ದರ್ಶನ್ ಮೇಲೆ ಚಪ್ಪಲಿ ಎಸೆತ: ನಿಮ್ಮ ಮೇಲೆ ಆರೋಪಿಸಿದವರಿಗೆ ಉತ್ತರ ಕೊಡಿ ಶಿವಣ್ಣ ಎಂದ ಫ್ಯಾನ್ಸ್!

Darshan : ಕ್ರಾಂತಿ ಚಿತ್ರದ ಎರಡನೇ ಸಾಂಗ್‌ ಬೊಂಬೆ ಬೊಂಬೆ ಹಾಡು ರಿಲೀಸ್‌ ಕಾರ್ಯಕ್ರಮ ಸರಾಗವಾಗಿ ಆರಂಭವಾಯಿತು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎನ್ನುವ ಬೆನ್ನಲ್ಲೇ ಕಿಡಿಗೇಡಿಯೊಬ್ಬ ವೇದಿಕೆ ಮೇಲಿದ್ದ ನಟ ದರ್ಶನ್ ಅವರ ಮೇಲೆ ಚಪ್ಪಲಿ ಬಿಸಾಡಿದ್ದಾನೆ. ಈ ಘಟನೆ ಡಿ ಬಾಸ್‌ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. 

Written by - Chetana Devarmani | Last Updated : Dec 19, 2022, 01:57 PM IST
  • ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆ ಸಮಾರಂಭ
  • ದರ್ಶನ್ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿ
  • ನಿಮ್ಮ ಮೇಲೆ ಆರೋಪಿಸಿದವರಿಗೆ ಉತ್ತರ ಕೊಡಿ ಶಿವಣ್ಣ ಎಂದ ಫ್ಯಾನ್ಸ್!
ದರ್ಶನ್ ಮೇಲೆ ಚಪ್ಪಲಿ ಎಸೆತ: ನಿಮ್ಮ ಮೇಲೆ ಆರೋಪಿಸಿದವರಿಗೆ ಉತ್ತರ ಕೊಡಿ ಶಿವಣ್ಣ ಎಂದ ಫ್ಯಾನ್ಸ್! title=

Slipper hurled at Darshan : ನಿನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಡೆದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಡಿ ಬಾಸ್‌ ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿದೆ. ಈ ಕಾರ್ಯಕ್ರಮದ ಆಯೋಜನೆ ಆದಾಗಲೇ ದರ್ಶನ್ ಹಾಗೂ ಪುನೀತ್ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ಕಿಡಿ ಹೊತ್ತಿಕೊಂಡಿತ್ತು. ಸಾಂಗ್‌ ರಿಲೀಸ್‌ ಆಗಲಿದ್ದ ವಾಲ್ಮೀಕಿ ವೃತ್ತದಲ್ಲಿ ಅಪ್ಪು ಅಭಿಮಾನಿಗಳು ಪುನೀತ್ ರಾಜ್‌ಕುಮಾರ್ ಅವರ ಬ್ಯಾನರ್ ಕಟ್ಟಿದ್ದರು. ಪುನೀತ್ ಕಟ್ ಔಟ್ ಹಾಗೂ ಬ್ಯಾನರ್ ಹಿಡಿದು ಸ್ಟೇಜ್‌ ಏರಿ ಕುಣಿದಿದ್ದರು. ಈ ಫ್ಯಾನ್‌ ವಾರ್‌ ಸಾಂಗ್‌ ರಿಲೀಸ್‌ಗೆ ಅಡಚಣೆಯಾಗುತ್ತಾ ಎಂಬ ಆತಂಕ ಎಲ್ಲರನ್ನೂ ಕಾಡುತ್ತಿತ್ತು. 

 

 

ಇದನ್ನೂ ಓದಿ : ʼDBoss ಕುಗ್ಗಿಸಲು ಯಾರಿದಂಲೂ ಸಾಧ್ಯವಿಲ್ಲʼ : ʼಚಪ್ಪಲಿʼ ಎಸೆದವರಿಗೆ ನಿಶ್ವಿಕಾ ಮಾತಿನ ಏಟು..!

