ಕನ್ನಡಿಗರ ಪರವಾಗಿ ತಮಿಳು ನಟ ಸಿದ್ಧಾರ್ಥ ಕ್ಷಮೆ ಕೇಳುತ್ತೇನೆ : ಪ್ರಕಾಶ್‌ ರಾಜ್‌

Karnataka bandh : ತಮಿಳು ನಟ ಸಿದ್ಧಾರ್ಥ್ ಸೆಪ್ಟೆಂಬರ್ 28 ರಂದು 'ಚಿಕ್ಕು' ಸಿನಿಮಾದ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸಿದ್ಧಾರ್ಥ ಪತ್ರಿಕಾ ಗೋಷ್ಠಿಯನ್ನು ಸ್ಥಗಿತಗೊಳಿಸಿದ್ದರು. ಈ ವಿಚಾರವಾಗಿ ಪ್ರಕಾಶ್‌ ರಾಜ್‌ ಬೇಸರ ವ್ಯಕ್ತಪಡಿಸಿದ್ದರು.

Written by - Krishna N K | Last Updated : Sep 29, 2023, 05:26 PM IST
  • ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದೆ.
  • ತಮಿಳು ನಟ ಸಿದ್ಧಾರ್ಥ್ ಸೆಪ್ಟೆಂಬರ್ 28 ರಂದು 'ಚಿಕ್ಕು' ಸಿನಿಮಾದ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದರು.
  • ಸಿದ್ಧಾರ್ಥ ಸಿನಿಮಾ ಪ್ರಚಾರಕ್ಕೆ ಕರವೇ ಕಾರ್ಯಕರ್ತರು ಅಡ್ಡಿ ಪಡಿಸಿದ ವಿಚಾರವಾಗಿ ನಟ ಪ್ರಕಾಶ್‌ ರಾಜ್‌ ಧ್ವನಿ ಎತ್ತಿದ್ದಾರೆ.
ಕನ್ನಡಿಗರ ಪರವಾಗಿ ತಮಿಳು ನಟ ಸಿದ್ಧಾರ್ಥ ಕ್ಷಮೆ ಕೇಳುತ್ತೇನೆ : ಪ್ರಕಾಶ್‌ ರಾಜ್‌ title=

Prakash raj on Siddharth : ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದೆ. ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸ್ಯಾಂಡಲ್‌ವುಡ್‌ ಕಲಾವಿದರು ಸಹ ಬಂದ್‌ಗೆ ಬೆಂಬಲ ನೀಡಿದ್ದಾರೆ. ಇದೀಗ ನಿನ್ನೆ ತಮಿಳು ನಟ ಸಿದ್ಧಾರ್ಥ ಸಿನಿಮಾ ಪ್ರಚಾರಕ್ಕೆ ಕರವೇ ಕಾರ್ಯಕರ್ತರು ಅಡ್ಡಿ ಪಡಿಸಿದ ವಿಚಾರವಾಗಿ ನಟ ಪ್ರಕಾಶ್‌ ರಾಜ್‌ ಧ್ವನಿ ಎತ್ತಿದ್ದಾರೆ.

ಹೌದು.. ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಇದರ ಬೆನ್ನಲೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಕನ್ನಡ ಪರ ಸಂಘಟನೆಗಳು, ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಇಂದು ರಾಜ್ಯ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ. ಕಾವೇರಿ ವಿಚಾರ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: 6.5 ಲಕ್ಷ ಲಂಚ ಕೇಳಿದ್ರು... ಸೆನ್ಸಾರ್ ಮಂಡಳಿ ವಿರುದ್ಧ ವಿಶಾಲ್ ಗಂಭೀರ ಆರೋಪ!

ಇಂತಹ ಪರಿಸ್ಥಿತಿಯಲ್ಲಿ ತಮಿಳು ನಟ ಸಿದ್ಧಾರ್ಥ್ ಸೆಪ್ಟೆಂಬರ್ 28 ರಂದು 'ಚಿಕ್ಕು' ಸಿನಿಮಾದ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸಿದ್ಧಾರ್ಥ ಪತ್ರಿಕಾ ಗೋಷ್ಠಿಯನ್ನು ಸ್ಥಗಿತಗೊಳಿಸಿದ್ದರು. ಈ ವಿಚಾರವಾಗಿ ಪ್ರಕಾಶ್‌ ರಾಜ್‌ ಬೇಸರ ವ್ಯಕ್ತಪಡಿಸಿದ್ದರು.

ಪ್ರಕರಣದ ಕುರಿತು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ʼʼಕಾವೇರಿ ನಮ್ಮದು.. ಹೌದು.. ನಮ್ಮದೇ.. ಆದರೆ.. ದಶಕಗಳ ಈ ಸಮಸ್ಯೆಯನ್ನು ಪರಿಹರಿಸಲಾರದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳನ್ನು.. ನಾಯಕರನ್ನು ಪ್ರಶ್ನಿಸದೆ.. ಕೇಂದ್ರ ಸರ್ಕಾರಕ್ಕೆ ಒತ್ತಡ ತರದ ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ.. ಹೀಗೆ ಅಸಹಾಯಕ ಜನಸಾಮಾನ್ಯರನ್ನು.. ಕಲಾವಿದರನ್ನು ಹಿಂಸಿಸುವುದು ತಪ್ಪು.. ಒಬ್ಬ ಕನ್ನಡಿಗನಾಗಿ ಸಹ್ರುದಯ ಕನ್ನಡಿಗರ ಪರವಾಗಿ ಕ್ಷಮಿಸಿʼʼ ಸಿದ್ಧಾರ್ಥ್‌ ಎಂದು ಕ್ಷಮೆಯಾಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News