ಮಗ ಅಕ್ಷಿತ್ ನಟನೆಯ 'ಖೆಯೊಸ್' ಸಿನಿಮಾದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್..!

Kheyos Movie : ಒಂದು ಕಾಲದಲ್ಲಿ ಶಶಿಕುಮಾರ್ ಸಿನಿಮಾಗಳು ಅಂದ್ರೆ ಸಿನಿಪ್ರಿಯರು ಹುಚ್ಚೆದ್ದು ಕುಣಿಯುತ್ತಿದ್ದರು. ಇದೀಗ ಅವರ ಮಗ ಸಿನಿಮಾ ಖೆಯೊಸ್ ಮೂಲಕ ಮತ್ತೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್.    

Written by - YASHODHA POOJARI | Last Updated : Feb 14, 2023, 12:37 PM IST
  • ಖೆಯೊಸ್ ಸಿನಿಮಾದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್
  • ಶಶಿಕುಮಾರ್ ಅವರ ಪುತ್ರ ಅಕ್ಷಿತ್ ಶಶಿಕುಮಾರ್
  • ಅಕ್ಷಿತ್ ನಟನೆಯ 'ಖೆಯೊಸ್' ಸಿನಿಮಾ
ಮಗ ಅಕ್ಷಿತ್ ನಟನೆಯ 'ಖೆಯೊಸ್' ಸಿನಿಮಾದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್..! title=
ಖೆಯೊಸ್

Kheyos Movie : ಒಂದು ಕಾಲದಲ್ಲಿ ಶಶಿಕುಮಾರ್ ಸಿನಿಮಾಗಳು ಅಂದ್ರೆ ಸಿನಿಪ್ರಿಯರು ಹುಚ್ಚೆದ್ದು ಕುಣಿಯುತ್ತಿದ್ದರು. ಇದೀಗ ಅವರ ಮಗ ಸಿನಿಮಾ ಖೆಯೊಸ್ ಮೂಲಕ ಮತ್ತೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್.  ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ  ತೆರೆಗೆ ಬರುತ್ತಿದೆ. ಅಕ್ಷಿತ್ ಶಶಿಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ವಿಶೇಷವೆಂದರೆ ಸುಪ್ರೀಂ ಹೀರೋ ಶಶಿಕುಮಾರ್ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ. ಅಪ್ಪ - ಮಗ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.‌  ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಿತು.  

ಇದನ್ನೂ ಓದಿ : ಅಪ್ಪು ಕನಸಿನ ಕೂಸು 'ಗಂಧದಗುಡಿ' ಬಗ್ಗೆ ಪತ್ನಿ ಅಶ್ವಿನಿ ಪುನೀತ್ ಜೊತೆ ಮಾತನಾಡಿದ ಪ್ರಧಾನಿ ಮೋದಿ..!

ಮೂಲತಃ ವೈದ್ಯರಾಗಿರುವ ಡಾ. ಜಿ.ವಿ.ಪ್ರಸಾದ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ‌ ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆಯನ್ನೇ ಆಯ್ಕೆ  ಮಾಡಿಕೊಂಡಿದ್ದಾರೆ. ಅಕ್ಷಿತ್ ಶಶಿಕುಮಾರ್ ಹಾಗೂ ಅದಿತಿ ಪ್ರಭುದೇವ ಅವರದು ಈ ಚಿತ್ರದಲ್ಲಿ  ವೈದ್ಯಕೀಯ ವಿದ್ಯಾರ್ಥಿಗಳ ಪಾತ್ರ.   ಅಲ್ಲದೆ ಹಿರಿಯನಟ ಶಶಿಕುಮಾರ್ ಸಹ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಟ್ರೈಲರ್ ಬಿಡುಗಡೆ ಮಾಡಿ ಶುಭ ಕೋರಿದರು.   ವಿಶೇಷ ಅತಿಥಿಗಳಾಗಿ ವಿನೋದ್ ಪ್ರಭಾಕರ್, ನಿರಂಜನ್ ಸುಧೀಂದ್ರ ಹಾಗೂ ಮಂಜು ಪಾವಗಡ ಆಗಮಿಸಿದ್ದರು. ನಟ ಶಶಿಕುಮಾರ್  "ಖೆಯೊಸ್" ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ, ಯಜಮಾನ ಚಿತ್ರದ ಹಾಡೊಂದಕ್ಕೆ  ಹೆಜ್ಜೆ ಹಾಕಿದರು. ನಟ ವಿನೋದ್ ಪ್ರಭಾಕರ್ ಚಿತ್ರತಂಡವನ್ನು ಅಭಿನಂದಿಸುವ ಮೂಲಕ ಹೊಸಬರ ಪ್ರಯತ್ನಕ್ಕೆ ಬೆನ್ನು ತಟ್ಟಿದರು.

ಇದನ್ನೂ ಓದಿ : ಆಧ್ಯಾತ್ಮದತ್ತ ವಾಲುತ್ತಿದ್ದಾರಾ ಸಮಂತಾ ? ಏನು ಹೇಳುತ್ತಿದೆ ಈ ಫೋಟೋಗಳು ?

ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.   ನಾಯಕ ಅಕ್ಷಿತ್ ಶಶಿಕುಮಾರ್ ಮಾತನಾಡಿ ಚಿತ್ರಕ್ಕೆ ಪ್ರತಿಯೊಬ್ಬರು ನೀಡಿದ ಸಹಕಾರವನ್ನು ನೆನೆಯುತ್ತಾ,  ಇದು ನನ್ನ ಎರಡನೇ ಚಿತ್ರ. ದಯವಿಟ್ಟು ಎಲ್ಲರೂ ಪ್ರೋತ್ಸಾಹಿಸಿ ಎಂದರಲ್ಲದೆ ನಾನು ಅಪ್ಪನ ನೆರಳಿನಲ್ಲಿ ಅರಳಿದರೂ ಬೆಳೆಯಲು ಬೇರೆ ಆಶ್ರಯ ಬೇಕಾಗುತ್ತದೆ. ಈ ವಿಷಯದಲ್ಲಿ ಸ್ನೇಹಿತರು ಅತ್ಯಂತ ಸಹಕಾರ ನೀಡುತ್ತಿದ್ದಾರೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News