ಸಿನಿಮಾ ಶೂಟಿಂಗ್‌ ವೇಳೆ ಸಲ್ಮಾನ್ ಖಾನ್ ಹತ್ಯೆಗೆ ಸಂಚು..? ಬಯಲಾಯ್ತು ರೋಚಕ ಸತ್ಯ..!

Salman Khan murder : ಬಾಲಿವುಡ್ ಸ್ಟಾರ್ ಹೀರೋ ಸಲ್ಮಾನ್ ಖಾನ್ ಹತ್ಯೆಗೆ ಸಂಚು ನಡೆದಿದೆಯೇ? ಸಿನಿಮಾ ಶೂಟಿಂಗ್ ಸ್ಥಳದಲ್ಲೇ ನಟನನ್ನು ಕೊಲ್ಲಲು ಪ್ಲ್ಯಾನ್‌ ಮಾಡಿದ್ರಾ..? ತನಿಖೆಯಲ್ಲಿ ಬಯಲಾದ ರೋಚಕ ಸಂಗತಿಗಳೇನು? ಇಲ್ಲಿದೆ ಸಲ್ಲುಗೆ ಸಂಬಂಧಿಸಿದ ರೋಚಕ ವಿಚಾರಗಳು..

Written by - Krishna N K | Last Updated : Jul 3, 2024, 04:25 PM IST
    • ಬಾಲಿವುಡ್ ಸ್ಟಾರ್ ಹೀರೋ ಸಲ್ಮಾನ್ ಖಾನ್ ಹತ್ಯೆಗೆ ಸಂಚು
    • ಸಿನಿಮಾ ಶೂಟಿಂಗ್ ಸ್ಥಳದಲ್ಲೇ ನಟನನ್ನು ಕೊಲ್ಲಲು ಪ್ಲ್ಯಾನ್‌
    • ನಟ ಸಲ್ಮಾನ್‌ ಖಾಲ್‌ ಕೊಲೆ ಮಾಡಲು 5 ಲಕ್ಷ ಸುಪಾರಿ
ಸಿನಿಮಾ ಶೂಟಿಂಗ್‌ ವೇಳೆ ಸಲ್ಮಾನ್ ಖಾನ್ ಹತ್ಯೆಗೆ ಸಂಚು..? ಬಯಲಾಯ್ತು ರೋಚಕ ಸತ್ಯ..! title=
Salman khan murder plan

Salman Khan : ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಸಿನಿಮಾ ಶೂಟಿಂಗ್ ವೇಳೆ ಕೊಲ್ಲಲು ಪ್ಲಾನ್ ಮಾಡಿತ್ತಂತೆ. ಅಲ್ಲದೆ, ಸಲ್ಮಾನ್ ಅವರನ್ನು ಕೊಲ್ಲಲು ಬಿಷ್ಣೋಯ್ ಅವರೇ ತನ್ನ ಗ್ಯಾಂಗ್ ಸದಸ್ಯರಿಗೆ 25 ಲಕ್ಷ ಸುಪಾರಿ ನೀಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.. 

ಹೌದು.. ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು ರೂಪಿಸಿದ ಐವರು ಆರೋಪಿಗಳ ವಿರುದ್ಧ ನವಿ ಮುಂಬೈ ಪೊಲೀಸರು ಸಲ್ಲಿಸಿರುವ ಹೊಸ ಚಾರ್ಜ್ ಶೀಟ್ ನಲ್ಲಿ ಈ ಅಚ್ಚರಿ ವಿಚಾರ ಬಹಿರಂಗವಾಗಿದೆ. ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಮೇಲೆ ಬಹಳ ದಿನಗಳಿಂದ ಹಗೆ ಸಾಧಿಸುತ್ತಿದ್ದು.. ಇವರ ಗ್ಯಾಂಗ್‌ ಒಂದು ಸಣ್ಣ ಚಾನ್ಸ್‌ ಸಿಕ್ಕರೂ ಸಲ್ಮಾನ್ ನನ್ನು ಕೊಲ್ಲಲು ಪ್ಲಾನ್ ಮಾಡುತ್ತಿದ್ದಾರಂತೆ. 

