ಸಿಎಂ ಯೋಗಿ ಕಾಲು ಮುಟ್ಟಿ ಆಶೀರ್ವಾದ ಪಡೆದ ತಲೈವಾ ರಜನಿ..!

CM Yogi Adityanath : ನಟ ರಜನಿಕಾಂತ್‌ ಅವರು ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾದರು, ಈ ವೇಳೆ ಅವರು ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

Written by - Krishna N K | Last Updated : Aug 20, 2023, 11:09 AM IST
  • ನಟ ರಜನಿಕಾಂತ್‌ ಅವರು ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾಗಿದ್ದಾರೆ.
  • ರಜನಿ ಯೋಗಿ ಜೀ ಕಾಲು ಮುಟ್ಟಿ ನಮಸ್ಕರಿಸುವ ವಿಡಿಯೋ ವೈರಲ್‌ ಆಗಿದೆ.
  • ಸೂಪರ್‌ ಸ್ಟಾರ್‌ ರಜನಿ ಸರಳತೆ ನೋಡಿ ಅವರ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿಎಂ ಯೋಗಿ ಕಾಲು ಮುಟ್ಟಿ ಆಶೀರ್ವಾದ ಪಡೆದ ತಲೈವಾ ರಜನಿ..! title=

Rajinikanth Jailer : ತಮಿಳು ನಟ ರಜನಿಕಾಂತ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ ವಿಡಿಯೋವೊಂದು ಇಂಟರ್‌ನೆಟ್‌ನಲ್ಲಿ ಸಖತ್‌ ವೈರಲ್‌ ಆಗಿದೆ. ರಜನಿ ಸರಳತೆ ನೋಡಿ ಅವರ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೌದು.. ಶನಿವಾರ ಲಕ್ನೋದಲ್ಲಿ ನಟ ರಜನಿಕಾಂತ್‌ ಅವರು ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾದರು, ಈ ವೇಳೆ ಅವರು ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ರಜಿನಿ ಸರಳತೆ ನೋಡಿ ಅವರ ಫ್ಯಾನ್ಸ್‌ ಮೆಚ್ಚಿಕೊಂಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರ ನಿವಾಸಕ್ಕೂ ತಲೈವಾ ಭೇಟಿ ನೀಡಿದರು. 

ಇದನ್ನೂ ಓದಿ: ailer: ಎಲ್ಲೆಡೆ ಆರ್ಭಟಿಸುತ್ತಿರುವ ಜೈಲರ್ ಅಲ್ಲಿ ಮಾತ್ರ ಗಪ್‌ಚುಪ್...ಕಾರಣ?

ಕಳೆದ ಕೆಲವುದಿನಗಳ ಹಿಂದೆ ರಜನಿಕಾಂತ್‌ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಜೊತೆ 'ಜೈಲರ್' ಸಿನಿಮಾ ನೋಡುವುದಾಗಿ ತಿಳಿಸಿದ್ದರು. ಅದರಂತೆ ಇಂದು ಅವರು ಚಿತ್ರ ವೀಕ್ಷಣೆ ಮಾಡಿದರು. ಇದಕ್ಕೂ ಮುನ್ನ ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ  ಸಿನಿಮಾ ನೋಡಿ ರಜನಿಕಾಂತ್ ಅವರನ್ನು ಹಾಡಿ ಹೊಗಳಿದ್ದರು. ನನಗೆ 'ಜೈಲರ್' ಚಲನಚಿತ್ರವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ರಜನಿಕಾಂತ್ ಅವರ ಅನೇಕ ಚಲನಚಿತ್ರಗಳನ್ನು ನಾನು ನೋಡಿದ್ದೇನೆ, ಅವರದ್ದು ಅಸಾಧಾರಣ ಪ್ರತಿಭೆ ಎಂದು ಉಪಮುಖ್ಯಮಂತ್ರಿ ಪಿಟಿಐಗೆ ತಿಳಿಸಿದರು.

ರಜನಿಕಾಂತ್ ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶಕ್ಕೆ ಆಗಮಿಸುವ ಮೊದಲು, ಜಾರ್ಖಂಡ್‌ನಲ್ಲಿದ್ದರು, ಅಲ್ಲಿ ಅವರು ಪ್ರಸಿದ್ಧ ಚಿನ್ನಮಸ್ತ ದೇವಸ್ಥಾನಕ್ಕೆ ಭೇಟಿ ನೀಡಿದರು. ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ಇದನ್ನೂ ಓದಿ: ಪ್ರೀತಿಯ ತಮ್ಮನ ಜನ್ಮ ದಿನದಂದೇ ಬಿಡುಗಡೆಯಾಗಲಿದೆ ಚಿರು ಕೊನೆಯ ಚಿತ್ರ ರಾಜಮಾರ್ತಾಂಡ

ಎಂಟು ದಿನಗಳಲ್ಲಿ ಒಟ್ಟು 235.65 ಕೋಟಿ ಕಲೆಕ್ಷನ್ ಮಾಡಿದ 'ಜೈಲರ್' ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನವನ್ನು ದಾಖಲಿಸಿದೆ. ನೆಲ್ಸನ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಿಯಾಂಕಾ ಮೋಹನ್, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್, ಶಿವರಾಜಕುಮಾರ್‌, ಯೋಗಿ ಬಾಬು, ವಸಂತ ರವಿ ಮತ್ತು ವಿನಾಯಕನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News