ಸ್ಯಾಂಡಲ್‍ವುಡ್ ನಟರಿಂದ ರಿಲೀಸ್ ಆಯ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ ಸಾಂಗ್

Hostel Hudugaru Bekagiddare: ಹಾಸ್ಟೆಲ್ ನಲ್ಲಿರುವ ಹುಡುಗರ ಕಥೆ, ವ್ಯಥೆ ಇರುವ ಈ ಹಾಡನ್ನು ಸಖತ್ ಮಜವಾಗಿ ಕಟ್ಟಿಕೊಡಲಾಗಿದ್ದು, ಅದಕ್ಕೆ ತಕ್ಕಂತೆ ಯೋಗರಾಜ್ ಭಟ್ ಸಾಹಿತ್ಯ, ಅಜನೀಶ್ ಲೋಕನಾಥ್ ಮ್ಯೂಸಿಕ್ ಹಾಗೂ ಹಾಡು ಕಿಕ್ ನೀಡುತ್ತಿದೆ.

Written by - YASHODHA POOJARI | Edited by - Puttaraj K Alur | Last Updated : Jan 5, 2023, 10:40 PM IST
  • 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಿದ ಸ್ಟಾರ್ ನಟರು
  • ಕ್ರಿಯೇಟಿವ್ ಕಂಟೆಂಟ್ ಮೂಲಕ ಎಲ್ಲರ ಗಮನ ಸೆಳೆದಿರುವ ಚಿತ್ರದ ಪ್ರೊಟೆಸ್ಟ್ ಸಾಂಗ್ ರಿಲೀಸ್ ಆಗಿದೆ
  • ಹಾಸ್ಟೆಲ್‍ನಲ್ಲಿರುವ ಹುಡುಗರ ಕಥೆ-ವ್ಯಥೆ ಇರುವ ಈ ಹಾಡನ್ನು ಸಖತ್ ಮಜವಾಗಿ ಕಟ್ಟಿಕೊಡಲಾಗಿದೆ
ಸ್ಯಾಂಡಲ್‍ವುಡ್ ನಟರಿಂದ ರಿಲೀಸ್ ಆಯ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ ಸಾಂಗ್ title=
'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಮೊದಲ ಹಾಡು ಬಿಡುಗಡೆ

ಬೆಂಗಳೂರು: ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ಸೆಟ್ಟೇರಿದ ದಿನದಿಂದಲೂ ಸಖತ್ ಸುದ್ದಿಯಲ್ಲಿರುವ, ಕ್ರಿಯೇಟಿವ್ ಕಂಟೆಂಟ್ ಮೂಲಕ ಎಲ್ಲರ ಗಮನ ಸೆಳೆದಿರುವ ಈ ಚಿತ್ರದ ಮೊದಲ ಸಾಂಗ್ ರಿಲೀಸ್ ಆಗಿದೆ. ಸ್ಯಾಂಡಲ್‍ವುಡ್ ಸ್ಟಾರ್ ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಡಾಲಿ ಧನಂಜಜ್, ಧ್ರುವ ಸರ್ಜಾ ಎಲ್ಲರೂ ಸೇರಿ ಚಿತ್ರದ ಮೊದಲ ಸಾಂಗ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಸ್ಯಾಂಡಲ್‍ವುಡ್ ಸಿನಿ ಪ್ರೇಕ್ಷಕರಲ್ಲಿ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ಬಿಡುಗಡೆಗೆ ರೆಡಿಯಾಗಿರುವ ಈ ಚಿತ್ರ ಹಾಡುಗಳ ಮೂಲಕ ಪ್ರೇಕ್ಷಕರ ಮನಗೆಲ್ಲೋಕೆ ಹೊರಟಿದೆ. ಇಂದು ಚಿತ್ರದ ‘ಪ್ರೊಟೆಸ್ಟ್ ಸಾಂಗ್’ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಹಾಸ್ಟೆಲ್ ನಲ್ಲಿರುವ ಹುಡುಗರ ಕಥೆ, ವ್ಯಥೆ ಇರುವ ಈ ಹಾಡನ್ನು ಸಖತ್ ಮಜವಾಗಿ ಕಟ್ಟಿಕೊಡಲಾಗಿದ್ದು, ಅದಕ್ಕೆ ತಕ್ಕಂತೆ ಯೋಗರಾಜ್ ಭಟ್ ಸಾಹಿತ್ಯ, ಅಜನೀಶ್ ಲೋಕನಾಥ್ ಮ್ಯೂಸಿಕ್ ಹಾಗೂ ಹಾಡು ಕಿಕ್ ನೀಡುತ್ತಿದೆ.

ಇದನ್ನೂ ಓದಿ: ಥಿಯೇಟರ್ & OTTಯಲ್ಲಿ ‘ಕಾಂತಾರ’ ಸೂಪರ್ ಹಿಟ್; ಸ್ಟಾರ್ ಸುವರ್ಣದಲ್ಲಿ ದೈವ ದರ್ಶನ!

ಯೂತ್ ಸಬ್ಜೆಕ್ಟ್ ಒಳಗೊಂಡ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾಗಣದಲ್ಲಿರುವ ಈ ಚಿತ್ರದಲ್ಲಿ ಸ್ಯಾಂಡಲ್‍ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಇರಲಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್, ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ, ರಕ್ಷಿತ್ ಶೆಟ್ಟಿ ಹೀಗೆ ಸ್ಟಾರ್ ನಟ-ನಟಿಯರು ಈ ಸಿನಿಮಾಗೆ ಸಾಥ್ ನೀಡಿದ್ದಾರೆ.

ಪ್ರತಿ ಬಾರಿಯೂ ಯೂನೀಕ್ ಕಾನ್ಸೆಪ್ಟ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಮಾಡಿ ಅಪಾರ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮೆಚ್ಚಿಕೊಂಡಿದ್ದು, ತಮ್ಮ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತ ಪಡಿಸುತ್ತಿದ್ದಾರೆ. ಫೆಬ್ರವರಿಯಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ: "ನಿಮಗಾಗಿ ವಿಭಿನ್ನವಾಗಿರೋದೆನನ್ನೂ ತರಲಿದ್ದೇನೆ" : ಯಶ್‌ ಕೊಡಲಿರುವ ಆ ಸರ್‌ಪ್ರೈಸ್‌ ಏನು?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News