ಪ್ರಧಾನಿ ಮೋದಿ ಭೇಟಿಯಾದ ಅಶ್ವಿನಿ ಪುನೀತ್, ರಾಕಿಂಗ್ ಸ್ಟಾರ್ ಯಶ್ & ರಿಷಬ್ ಶೆಟ್ಟಿ...!

ಅಪ್ಪು ನಮ್ಮನ್ನ ಅಗಲಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವುಕ ಪೋಸ್ಟ್ ಹಾಕಿದ್ದರು. ಜೊತೆಗೆ ಅಪ್ಪು ಬಗ್ಗೆ ಹಲವು ಕಡೆ ಗುಣಗಾನ ಮಾಡಿದ್ದರು. ಇದೀಗ ಬೆಂಗಳೂರಿಗೆ ಆಗಮಿಸಿದ ಮೋದಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರನ್ನ ಕೂಡ ಭೇಟಿಯಾಗಿ ಧೈರ್ಯ ಹೇಳಿದ್ದಾರೆ

Written by - YASHODHA POOJARI | Last Updated : Feb 13, 2023, 03:25 PM IST
  • ಪ್ರಧಾನಿ ನರೇಂದ್ರ ಮೋದಿ ಅವರು ರಿಷಬ್ ಶೆಟ್ಟಿ ಅವರೊಂದಿಗೆ ಕಾಂತಾರ ಸಿನಿಮಾ ಬಗ್ಗೆ ಒಂದಷ್ಟು ವಿಚಾರವನ್ನು ಮಾತನಾಡಿದ್ದಾರೆ ಅಂತ ಹೇಳಲಾಗುತ್ತಿದೆ.
  • ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತಾ ಶಾ ಕೂಡ ಕರ್ನಾಟಕಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂತಾರ ಸಿನಿಮಾ ಬಗ್ಗೆ ಮಾತನಾಡಿ ಪ್ರತಿಯೊಬ್ಬ ಕನ್ನಡಿಗನು ಹುಬ್ಬೇರಿಸೋ ಲೆವೆಲ್ಲಿಗೆ ಖುಷಿ ಕೊಟ್ಟಿದ್ದರು.
  • ಇದೀಗ ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಿತ್ತಿರೋ ಏರೋ ಇಂಡಿಯಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ರಾಜ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಸಿನಿಮಾ ಬಗ್ಗೆ ಚರ್ಚಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿಯಾದ  ಅಶ್ವಿನಿ ಪುನೀತ್, ರಾಕಿಂಗ್ ಸ್ಟಾರ್ ಯಶ್ & ರಿಷಬ್ ಶೆಟ್ಟಿ...! title=
Modi With Sandalwood

ಬೆಂಗಳೂರು: ನಿನ್ನೆ ರಾಜ ಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಅವರೊಂದಿಗೆ ಔತಣಕೂಟದಲ್ಲಿ ರಾಕಿಭಾಯ್ ಯಶ್, ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿ ಹಲವರು ಭಾಗಿಯಾಗಿದ್ದಾರೆ. ಇದೇ ವೇಳೆ ಚಂದನವನದ ತಾರಾಬಳಗ ಪಿಎಂ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. 

ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ರಿಷಬ್ ಶೆಟ್ಟಿ ಅವರೊಂದಿಗೆ ಕಾಂತಾರ ಸಿನಿಮಾ ಬಗ್ಗೆ ಒಂದಷ್ಟು ವಿಚಾರವನ್ನು ಮಾತನಾಡಿದ್ದಾರೆ ಅಂತ ಹೇಳಲಾಗುತ್ತಿದೆ.  ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತಾ ಶಾ ಕೂಡ ಕರ್ನಾಟಕಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂತಾರ ಸಿನಿಮಾ ಬಗ್ಗೆ ಮಾತನಾಡಿ ಪ್ರತಿಯೊಬ್ಬ ಕನ್ನಡಿಗನು ಹುಬ್ಬೇರಿಸೋ ಲೆವೆಲ್ಲಿಗೆ ಖುಷಿ ಕೊಟ್ಟಿದ್ದರು. ಇದೀಗ ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಿತ್ತಿರೋ ಏರೋ ಇಂಡಿಯಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ರಾಜ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಸಿನಿಮಾ ಬಗ್ಗೆ ಚರ್ಚಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಕೆಜಿಎಫ್ ಬಳಿಕ ನ್ಯಾಷನಲ್ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ಕೂಡ  ಪ್ರಧಾನಿ ಮೋದಿ ಜೊತೆ ಒಂದಷ್ಟು ಸಮಯ ಕಳೆದಿದ್ದಾರೆ. 

ಇದನ್ನೂ ಓದಿ- ಒಂದಲ್ಲ ಎರಡಲ್ಲ.. ನಾಲ್ಕು ಮದುವೆಯಾಗಿದ್ದರು ಈ ಬಾಲಿವುಡ್‌ ಸ್ಟಾರ್‌.!

ಇನ್ನು ಅಪ್ಪು ನಮ್ಮನ್ನ ಅಗಲಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವುಕ ಪೋಸ್ಟ್ ಹಾಕಿದ್ದರು. ಜೊತೆಗೆ ಅಪ್ಪು ಬಗ್ಗೆ ಹಲವು ಕಡೆ ಗುಣಗಾನ ಮಾಡಿದ್ದರು. ಇದೀಗ ಬೆಂಗಳೂರಿಗೆ ಆಗಮಿಸಿದ ಮೋದಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರನ್ನ ಕೂಡ ಭೇಟಿಯಾಗಿ ಧೈರ್ಯ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್
ಅಭಿನಯದ ಗಂಧದಗುಡಿ ಚಿತ್ರದ ಬಗ್ಗೆಯೂ ಮಾತನಾಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ- ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ  ಆರತಕ್ಷತೆಯಲ್ಲಿ ಭೂಮಿ ಪೆಡ್ನೇಕರ್

ಇದೇ ಸಂದರ್ಭದಲ್ಲಿ ಅಶ್ವಿನಿ ಮೋದಿ ಜೊತೆ ಫೋಟೋ ತೆಗಿಸಿಕೊಂಡಿದ್ದಾರೆ. ಅಪ್ಪು ಇರೋವಾಗಲೂ ಪುನೀತ್ ಮತ್ತು ಅಶ್ವಿನಿ ಮೋದಿ ಅವರ ಜೊತೆ ಯಾವುದೋ ಸಂದರ್ಭದಲ್ಲಿ ಫೋಟೋ ತೆಗಿಸಿಕೊಂಡಿದ್ದರು. ಆದೇನೆ ಇರಲಿ ದೇಶದ ಪ್ರಧಾನಿ ಮೋದಿಯ ಸರಳತೆಗೆ ಇದೀಗ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News