ಮೀನು ಬೇಟೆಗೆ ಹೊರಟ ನಾಯಕ ಗೌರಿಶಂಕರ್; ಕುತೂಹಲ ಹೆಚ್ಚಿಸಿದ 'ಕೆರೆಬೇಟೆ' ಮೋಷನ್ ಪೋಸ್ಟರ್

Kerebete Motion Poster Release: ನಿರ್ದೇಶಕ ರಾಜ್‌ಗುರು ಅವರಿಗೆ ಇದು ಚೊಚ್ಚಲ ಸಿನಿಮಾ. ಈ ಮೊದಲು ನಿರ್ದೇಶಕ ಪವನ್ ಒಡೆಯರ್ ಜೊತೆ ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ಜೆಸ್ಸಿ, ರೆಮೋ ಹಾಗೂ ಇನ್ನು ಅನೇಕ ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ಹೊಂದ್ದು ಇದೀಗ ಕೆರೆಬೇಟೆ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ  ರಾಜ್‌ಗುರು. 

Written by - Yashaswini V | Last Updated : Oct 27, 2023, 11:40 AM IST
  • 'ಕೆರೆಬೇಟೆ' ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ.
  • ಮೊದಲ ಬಾರಿಗೆ ಮೀನು ಬೇಟೆಯನ್ನು ತೆರೆಮೇಲೆ ತರುತ್ತಿದ್ದಾರೆ ನಿರ್ದೇಶಕ ರಾಜ್‌ಗುರು.
  • ನಾಯಕನಾಗಿ ಗೌರಿಶಂಕರ್ ಎಸ್‌ಆರ್‌ಜಿ ಕಾಣಿಸಿಕೊಂಡಿದ್ದಾರೆ.
ಮೀನು ಬೇಟೆಗೆ ಹೊರಟ ನಾಯಕ ಗೌರಿಶಂಕರ್; ಕುತೂಹಲ ಹೆಚ್ಚಿಸಿದ 'ಕೆರೆಬೇಟೆ' ಮೋಷನ್ ಪೋಸ್ಟರ್ title=

KereBete: 'ಕೆರೆಬೇಟೆ' ಟೈಟಲ್ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಬಾರಿ ಕುತೂಹಲ ಮೂಡಿಸಿರುವ ಸಿನಿಮಾ. ಈಗಾಗಲೇ ಟೈಟಲ್ ಪೋಸ್ಟರ್ ರಿಲೀಸ್ ಮಾಡಿರುವ ಸಿನಿಮಾ ತಂಡ ಇದೀಗ ಮೋಷನ್ ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. 

'ಕೆರೆಬೇಟೆ' ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ. ಮೊದಲ ಬಾರಿಗೆ ಮೀನು ಬೇಟೆಯನ್ನು ತೆರೆಮೇಲೆ ತರುತ್ತಿದ್ದಾರೆ ನಿರ್ದೇಶಕ ರಾಜ್‌ಗುರು. ನಾಯಕನಾಗಿ ಗೌರಿಶಂಕರ್ ಎಸ್‌ಆರ್‌ಜಿ  ಕಾಣಿಸಿಕೊಂಡಿದ್ದಾರೆ. ಈಗಾಗಲೇ ಎರಡು ಸಿನಿಮಾಗಳನ್ನು ಮಾಡಿರುವ ಗೌರಿಶಂಕರ್ ಇದೀಗ ವಿಭಿನ್ನವಾದ ಒಂದೊಳ್ಳೆ ಹಳ್ಳಿ ಸೊಗಡಿನ ಸಿನಿಮಾ ಮೂಲಕ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ. 

