ನನ್ನ ಪತ್ನಿಗೆ ಮಂತ್ರಿಯೊಬ್ಬರ ಜೊತೆ ಅಫೇರ್‌ ಇತ್ತು, ಅದಕ್ಕೆ ಆಕೆಯನ್ನು ಕೊಂದೆ : ಸಂಜಯ್‌ ದತ್‌

Sanjay Dutt : ಬಾಲಿವುಡ್‌ನ ಸ್ಟಾರ್‌ ನಟ ಸಂಜಯ್‌ ದತ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಆಡಿದ ಮಾತು ಅವರ ಫ್ಯಾನ್ಸ್‌ಗೆ ದೊಡ್ಡ ಶಾಕ್‌ ನೀಡಿದೆ. ಸಂಜು ತಮ್ಮ ಪತ್ನಿ ಮಂತ್ರಿಯೊಬ್ಬರ ಜೊತೆಗೆ ಅಫೇರ್‌ ಇಟ್ಟುಕೊಂಡಿದ್ದಾಗಿ ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. 

Written by - Krishna N K | Last Updated : Oct 5, 2023, 03:33 PM IST
  • ನಟ ಸಂಜಯ್‌ ದತ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಆಡಿದ ಮಾತು ಅವರ ಫ್ಯಾನ್ಸ್‌ಗೆ ದೊಡ್ಡ ಶಾಕ್‌ ನೀಡಿದೆ.
  • 'ಕೆಜಿಎಫ್ ಚಾಪ್ಟರ್ 2' ಸಿನಿಮಾದಲ್ಲಿ ಅಧೀರನಾಗಿ ಕಂಡ ಸಂಜಯ್ ದತ್ ನಟಿಸಿದ್ದರು.
  • ಸ್ಯಾಂಡಲ್‌ವುಡ್‌ನ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಮುಂಬರುವ ಕೇಡಿ ಚಿತ್ರದಲ್ಲೂ ಸಹ ನಟಿಸಿದ್ದಾರೆ.
ನನ್ನ ಪತ್ನಿಗೆ ಮಂತ್ರಿಯೊಬ್ಬರ ಜೊತೆ ಅಫೇರ್‌ ಇತ್ತು, ಅದಕ್ಕೆ ಆಕೆಯನ್ನು ಕೊಂದೆ : ಸಂಜಯ್‌ ದತ್‌ title=

Sanjay dutt wife affair : ಬಿಟೌನ್‌ ಭಾಯ್‌ ನಟ ಸಂಜಯ್‌ ದತ್ ಹೆಸರು ಕೇಳದ ಸಿನಿ ಪ್ರೇಕ್ಷಕನಿಲ್ಲ. ತಮ್ಮ ಜೀವನದಲ್ಲಿ ಎಷ್ಟೋ ತಪ್ಪುಗಳನ್ನು ಮಾಡಿ ಕುಖ್ಯಾತಿ ಪಡೆದು ಇಂದು ಓಳ್ಳೆಯ ಹಾದಿ ಹಿಡಿದಿರುವ ಸಂಜು ತಮ್ಮ ನಟನೆಯ ಮೂಲಕ ಜನರ ಮನದಲ್ಲಿ ಉಳಿದಿದ್ದಾರೆ. ಡ್ರಗ್ಸ್, ಬಾಂಬೆ ಬಾಂಬ್ ಬ್ಲಾಸ್ಟ್ ಪ್ರಕರಣ ಸೇರಿದಂತೆ ಹಲವು ಕೇಸ್‌ಗಳಲ್ಲಿ ಸಂಜು ಜೈಲು ಶಿಕ್ಷೆಯನ್ನು ಅನುಭವಿಸಿದರು. ಸಧ್ಯ ಇವೆಲ್ಲದರಿಂದ ಮುಕ್ತಿ ಪಡೆದು ಹೊಸ ಇಮೇಜ್ ಕ್ರಿಯೇಟ್‌ ಮಾಡಿದ್ದಾರೆ.

