಂಕರ್ ಸಿನಿಮಾದಲ್ಲಿ ಕೀರ್ತಿ ಸುರೇಶ್ ಚಿರಂಜೀವಿಯ ತಂಗಿಯಾಗಿ ಕಾಣಿಸಿಕೊಂಡಿದ್ದರು. 

ಇದನ್ನೂ ಓದಿ: ದಂತದ ಬೊಂಬೆ ನೀತಾ ಅಂಬಾನಿ ನಿಜವಾದ ವಯಸ್ಸೆಷ್ಟು ಗೊತ್ತೇ.. ಈ ಅಂದಕ್ಕೆ ಕಾರಣ ಪ್ರತೀ ದಿನ ಕುಡಿಯುವ ಈ ಜ್ಯೂಸ್​​ !

 ಕೀರ್ತಿ ಸುರೇಶ್ʼಗೆ ತೆಲುಗಿನಲ್ಲಿ ಮತ್ತೊಂದು ಬಂಪರ್ ಆಫರ್ 

ಇದೀಗ ನಟಿ ಕೀರ್ತಿ ಸುರೇಶ್‌ ಅವರಿಗೆ ತೆಲುಗಿನಲ್ಲಿ ಮತ್ತೊಂದು ಬಂಪರ್ ಆಫರ್ ಸಿಕ್ಕಿದೆಯಂತೆ. ಈಗಾಗಲೇ ತೆಲುಗಿನಲ್ಲಿ ಸಾಲು ಸಾಲು ಚಿತ್ರಗಳ ಮೂಲಕ ಜನಪ್ರಿಯತೆ ಗಳಿಸಿರುವ ಕೀರ್ತಿ ಸುರೇಶ್‌ ಅವರಿಗೆ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಸಿಕ್ಕಿದೆಯಂತೆ. ಅಲ್ಲು ಅರ್ಜುನ್ ಮತ್ತು ಅಟ್ಲಿ ಸಿನಿಮಾದಲ್ಲಿ ಕೀರ್ತಿಗೆ ಅವಕಾಶ ಸಿಕ್ಕಿದೆ ಎಂಬುದು ಲೇಟೆಸ್ಟ್ ಟಾಕ್ ಆಗಿದೆ. ಸದ್ಯ ಅಲ್ಲು ಅರ್ಜುನ್ ಅವರು ಸುಕುಮಾರ್ ನಿರ್ದೇಶನದ ಪುಷ್ಪ 2 ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಅಟ್ಲಿ ನಿರ್ದೇಶನದ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ನಾಯಕಿ?

ಪುಷ್ಪ 2 ಸಿನಿಮಾದ ನಂತರ ಅಲ್ಲು ಅರ್ಜುನ್ ಜವಾನ್ ನಿರ್ದೇಶಕ ಅಟ್ಲಿ ನಿರ್ದೇಶನದಲ್ಲಿ ಬರಲಿರುವ ಮಾಸ್ ಆಕ್ಷನ್ ಸಿನಿಮಾ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿ ಸ್ಟಾರ್ ನಟಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರವನ್ನು ಸನ್ ಫಿಶರ್ಸ್ ನಿರ್ಮಿಸಲಿದೆ ಎನ್ನಲಾಗ್ತಿದೆ. ಅನಿರುದ್ಧ್ ಸಂಗೀತ ನೀಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kerebete: ಮಲೆನಾಡಿನ ‘ಕೆರೆಬೇಟೆ’ಗೆ ಡಾಲಿ, ಧ್ರುವ, ನೆನಪಿರಲಿ ಪ್ರೇಮ್ ಮೆಚ್ಚುಗೆ !

ಒಟಿಟಿಗೆ ಎಂಟ್ರಿ ಕೊಟ್ಟ ಕೀರ್ತಿ ಸುರೇಶ್‌ : 

ಕೀರ್ತಿ ಸುರೇಶ್ ಒಂದೆಡೆ ಸಿನಿಮಾಗಳಲ್ಲಿ ನಟಿಸುತ್ತಿದ್ದರೆ.. ಇನ್ನೊಂದೆಡೆ ವೆಬ್ ಸೀರಿಸ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಕೀರ್ತಿ ಸುರೇಶ್ ಮತ್ತು ರಾಧಿಕಾ ಆಪ್ಟೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ  ವೆಬ್ ಸರಣಿಯು ತಯಾರಾಗುತ್ತಿದೆ. ಧರ್ಮರಾಜ್ ಶೆಟ್ಟಿ ಪ್ಯಾನ್ ಇಂಡಿಯಾ ವೆಬ್ ಸರಣಿಯನ್ನು ನಿರ್ದೇಶಿಸುತ್ತಿದ್ದಾರೆ. 

ಹಿಂದಿಯ ಖ್ಯಾತ ನಿರ್ಮಾಪಕ ಆದಿತ್ಯ ಚೋಪ್ರಾ ಈ ವೆಬ್ ಸರಣಿಯನ್ನು ನಿರ್ಮಿಸುತ್ತಿದ್ದಾರೆ. ಸದ್ಯ ಚಿತ್ರೀಕರಣ ನಡೆಯುತ್ತಿದ್ದು, ಕೀರ್ತಿ ಸುರೇಶ್ ಜೊತೆಗೆ ರಾಧಿಕಾ ಆಪ್ಟೆ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News