ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಭೇಟಿಯಾಗಿ ಶುಭಕೋರಿದ ಶಿವಣ್ಣ ದಂಪತಿ

ಕುಮಾರಸ್ವಾಮಿ ಯವರು ರಾಜ್ಯದ ಅಭಿವೃದ್ಧಿ ಬಗ್ಗೆ ಅವರದ್ದೆ ಆದ ಕನಸನ್ನು ಹೊಂದಿದ್ದಾರೆ- ನಟ ಶಿವರಾಜ್ ಕುಮಾರ್

Last Updated : May 27, 2018, 02:36 PM IST
ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಭೇಟಿಯಾಗಿ ಶುಭಕೋರಿದ ಶಿವಣ್ಣ ದಂಪತಿ title=

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್‌ಕುಮಾರ್ ಭೇಟಿ ನೀಡಿ ನೂತನ ಮುಖ್ಯಮಂತ್ರಿಗೆ ಶುಭಕೋರಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಕುಮಾರಸ್ವಾಮಿಯವರು ಸಿನಿಮಾರಂಗದಲ್ಲಿ ನಿರ್ಮಾಪಕರಾಗಿ ಸೇವೆ ಸಲ್ಲಿಸಿದವರು.  ಬಹಳ ಹಿಂದಿನಿಂದಲೂ ನನ್ನ ಮತ್ತು ಕುಮಾರಸ್ವಾಮಿಯವರ ನಡುವಿನ ಉತ್ತಮ ಒಡನಾಟ ಇದೆ. ಹಾಗಾಗಿ ನೂತನವಾಗಿ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿರುವ ಅವರಿಗೆ ಶುಭಕೋರಲು ಆಗಮಿಸಿರುವುದಾಗಿ ತಿಳಿಸಿದರು.

ಕುಮಾರಸ್ವಾಮಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ ಅವರದ್ದೆ ಆದ ಕನಸನ್ನು ಹೊಂದಿದ್ದಾರೆ. 
ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎನ್ನುವುದು ನನ್ನ ಆಶಯ ಎಂದು ಶಿವಣ್ಣ ತಿಳಿಸಿದರು.

Trending News