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ 'ಕೆಜಿಎಫ್ ಚಾಪ್ಟರ್ 2' ಸಿನಿಮಾದಲ್ಲಿ ಅಧೀರನಾಗಿ ಕಂಡ ಸಂಜಯ್ ದತ್ ಸೌತ್‌ ಸಿನಿರಂಗದ ಫೆವರಿಟ್‌ ವಿಲನ್‌ ಆಗಿದ್ದಾರೆ. ಸಧ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಂಜಯ್ ದತ್ ಹವಾ ಜೋರಾಗಿಯೇ ನಡೆಯುತ್ತಿದೆ. ದಳಪತಿ ವಿಜಯ್‌ ಬಹುನಿರೀಕ್ಷಿತ ಲಿಯೋ ಸಿನಿಮಾದಲ್ಲೂ ಸಹ ಸಂಜು ಭಾಯ್‌ ಕಾಣಿಕೊಳ್ಳಲಿದ್ದಾರೆ. ಹಾಗೆಯೇ ಸ್ಯಾಂಡಲ್‌ವುಡ್‌ನ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಮುಂಬರುವ ಕೇಡಿ ಚಿತ್ರದಲ್ಲೂ ಸಹ ನಟಿಸಿದ್ದಾರೆ.

ಇದನ್ನೂ ಓದಿ:ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 10 ಗೆದ್ದವರಿಗೆ ಸಿಗುವ ಹಣ ಎಷ್ಟು?

ಸಂಜಯ್ ದತ್ ವೈಯಕ್ತಿಕ ಹಾಗೂ ವೃತ್ತಿ ಬದುಕಿನಲ್ಲಿ ಹಲವು ಬಾರಿ ಏರಿ ಇಳಿತಗಳನ್ನು ಕಂಡ ನಟ. ಇದೀಗ ಸಂಜು ತಮ್ಮ ʼಪತ್ನಿ ಮಂತ್ರಿಯೊಂದಿಗೆ ಅಫೇರ್ ಇಟ್ಟುಕೊಂಡಿದ್ದರು, ಅದಕ್ಕೆ ಆಕೆಯನ್ನು ಕೊಂದೆʼ ಎಂದು ಹೇಳುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಅಸಲಿಗೆ ಈ ರೀತಿ ಸಂಜು ಏಕೆ ಹೇಳಿದ್ರು ಅಂತ ನೋಡೋಣ.

ಸಂಜಯ್‌ ದತ್ ಮೂರು ಮದುವೆ ಆಗಿದ್ದಾರೆ. ಮೊದಲು ರೀಚಾ ಶರ್ಮಾ ಅವರನ್ನು 1987ರಲ್ಲಿ ಮದುವೆಯಾದರು. ರೀಚಾ ಮದುವೆಯ ಎರಡು ವರ್ಷಗಳ ಬಳಿಕ ಬ್ರೇನ್‌ ಟ್ಯೂಮರ್‌ನಿಂದ ಮರಣಹೊಂದಿದರು. ನಂತರ 1988ರಲ್ಲಿ ರಿಯಾ ಪಿಳ್ಳಯ್‌ ಅವರನ್ನು ಮದುವೆಯಾದರು. ಆದರೆ ಕಾರಣಾಂತರಗಳಿಂದ 2008ರಲ್ಲಿ ಇಬ್ಬರು ವಿಚ್ಛೇದನ ಪಡೆದುಕೊಂಡರು. ಮತ್ತೆ ಸಂಜಯ್‌ 2008ರಲ್ಲಿ ಮಾನ್ಯತಾ ಅವರನ್ನು ವಿವಾಹವಾದರು. 

ಇದನ್ನೂ ಓದಿ: ರಜನಿ 170ನೇ ಸಿನಿಮಾದ ಫಸ್ಟ್ ಲುಕ್‌ ಔಟ್‌ : ತಲೈವಾ ಹೊಸ ಅವತಾರಕ್ಕೆ ಫ್ಯಾನ್ಸ್‌ ಫಿದಾ