ಹೊಸಪೇಟೆಗೆ ಬಂದ ನಟ ದರ್ಶನ್‌ ಅವರು ಪುನೀತ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಆ ಬಳಿಕ ಪರಿಸ್ಥಿತಿ ಕೊಂಚ ತಣ್ಣಗಾಗಿತ್ತು. ಕ್ರಾಂತಿ ಚಿತ್ರದ ಎರಡನೇ ಸಾಂಗ್‌ ಬೊಂಬೆ ಬೊಂಬೆ ಹಾಡು ರಿಲೀಸ್‌ ಕಾರ್ಯಕ್ರಮ ಸರಾಗವಾಗಿ ಆರಂಭವಾಯಿತು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎನ್ನುವ ಬೆನ್ನಲ್ಲೇ ಕಿಡಿಗೇಡಿಯೊಬ್ಬ ವೇದಿಕೆ ಮೇಲಿದ್ದ ನಟ ದರ್ಶನ್ ಅವರ ಮೇಲೆ ಚಪ್ಪಲಿ ಬಿಸಾಡಿದ್ದಾನೆ. ಈ ಘಟನೆ ಡಿ ಬಾಸ್‌ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. 

 

 

ಇದೀಗ ಹಾಡು ಬಿಡುಗಡೆಯಾಗುವ ಮುನ್ನ ಕ್ರಾಂತಿ ಸಾಂಗ್‌ ರಿಲೀಸ್‌ ಕಾರ್ಯಕ್ರಮದ ವೇದಿಕೆ ಮೇಲೆ ಪುನೀತ್‌ ಸಿನಿಮಾ ಸಾಂಗ್‌ ಹಾಕಿಸಿ ಕುಣಿದಿದ್ದ ಅಪ್ಪು ಅಭಿಮಾನಿಗಳೇ ಈ ಕೆಲಸ ಮಾಡಿದ್ದಾರೆ ಎಂದು ನಟ ದರ್ಶನ್ ಫ್ಯಾನ್ಸ್‌ ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಇಷ್ಟಲ್ಲದೇ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಶಿವರಾಜ್‌ಕುಮಾರ್ ಅವರು ಮಾಡಿರುವ ಟ್ವೀಟ್‌ಗಳಿಗೆ ದರ್ಶನ್ ಅವರ ಅಭಿಮಾನಿಗಳು  ಕಾಮೆಂಟ್ ಮಾಡುತ್ತಿದ್ದಾರೆ. ಹೊಸಪೇಟೆಯಲ್ಲಿ ನಡೆದ ಘಟನೆಯ ಬಗ್ಗೆ ಮೌನ ಮುರಿಯಿರಿ ಎಂದು ಒತ್ತಾಯಿಸುತ್ತಿದ್ದಾರೆ.

 

 

ಇದನ್ನೂ ಓದಿ : ʼಕರುಣೆ ಬೇಡ, ನೌಟಂಕಿ ಆಟʼ : ʼDBossʼ ವಿರುದ್ಧ ತರುಣ್‌ ಸುಧೀರ್‌ ಹೆಸರಲ್ಲಿ ಟ್ಟೀಟ್‌..!

ಇನ್ನೊಂದೆಡೆ ರಾಜ್‌ ಕುಟುಂಬದ ಅಭಿಮಾನಿಗಳು ಈ ರೀತಿ ಮಾಡಲ್ಲ, ಯಾರೋ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ ಎಂದು ರಾಜ್‌ ಕುಟುಂಬ ಫ್ಯಾನ್ಸ್ ವಾದಿಸುತ್ತಿದ್ದಾರೆ. ಈ ಕುರಿತಾಗಿ ಶಿವರಾಜ್‌ಕುಮಾರ್ ಅವರ ಬಳಿ ಕೆಲ ಅಭಿಮಾನಿಗಳು ದಯವಿಟ್ಟು ಇದರ ಕುರಿತು ಮಾತನಾಡಿ ಎಂದು ಮನವಿ ಮಾಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News