ಇದನ್ನೂ ಓದಿ: ಆಸ್ಪತ್ರೆ ಬೆಡ್‌ ಮೇಲೆ ʼಬೇಬಿ ಶಾಮಿಲಿʼ..! ಏನಾಯ್ತು ನಟಿ ಆರೋಗ್ಯಕ್ಕೆ.?

ಅಷ್ಟೇ ಅಲ್ಲ, ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಅವರನ್ನು ಕೊಲ್ಲುವುದಾಗಿ ಒಂದು ಸಂದರ್ಭದಲ್ಲಿ ಸಾರ್ವಜನಿಕವಾಗಿ ಎಚ್ಚರಿಕೆಯನ್ನೂ ಸಹ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್‌ಗೆ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಅಲ್ಲದೆ, ಸಲ್ಲುಗೆ ವೈ ಕೆಟಗರಿ ಭದ್ರತೆ ಒದಗಿಸಲಾಗುತ್ತಿದ್ದು, ಪೊಲೀಸ್ ಭದ್ರತೆಯ ಜೊತೆಗೆ ಸಲ್ಮಾನ್ ಖಾಸಗಿ ಭದ್ರತೆಯನ್ನೂ ಏರ್ಪಡಿಸಿದ್ದಾರೆ. 

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಗಳು ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಆಧುನಿಕ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಯೋಜಿಸಿದ್ದರು. 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದ ಅದೇ ಆಯುಧಗಳಿಂದ ಸಲ್ಮಾನ್ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಟರ್ಕಿ ನಿರ್ಮಿತ ಜಿಗಾನಾ ಪಿಸ್ತೂಲ್ ನಿಂದ ಸಲ್ಮಾನ್ ಖಾನ್ ಹತ್ಯೆಗೆ ಗ್ಯಾಂಗ್ ಯೋಜನೆ ರೂಪಿಸಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. 

ಇದನ್ನೂ ಓದಿ:ಸ್ಟಾರ್ ನಟಿಯನ್ನು ಹರಾಜು ಹಾಕಿದ ಪತಿ..! ಸ್ನೇಹಿತರ ಜೊತೆ ರಾತ್ರಿ ಕಳೆಯುವಂತೆ ಒತ್ತಾಯ..

ಸಲ್ಮಾನ್ ಖಾನ್ ಮೇಲೆ ದಾಳಿ ಮಾಡಲು ಎಂ16, ಎಕೆ-47 ಮತ್ತು ಎಕೆ-92 ಬಂದೂಕುಗಳನ್ನು ಖರೀದಿಸಲು ಪಾಕಿಸ್ತಾನದ ಶಸ್ತ್ರಾಸ್ತ್ರ ವ್ಯಾಪಾರಿಯೊಂದಿಗೆ ಸಂಪರ್ಕದಲ್ಲಿದ್ದರು ಎಂದು ಆರೋಪಪಟ್ಟಿಯಲ್ಲಿ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ವಿಷಯ ಚಿತ್ರರಂಗದ ಜೊತೆಗೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. 

ಸಲ್ಮಾನ್ ಖಾನ್ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆಯ ಆರೋಪ ಎದುರಿಸುತ್ತಿದ್ದಾರೆ. ನಟ ತಮ್ಮ ಆರಾಧ್ಯ ದೈವವೆಂದು ಪೂಜಿಸುತ್ತಿದ್ದ ಜಿಂಕೆಯನ್ನು ಬೇಟೆಯಾಡಿದ್ದಾರೆ ಎಂದು ಬಿಷ್ಣೋಯ್‌ ಗ್ಯಾಂಗ್‌ ಕೆಂಡಕಾರಿದ್ದರು. ಇತ್ತೀಚೆಗಷ್ಟೇ ಸಲ್ಮಾನ್ ಖಾನ್ ಮನೆಯ ಸುತ್ತಮುತ್ತ ಗುಂಡಿನ ದಾಳಿ ನಡೆದಿತ್ತು. ಸಧ್ಯ ಸಲ್ಮಾನ್ ಅಭಿಮಾನಿಗಳು ಏನಾಗುತ್ತೋ ಎಂಬ ಆತಂಕದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News