ಹಾಗಾದ್ರೆ ಸಂಜು ಈ ಮೂರವರಲ್ಲಿ ಯಾರನ್ನ ಕೊಂದ್ರು ಅಂತ ನೋಡುವುದಾದರೆ, ಇತ್ತೀಚೆಗೆ ಸಂಜಯ್‌ ಕರಣ್ ಜೋಹರ್ ನಡೆಸಿಕೊಡುವ 'ಕಾಫಿ ವಿತ್ ಕರಣ್' ಶೋನಲ್ಲಿ  ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಕರಣ್ ಜೊತೆ ಮಾತಾಡುವಾಗ ಸಂಜಯ್ ದತ್ ಕೆಲವು ವೈಯಕ್ತಿ ವಿಷಯಗಳನ್ನು ಹಂಚಿಕೊಂಡಿದ್ದರು. ಸಂಜಯ್‌ ಶೋನಲ್ಲಿ "ನನ್ನ ಪತ್ನಿ ಮಂತ್ರಿಯೊಂದಿಗೇ ಅಫೇರ್ ಇಟ್ಟುಕೊಂಡಿದ್ದಳು. ಅವಳನ್ನು ಕೊಂದು ಬಿಟ್ಟೆ. ಅದೇ ಕರ್ಮ ಇಂದು ನನ್ನನ್ನು ಕಾಡುತ್ತಿದೆ" ಎಂದು ಹೇಳಿದರು. ಆದರೆ ಅದು ಈ ಜನ್ಮದಲ್ಲಿ ಅಲ್ಲ. ತಮ್ಮ ಕಳೆದ ಜನುಮದಲ್ಲಿ ನಡೆದ ವಿಷಯ.

ಅಶೋಕ ಸಾಮ್ರಾಜ್ಯವಿದ್ದ ಕಾಲದಲ್ಲಿ ನಾನು ರಾಜನಾಗಿದ್ದೆ. ನನ್ನ ಮಂತ್ರಿಯೊಂದಿಗೆ ನನ್ನ ಪತ್ನಿ ಅಫೇರ್ ಇಟ್ಟುಕೊಂಡಿದ್ದಳು. ನಾನು ಸಾಯಲಿ ಅಂತಾನೇ ಯುದ್ದಕ್ಕೆ ಕಳುಹಿಸಿದ್ದಳು. ಆದರೆ, ನಾನು ಸಾಕಷ್ಟು ಯೋಧರನ್ನು ಯುದ್ಧದಲ್ಲಿ ಸಾಯಿಸಿದೆ. ಯುದ್ದದ ನಂತರ ಇಬ್ಬರ ಮದ್ಯೆ ಇದ್ದ ಅಫೇರ್ ಬಗ್ಗೆ ಗೊತ್ತಾಗಿ, ನಾನು ನನ್ನ ಪತ್ನಿ ಹಾಗೂ ಮಂತ್ರಿ ಸಾಯಿಸಿ ಬಿಟ್ಟೆ ಎಂದು ಸಂಜಯ್ ದತ್ ಹೇಳಿದ್ದಾರೆ.

ಇದನ್ನೂ ಓದಿ: ತಂಗಿಯನ್ನು ಮುದ್ದು ಮಾಡುವ ಚಿರು ಪುತ್ರ ರಾಯನ್‌ ಕ್ಯೂಟ್‌ ವಿಡಿಯೋ

ಕಳೆದ ಜನ್ಮದಲ್ಲಿ ಇಬ್ಬರು ವ್ಯಕ್ತಿಗಳನ್ನು ಕೊಂದಿದ್ದರಿಂದ ಈ ಜನ್ಮದಲ್ಲಿ ಅದರ ಕರ್ಮವನ್ನು ಅನುಭವಿಸಬೇಕಾಗಿದೆ. ಹಿಂದಿನ ಜನ್ಮದಿಂದಲೇ ನಾನು ಒಳ್ಳೆಯ ಕುಟುಂಬದಲ್ಲಿ ಹುಟ್ಟಿದೆ. ಹಾಗಾಗಿಯೇ ನಾನು ಈಗ ಬದುಕಿದ್ದೇನೆ. ಆ ಕಾರಣಕ್ಕೆ ನಾನು ಈ ವೃತ್ತಿಯಲ್ಲಿದ್ದೇನೆ ಎಂದು ಸಂಜಯ್ ಹೇಳಿದ್ದರು. ಅಲ್ಲದೆ, ತಾಯಿ ನರ್ಗೀಸ್ ದತ್, ಮೊದಲ ಪತ್ನಿ ರಿಚಾ ಶರ್ಮಾ ಕಳೆದುಕೊಂಡಿದ್ದು, ಜೈಲುವಾಸ, ಇದೆಲ್ಲವೂ ಹೋದ ಜನ್ಮದ ಕರ್ಮದ ಫಲ ಎಂದು ಸಂಜಯ್ ದತ್ ಹೇಳಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News