'ಸಂಜು' ಗಾಗಿ ಹಾಡಿದ ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗ ರಾಜನ್

ಸಂಜು ಚಿತ್ರದಲ್ಲಿ ಎರಡು ಹಾಡುಗಳಿದ್ದು, ಎರಡೂ ಹಾಡುಗಳನ್ನು ಆಕಾಶ್ ಹಾಸನ್ ಬರೆದಿದ್ದಾರೆ. ಪ್ರೀತಿ ಮತ್ತು ಭಾವನೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ.‌ ಯತಿರಾಜ್ ಅವರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ.  

Written by - YASHODHA POOJARI | Edited by - Yashaswini V | Last Updated : Jul 20, 2023, 01:57 PM IST
  • ಪ್ರೀತಿ ಮತ್ತು ಭಾವನೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ.‌
  • ಯತಿರಾಜ್ ಅವರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ.
  • ವಿಜಯ್ ಹರಿತ್ಸ ಸಂಗೀತ ನಿರ್ದೇಶಿಸಿರುವ ಎರಡು ಹಾಡುಗಳು ಈ ಚಿತ್ರದಲ್ಲಿದ್ದು, ಎರಡೂ ಹಾಡುಗಳನ್ನು ಆಕಾಶ್ ಹಾಸನ್ ಬರೆದಿದ್ದಾರೆ.
'ಸಂಜು' ಗಾಗಿ ಹಾಡಿದ ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗ ರಾಜನ್  title=

Kannada Film: ಪತ್ರಕರ್ತನಾಗಿ, ನಟನಾಗಿ ಇದೀಗ ನಿರ್ದೇಶಕನಾಗಿಯೂ‌ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶಿಸಿರುವ "ಸಂಜು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಚಿತ್ರದಲ್ಲಿ  ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗ ರಾಜನ್ ಕೂಡ ಹಾಡಿದ್ದಾರೆ. 

ಪ್ರೀತಿ ಮತ್ತು ಭಾವನೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ.‌ ಯತಿರಾಜ್ ಅವರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ.  ವಿಜಯ್ ಹರಿತ್ಸ ಸಂಗೀತ ನಿರ್ದೇಶಿಸಿರುವ ಎರಡು ಹಾಡುಗಳು ಈ ಚಿತ್ರದಲ್ಲಿದ್ದು, ಎರಡೂ ಹಾಡುಗಳನ್ನು ಆಕಾಶ್ ಹಾಸನ್ ಬರೆದಿದ್ದಾರೆ. ಡ್ಯುಯೆಟ್ ಹಾಡನ್ನು ಖ್ಯಾತ ಗಾಯಕ ವಾಸುಕಿ ವೈಭವ್ ಹಾಗೂ ಗಾಯಕಿ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ಮತ್ತೊಂದು ವಿಭಿನ್ನ ಶೈಲಿಯ ಗೀತೆಯನ್ನು ಹೆಸರಾಂತ ಗಾಯಕ ನವೀನ್ ಸಜ್ಜು ಹಾಡಿದ್ದಾರೆ. ಈ ಎರಡು ಹಾಡುಗಳನ್ನು ರೇಣು ಸ್ಟುಡಿಯೋ ಹಾಗೂ ಪಾರೇಕ್ ಸ್ಟುಡಿಯೋದಲ್ಲಿ ಇತ್ತೀಚೆಗೆ ರೆಕಾರ್ಡ್ ಮಾಡಿಕೊಳ್ಳಲಾಗಿದೆ.‌ ಹಾಡುಗಳು ಉತ್ತಮವಾಗಿ ಮೂಡಿ ಬಂದಿದೆ ಎಂದು ಗಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ- 'ಹಾಸ್ಟೆಲ್ ಹುಡುಗರು' ವಿರುದ್ಧ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಗರಂ.! 1 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ಮೈಸೂರಿನ ಸಂತೋಷ್ ಡಿ ಎಂ ನಿರ್ಮಿಸಿರುವ ಈ ಚಿತ್ರಕ್ಕೆ ವಿದ್ಯಾ ನಾಗೇಶ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ, ಮದನ್ ಹರಿಣಿ ನೃತ್ಯ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ.

ಮನ್ವಿತ್ ಈ ಚಿತ್ರದ ನಾಯಕನಾಗಿ ನಟಿಸಿದ್ದು, ಶ್ರಾವ್ಯ ನಾಯಕಿಯಾಗಿದ್ದಾರೆ. ಯತಿರಾಜ್, ಸುಂದರಶ್ರೀ, ಬಾಲ ರಾಜ್ವಾಡಿ, ಮಹಂತೇಶ್, ಅಪೂರ್ವ, ಚಂದ್ರಪ್ರಭ, ಪ್ರಕಾಶ್ ಶೆಣೈ, ವಿನೋದ್, ಬೌ ಬೌ ಜಯರಾಂ, ಬೇಬಿಶ್ರೀ, ರಾಜೇಗೌಡ, ನಾಗರತ್ನ, ಚೇತನ್, ಕುರಿ ರಂಗ, ಕಾತ್ಯಾಯಿನಿ‌ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ- ಶಾಂತಿ ಹುಡುಕುತ್ತಾ ಸದ್ಗುರು ಸನ್ನಿಧಿ ಸೇರಿದ ಸಮಂತಾ..! ಫೋಟೋಸ್ ನೋಡಿ

ಮಡಿಕೇರಿಯ ಮೂರ್ನಾಡು ಎಂಬ ಅದ್ಭುತ ಸ್ಥಳದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ. ಅಲ್ಲಿ ಬಸ್ ನಿಲ್ದಾಣದ ಸೆಟ್ ಸಹ ಹಾಕಲಾಗಿತ್ತು. ಈ ಬಸ್ ನಿಲ್ದಾಣ ಚಿತ್ರದಲ್ಲಿ ಪ್ರಮುಖಪಾತ್ರ ವಹಿಸಿದೆ. ಶೀಘ್ರದಲ್ಲೇ ಹಾಡುಗಳನ್ನು ಬಿಡುಗಡೆ ಮಾಡುವ ಯೋಜನೆ ಇದೆ ಎಂದು ನಿರ್ದೇಶಕ ಯತಿರಾಜ್ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News