ಥಿಯೇಟರ್ & OTTಯಲ್ಲಿ ‘ಕಾಂತಾರ’ ಸೂಪರ್ ಹಿಟ್; ಸ್ಟಾರ್ ಸುವರ್ಣದಲ್ಲಿ ದೈವ ದರ್ಶನ!

ಕನ್ನಡ ನಾಡಿನ ದಂತಕಥೆ  "ಕಾಂತಾರ"  ಸಿನಿಮಾವು ದೇಶದೆಲ್ಲೆಡೆ ಹೊಸ ಇತಿಹಾಸ ಸೃಷ್ಟಿಸಿದೆ. ಸಿನಿಮಾ ರಿಲೀಸ್ ಆದ ದಿನದಿಂದ ಇಲ್ಲಿಯವರೆಗೆ 'ಕಾಂತಾರ' ಎಲ್ಲರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ರಿಷಬ್ ಶೆಟ್ಟಿ ಅಭಿನಯದ ಈ ಚಿತ್ರಕ್ಕೆ ಸಿಕ್ಕ ಮೆಚ್ಚುಗೆ ಅಷ್ಟಿಷ್ಟಲ್ಲ. ಇತ್ತೀಚೆಗಷ್ಟೇ OTTಯಲ್ಲಿ ಪ್ರಸಾರವಾಗಿದ್ದ 'ಕಾಂತಾರ' ಇದೀಗ ಕಿರುತೆರೆಗೆ ಲಗ್ಗೆ ಇಡಲು ಸಜ್ಜಾಗಿದೆ .  

Written by - Zee Kannada News Desk | Last Updated : Jan 6, 2023, 05:31 PM IST
  • ಥಿಯೇಟರ್ ಮತ್ತು ಒಟಿಟಿಯಲ್ಲಿ ಸೂಪರ್ ಡೂಪರ್ ಹಿಟ್ ಆದ ‘ಕಾಂತಾರ’ ಸಿನಿಮಾ
  • ಜ.15ರಂದು ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿರುವ ಕನ್ನಡದ ಹೆಮ್ಮೆಯ ಸಿನಿಮಾ
  • ಸಂಕ್ರಾಂತಿ ಹಬ್ಬದಂದು ನಿಮ್ಮ ಮನೆಯಲ್ಲಿಯೇ ಕುಳಿತು ‘ಕಾಂತಾರ’ದ ದೈವ ದರ್ಶನ ಮಾಡಿ
ಥಿಯೇಟರ್ & OTTಯಲ್ಲಿ ‘ಕಾಂತಾರ’ ಸೂಪರ್ ಹಿಟ್; ಸ್ಟಾರ್ ಸುವರ್ಣದಲ್ಲಿ ದೈವ ದರ್ಶನ!   title=
ಮನೆಯಲ್ಲಿಯೇ ‘ಕಾಂತಾರ’ ದೈವ ದರ್ಶನ!

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ 'ಕಾಂತಾರ' ಸಿನಿಮಾ ಚಿತ್ರಮಂದಿರಗಳಲ್ಲಿ ದೊಡ್ಡಮಟ್ಟದ ಸೂಪರ್ ಹಿಟ್ ಆಗಿತ್ತು. ಕೋಲ, ದೈವ, ಕರಾವಳಿ ಸಂಸ್ಕೃತಿಯನ್ನು ಆಧರಿಸಿ ನಿರ್ಮಿಸಿದ ಈ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ರಾಜ್ಯದ ಕೆಲವು ಚಿತ್ರಮಂದಿರಗಳಲ್ಲಿ ಈಗಲೂ ಪ್ರದರ್ಶನ ಕಾಣುತ್ತಿರುವ ‘ಕಾಂತಾರ’ ಸಿನಿಮಾ ಇದೀಗ ಟಿವಿಯಲ್ಲಿ ಪ್ರಸಾರವಾಗಲಿದೆ.

