Rashmika Mandanna : ನನಗೆ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್..!

ವಾದ ವಿವಾದಗಳಿಗೆ ಕಾರಣವಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಯಾಕೋ ಶಾಂತಿ ಮಂತ್ರ ಜಪಸುತ್ತಿದ್ದಾರೆ. ಇಷ್ಟು ದಿನ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷುನಲ್‌ ಕ್ರಶ್‌ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ನಟ ರಕ್ಷಿತ್‌ ಶೆಟ್ಟಿ ಮತ್ತು ರಿಷಬ್‌ ಶೆಟ್ಟಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರುವ ಮಂದಣ್ಣ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್ ಎಂದು ಹೇಳಿದ್ದಾರೆ.

Written by - Krishna N K | Last Updated : Jan 18, 2023, 09:41 PM IST
  • ನಟಿ ರಶ್ಮಿಕಾ ಮಂದಣ್ಣ ಯಾಕೋ ಶಾಂತಿ ಮಂತ್ರ ಜಪಸುತ್ತಿದ್ದಾರೆ.
  • ದಿನ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷುನಲ್‌ ಕ್ರಶ್‌ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ.
  • ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್ ಎಂದು ಹೇಳಿದ್ದಾರೆ.
Rashmika Mandanna : ನನಗೆ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್..! title=

Rashmika Mandanna : ವಾದ ವಿವಾದಗಳಿಗೆ ಕಾರಣವಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಯಾಕೋ ಶಾಂತಿ ಮಂತ್ರ ಜಪಸುತ್ತಿದ್ದಾರೆ. ಇಷ್ಟು ದಿನ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷುನಲ್‌ ಕ್ರಶ್‌ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ನಟ ರಕ್ಷಿತ್‌ ಶೆಟ್ಟಿ ಮತ್ತು ರಿಷಬ್‌ ಶೆಟ್ಟಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರುವ ಮಂದಣ್ಣ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್ ಎಂದು ಹೇಳಿದ್ದಾರೆ.

ಬಹುಭಾಷಾ ನಟಿಯಾಗಿ ಹೊರಹೊಮ್ಮಿರುವ ರಶ್ಮಿಕಾಗೆ ತೆಲುಗು, ತಮಿಳು, ಹಿಂದಿಯಲ್ಲಿ ಭಾರಿ ಡಿಮ್ಯಾಂಡ್‌ ಇದೆ. ತಮ್ಮ ಮುಗ್ಧ ನಟನೆಗೆ ಹೆಸರುವಾಸಿಯಾಗಿರುವ ಕನ್ನಡತಿ ತಮ್ಮ ಹೇಳಿಕೆಗಳಿಂದ ವಿವಾದಕ್ಕೆ ಕಾರಣವಾಗಿದ್ದರು. ಅಲ್ಲದೆ, ಕನ್ನಡ ಸಿನಿಮಾ ರಂಗದಿಂದ ರಶ್ಮಿಕಾ ಬ್ಯಾನ್‌ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇಷ್ಟು ದಿನ ರಕ್ಷಿತ್‌ ಮತ್ತು ರಿಷಬ್‌ ಶೆಟ್ಟಿ ತುಟಿ ಬಿಚ್ಚದ ರಶ್ಮಿಕಾ ಇದೀಗ ಸಂದರ್ಶನವೊಂದರಲ್ಲಿ ಇಬ್ಬರ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Mission Majnu movie review : ಸಿದ್ಧಾರ್ಥ್‌ ʼಮಿಷನ್ ಮಜ್ನುʼ ನೋಡಿ ʼಸೂಪರ್ಬ್... ಸೂಪರ್ಬ್ʼ ಎಂದ ಕಿರಾಯಾ..!

ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ರಶ್ಮಿಕಾ ಹಲವು ವಿಚಾರಗಳ ಬಗ್ಗೆ ಒಪನ್‌ ಆಗಿ ಮಾತನಾಡಿದ್ದಾರೆ. ಈ ವೇಳೆ ನಿರೂಪಕಿ ಕೇಳಿದ ಪ್ರಶ್ನೆಗೆ ಯಾವುದೇ ಹಿಂಜರಿಕೆ ಇಲ್ಲದೆ ಉತ್ತರಿಸಿದ್ದಾರೆ. ʼರಕ್ಷಿತ್ ಹಾಗೂ ರಿಷಬ್ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು ಅಂತ ಹೇಳಿದ್ದಾರೆ. ಇನ್ನು ಇದಕ್ಕೆ ಕೆಲ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನು ಕೆಲವರು ಕೆಟ್ಟ ಮೇಲೆ ಬುದ್ದಿ ಬಂತಾ ಅಂತ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಸದ್ಯ ರಶ್ಮಿಕಾ ದಳಪತಿ ವಿಜಯ್‌ ನಟನೆಯ ʼವಾರಿಸುʼ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಸಿದ್ಧಾರ್ಥ್‌ ಮಲ್ಹೋತ್ರಾ ರಶ್ಮಿಕಾ ನಟನೆಯ ʼಮಿಷನ್ ಮಜ್ನುʼ ಬಿಡುಗಡೆಗೆ ಸಿದ್ಧವಾಗಿದೆ.  ಕೆಳೆದ ವರ್ಷ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ತಮ್ಮ ಮೊದಲ ಸಿನಿಮಾದ ನಿರ್ಮಾಣ ಸಂಸ್ಥೆಯ ಹೆಸರನ್ನು ಹೇಳಲು ಹಿಂದೇಟು ಹಾಕಿದ್ದರು. ಇದು ಕನ್ನಡಿಗರ ವಿರೋಧಕ್ಕೆ ಗುರಿಯಾಗಿತ್ತು. ಅಲ್ಲದೆ, ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಸಿನಿರಂಗದಿಂದ ಬ್ಯಾನ್ ಮಾಡ್ಬೇಕು ಎನ್ನುವ ಒತ್ತಾಯ ಕೂಡ ಕೇಳಿಬಂದಿತ್ತು. ಇದೀಗ ಅವರ ಹೊಸ ಹೇಳಿಕೆ ಟ್ರೋಲ್‌ ಮತ್ತು ವಿವಾದಗಳಿಗೆ ಕಡಿವಾಣ ಹಾಕುತ್ತಾ ಎನ್ನವುದನ್ನು ಕಾಯ್ದು ನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News