ಬಿಡುಗಡೆಗೂ ಮುನ್ನ ಸದ್ದು ಮಾಡಿದ ‘ಕೆಂಡ’: ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್’ಗೆ ಆಯ್ಕೆ!

Sandalwood News: ಈ ಹೊತ್ತಿನಲ್ಲಿ ಕೆಂಡದ ಬಗೆಗಿನ ಮತ್ತೊಂದು ಖುಷಿಯ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಅದರನ್ವಯ ಹೇಳೋದಾದರೆ, ಕೆಂಡ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್’ಗೆ ಆಯ್ಕೆಯಾಗಿದೆ.

Written by - YASHODHA POOJARI | Last Updated : Apr 23, 2024, 04:40 PM IST
    • ಕೆಂಡದ ಬಗೆಗಿನ ಮತ್ತೊಂದು ಖುಷಿಯ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ
    • ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣ ಮಾಡಿರುವ ಸಿನಿಮಾ
    • ಕೆಂಡ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್’ಗೆ ಆಯ್ಕೆಯಾಗಿದೆ
ಬಿಡುಗಡೆಗೂ ಮುನ್ನ ಸದ್ದು ಮಾಡಿದ ‘ಕೆಂಡ’: ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್’ಗೆ ಆಯ್ಕೆ! title=
Kenda Cinema

Sandalwood News: ಸಹದೇವ್ ಕೆಲವಡಿ ನಿರ್ದೇಶದ ‘ಕೆಂಡ’ ಚಿತ್ರವೀಗ ಬಿಡುಗಡೆಯ ಹೊಸ್ತಿಲಿನಲ್ಲಿದೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣ ಮಾಡಿರುವ ಈ ಸಿನಿಮಾ ಭಿನ್ನ ಜಾಡಿನ ಕಥಾನಕವನ್ನು ಒಳಗೊಂಡಿದೆ ಎಂಬ ವಿಚಾರ ಈಗಾಗಲೇ ಸ್ಪಷ್ಟಗೊಂಡಿದೆ.

ಈ ಹೊತ್ತಿನಲ್ಲಿ ಕೆಂಡದ ಬಗೆಗಿನ ಮತ್ತೊಂದು ಖುಷಿಯ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಅದರನ್ವಯ ಹೇಳೋದಾದರೆ, ಕೆಂಡ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್’ಗೆ ಆಯ್ಕೆಯಾಗಿದೆ.

ಇದನ್ನೂ ಓದಿ: ಬೆಳಗ್ಗೆ ಎದ್ದಂತೆ ಈ ಒಣಹಣ್ಣನ್ನು ತಿನ್ನಿ: ಕೇವಲ 5 ದಿನದಲ್ಲಿ ಸೊಂಟದ ಸುತ್ತ ಸಂಗ್ರಹವಾದ ಕಠಿಣ ಬೊಜ್ಜು ಯಾವುದೇ ಶ್ರಮವಿಲ್ಲದೆ ಈಸಿಯಾಗಿ ಇಳಿಯುತ್ತೆ!

ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ ಕೆಂಡ ಪ್ರವೇಶ ಪಡೆದಿದೆ. ಇದು ನಿಜಕ್ಕೂ ಕೇವಲ ಚಿತ್ರತಂಡಕ್ಕೆ ಮಾತ್ರವಲ್ಲದೇ, ಕನ್ನಡ ಚಿತ್ರರಂಗದ ಪಾಲಿಗೂ ಖುಷಿಯ ಸಂಗತಿ.

ಈ ಫಿಲಂ ಫೆಸ್ಟಿವಲ್ ಪ್ರತಿಷ್ಠೆಯನ್ನು ಕಾಯ್ದುಕೊಂಡು ಬಂದಿದೆ. ಇದಕ್ಕೆ ಆಯ್ಕೆಯಾಗಬೇಕೆಂಬುದೇ ಅದೆಷ್ಟೋ ಸಿನಿಮಾ ಮಂದಿಯ ಕನಸಾಗಿರುತ್ತದೆ. ಹಾಗಂತ, ಅದೇನು ಸಲೀಸಿನ ಸಂಗತಿಯಲ್ಲ. ಅಲ್ಲಿ ನಾನಾ ಪರೀಕ್ಷೆಗಳಿಗೊಡ್ಡಿಕೊಂಡು ಜಯಿಸಿಕೊಂಡರೆ ಮಾತ್ರವೇ ಸಿನಿಮಾವೊಂದು ಆಯ್ಕೆಯಾಗಲು ಸಾಧ್ಯ. ಎಲ್ಲ ರೀತಿಯಿಂದಲೂ ಗುಣಮಟ್ಟ ಕಾಯ್ದುಕೊಂಡ ಸಿನಿಮಾಗಳಿಗೆ ಮಾತ್ರವೇ ಆ ಅವಕಾಶ ಸಿಗುತ್ತದೆ. ಅಂಥಾದ್ದನ್ನೆಲ್ಲ ದಾಟಿಕೊಂಡು ಆಯ್ಕೆಯಾಗಿದೆಯೆಂದರೆ, ಕೆಂಡದ ಅಸಲೀ ಕಸುವಿನ ಬಗ್ಗೆ ಹೆಚ್ಚೇನೂ ಬಿಡಿಸಿ ಹೇಳುವಂತಿಲ್ಲ!

ಈ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆಯಲ್ಲಿಯೇ ಸಹದೇವ್ ಕೆಲವಡಿ ಗೆಲುವಿನ ಮೆಟ್ಟಿಲೊಂದನ್ನು ಹತ್ತಿ ನಿಂತಂತಾಗಿದೆ. ಅಂದಹಾಗೆ, ಈ ಚಿತ್ರ ಇದೇ ಜೂನ್ ತಿಂಗಳಿನಲ್ಲಿ ತೆರೆಕಾಣಲಿದೆ.

ಇದನ್ನೂ ಓದಿ: ಈ ಬಳ್ಳಿಯ ಎಲೆಯನ್ನು ಅರೆದು ಹಚ್ಚಿ: ಯಾವುದೇ ಅಡ್ಡಪರಿಣಾಮವಿಲ್ಲದೆ ಕೇವಲ 10 ನಿಮಿಷದಲ್ಲಿ ನೈಸರ್ಗಿಕವಾಗಿ ಕಪ್ಪಾಗುತ್ತೆ ಬಿಳಿಕೂದಲು!

ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News