ಸದ್ಯ ರಿಲೀಸ್ ಆಗಿರುವ ಮೋಷನ್ ಪೋಸ್ಟರ್‌ನಲ್ಲಿ ನಾಯಕ ಗೌರಿಶಂಕರ್ ಕೂಣಿ ಹಿಡಿದು ಕೆರೆಯಲ್ಲಿ ಮೀನು ಬೇಟೆಯಾಡುತ್ತಿದ್ದಾರೆ. ಉದ್ದ ಕೂದಲು ಹಾಗೂ ದಾಡಿ ಬಿಟ್ಟುಕೊಂಡು ರಾ ಲುಕ್‌ನಲ್ಲಿ ನಾಯಕ ಕಾಣಿಸಿಕೊಂಡಿದ್ದು ಅವರ ಹಿಂದೆ ದೊಡ್ಡದೊಂದು ಗುಂಪೇ ಇದೆ. ಮೊದಲ ಬಾರಿಗೆ ಮೀನುಬೇಟೆಯನ್ನು ತೆರೆಮೇಲೆ ತರುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ ರಾಜ್‌ಗುರು ಮತ್ತು ತಂಡ.  

ಇದನ್ನೂ ಓದಿ- ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ ʼಫೀನಿಕ್ಸ್ʼ ಚಿತ್ರ ಆರಂಭ..! 

ಅಂದಹಾಗೆ ನಿರ್ದೇಶಕ ರಾಜ್‌ಗುರು ಅವರಿಗೆ ಇದು ಚೊಚ್ಚಲ ಸಿನಿಮಾ. ಈ ಮೊದಲು ನಿರ್ದೇಶಕ ಪವನ್ ಒಡೆಯರ್ ಜೊತೆ ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ಜೆಸ್ಸಿ, ರೆಮೋ ಹಾಗೂ ಇನ್ನು ಅನೇಕ ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ಹೊಂದ್ದು ಇದೀಗ ಕೆರೆಬೇಟೆ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ  ರಾಜ್‌ಗುರು. 

ಮಲೆನಾಡಿನವರೇ ಆದ ರಾಜ್‌ಗುರು ಚಿಕ್ಕವಯಸ್ಸಿನಿಂದ ಕೆರೆಬೇಟೆ ನೋಡುತ್ತಾ, ಆಡುತ್ತಾ ಬೆಳೆದವರು. ಅದನ್ನೇ ಇಟ್ಟುಕೊಂಡು ಈಗ ಸಿನಿಮಾ ಮಾಡಿರುವುದು ವಿಶೇಷ. ಮಲೆನಾಡಿನ ಜೀವನ ಶೈಲಿಯನ್ನು ಅಷ್ಟೆ ನೈಜ್ಯವಾಗಿ ಕಟ್ಟಿಕೊಡುವ ಪ್ರಯತ್ನ ಈ ಸಿನಿಮಾದಲ್ಲಿ ಮಾಡಲಾಗಿದೆ. 

ಇದನ್ನೂ ಓದಿ- ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಕಂಗನಾ ರಣಾವತ್..! ಫೋಟೋಸ್‌ ಇಲ್ಲಿವೆ

ಈ ಸಿನಿಮಾದಲ್ಲಿ ಗೌರಿಶಂಕರ್ ಅವರಿಗೆ ನಾಯಕಿಯಾಗಿ ಬಿಂದು ಶಿವರಾಜ್ ನಟಿಸಿದ್ದಾರೆ. ಬಿಂದು ಅವರಿಗೆ ಇದು ಮೊದಲ ಸಿನಿಮಾ. ಇನ್ನೂ ಉಳಿದಂತೆ ಸಿನಿಮಾದಲ್ಲಿ ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಗಗನ್ ಬದೇರಿಯಾ ಸಂಗೀತ  ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾಗೆ ನಾಯಕ ಗೌರಿಶಕಂಕರ್ ಅವರ ಜನಮನ ಸಿನಿಮಾಸ್ ಬ್ಯಾನರ್‌ನಲ್ಲಿ ಅವರ ಸಹೋದರ ಜೈಶಂಕರ್ ಪಟೇಲ್ ಬಂಡವಾಳ ಹೂಡಿದ್ದಾರೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದ್ದು ಸುಮಾರು 70ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ ಮೋಷನ್ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿದ್ದು ಮುಂದಿನ ವರ್ಷದ  ಪ್ರಾರಂಭದಲ್ಲಿ ತೆರೆಮೇಲೆ ಬರುವ ಪ್ಲಾನ್ ಮಾಡಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News