ಹೌದು, ಕೇವಲ 18 ಕೋಟಿ ರೂ.ನಲ್ಲಿ ನಿರ್ಮಿಸಿದ ಕನ್ನಡ ಸಿನಿಮಾ ‘ಕಾಂತಾರ’ ಬಾಕ್ಸ್ ಆಫೀಸ್‍ನಲ್ಲಿ ಧೂಳೆಬ್ಬಿಸಿತ್ತು. ವರದಿಗಳ ಪ್ರಕಾರ ಈ ಸಿನಿಮಾ ಗಳಿಸಿದ್ದು 400 ಕೋಟಿ ರೂ.ಗೂ ಹೆಚ್ಚು. ಥಿಯೇಟರ್ ಮತ್ತು ಒಟಿಟಿಯಲ್ಲಿ ಸೂಪರ್ ಹಿಟ್ ಆದ ‘ಕಾಂತಾರ’ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿದೆ.  

ಇದನ್ನೂ ಓದಿ: Orchestra Mysore: ಸಂಕ್ರಾಂತಿ ಹಬ್ಬಕ್ಕೆ ಸೌಂಡ್ ಮಾಡಲಿರುವ ಡಾಲಿ ಬಳಗದ ‘ಆರ್ಕೇಸ್ಟ್ರಾ ಮೈಸೂರು’

ಕನ್ನಡದ ಹೆಮ್ಮೆಯ ಸಿನಿಮಾ ‘ಕಾಂತಾರ’ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರಗೊಳ್ಳಲಿದೆ. ''ನಾಡಿಗೆ ನಾಡೇ ಭಕ್ತಿಯಿಂದ ಕೈಮುಗಿದು ಎದೆಗೊತ್ತಿಕೊಂಡ ಕನ್ನಡದ ಹೆಮ್ಮೆಯ ಕಳಶ "ಕಾಂತಾರ". ನಿಮ್ಮ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ'' ಎಂದು ಸುವರ್ಣ ವಾಹಿನಿಯು ತನ್ನ ಫೇಸ್‌ಬುಕ್‌ ಪುಟದಲ್ಲಿ 'ಕಾಂತಾರ'ದ ವಿಡಿಯೋದೊಂದಿಗೆ ಪ್ರಕಟಿಸಿದೆ. ಸಂಕ್ರಾಂತಿ ಹಬ್ಬದ ವಿಶೇಷ ಸಂದರ್ಭದಲ್ಲಿ 'ಕಾಂತಾರ'ವನ್ನು ಸ್ಟಾರ್ ಸುವರ್ಣ ವಾಹಿನಿ ಪ್ರಸಾರ ಮಾಡುತ್ತಿದೆ.

ಈ ಹಿಂದೆ ಚಿತ್ರಮಂದಿರಗಳಲ್ಲಿ ಅಬ್ಬರಿಸಿದ್ದ 'ಕೆಜಿಎಫ್-2', '777 ಚಾರ್ಲಿ' ಮತ್ತು 'ವಿಕ್ರಾಂತ್ ರೋಣ' ಸಿನಿಮಾಗಳು ಟಿವಿಗಳಲ್ಲಿ ಪ್ರಸಾರವಾದಾಗ ದೊಡ್ಡ ಸಂಖ್ಯೆಯ ಟಿಆರ್‌ಪಿಯನ್ನು ಗಳಿಸಿದ್ದವು. ಈಗ 'ಕಾಂತಾರ' ಸಹ ಇದೇ ಹಾದಿ ಹಿಡಿಯಲಿದೆ ಎಂದು ಹೇಳಲಾಗುತ್ತಿದೆ. 'ಕಾಂತಾರ' ಸಿನಿಮಾವು ಚಿತ್ರಮಂದಿರಗಳಿಂದಲೇ ಸುಮಾರು 400 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಅಮೆಜಾನ್ ಹಾಗೂ ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು, ಅಲ್ಲಿಯೂ ಒಳ್ಳೆಯ ಪ್ರದರ್ಶನ ಕಂಡಿದೆ.

ಇದನ್ನೂ ಓದಿ: ಗೋಲ್ಡನ್ ಸ್ಟಾರ್ ಗಣೇಶ್ ‘ಬಾನ ದಾರಿಯಲ್ಲಿ’ ಬಂತು ಇಂಪಾದ ಹಾಡು..

ಈ ಸಿನಿಮಾವನ್ನು ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದು, ಹೊಂಬಾಳೆ ಪ್ರೊಡಕ್ಷನ್‌ನವರು ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ರಿಷಬ್ ಜೊತೆಗೆ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಇನ್ನೂ ಮುಂತಾದವರು ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News