/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

VESHA: ಟ್ರೈಲರ್‌ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ "ವೇಷ"..! 

VESHA Kannada Movie: ಮರಿ ಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ "ವೇಷ" ಚಿತ್ರದ ಟ್ರೈಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Oct 4, 2023, 09:35 PM IST
  • ಟ್ರೈಲರ್ ಮೂಲಕವೇ ಕುತೂಹಲ ಮೂಡಿಸಿರುವ ಹೊಸಬರ ‘ವೇಷ’ ಸಿನಿಮಾ
  • ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್‍ನಲ್ಲಿ ಬಿಡುಗಡೆಯಾಗಿರುವ "ವೇಷ" ಚಿತ್ರದ ಟ್ರೈಲರ್
  • ಟ್ರೈಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ ಮರಿ ಟೈಗರ್ ವಿನೋದ್ ಪ್ರಭಾಕರ್
VESHA: ಟ್ರೈಲರ್‌ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ "ವೇಷ"..!  title=
ಕುತೂಹಲ ಮೂಡಿಸಿರುವ ಹೊಸಬರ ‘ವೇಷ’

ಬೆಂಗಳೂರು: ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕ ನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ "ವೇಷ" ಚಿತ್ರದ ಟ್ರೈಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್‍ನಲ್ಲಿ ಬಿಡುಗಡೆಯಾಗಿದೆ‌. ಮರಿ ಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ "ವೇಷ" ಚಿತ್ರದ ಟ್ರೈಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು "ವೇಷ"ದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ "ವೇಷ" ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಹಾಗೆ ನಾಯಕನಿಗೆ ಯಾವುದೋ ಒಂದು ಸಂದರ್ಭ "ವೇಷ" ಹಾಕುವ ಹಾಗೆ ಮಾಡುತ್ತದೆ. ಟ್ರೈಲರ್ ಮೂಲಕ ಹೊರಬಂದಿರುವ "ವೇಷ" ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಬರಲಿದೆ. ಈತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ನಿರ್ದೇಶಕ ಕೃಷ್ಣ ನಾಡ್ಪಾಲ್.

ಇದನ್ನೂ ಓದಿ: ಕೋಪಗೊಂಡು ವೇದಿಕೆಯಿಂದಲೇ ಕೆಳಗಿಳಿದು ಬಂದ ಸುದೀಪ್‌..!

ನಾನು ಮೂಲತಃ ರಂಗಭೂಮಿ ಕಲಾವಿದ. ನಟನೆ ನನ್ನ ಹವ್ಯಾಸ. "ವೇಷ" ಚಿತ್ರ ಆರಂಭವಾದಾಗ ನಾಯಕನ ಹುಡುಕಾಟದಲ್ಲಿದ್ದೆವು. ಆನಂತರ ಅನಿರೀಕ್ಷಿತವಾಗಿ ನಾನೇ ಈ ಚಿತ್ರದ ನಾಯಕನಾಗಿ ನಟಿಸಿದ್ದೇನೆ. ನಿರ್ಮಾಣವನ್ನು ಮಾಡಿದ್ದೇನೆ. ವಿನೋದ್ ಪ್ರಭಾಕರ್ ಅವರು ನಮಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ ಎಂದರು ನಾಯಕ-ನಿರ್ಮಾಪಕ ರಾಘವೇಂದ್ರ.

ನಾಯಕಿ ನಿಧಿ ಮಾರೋಲಿ, ಸೌಖ್ಯ ಗೌಡ, ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಜಯ್ ಶೆಟ್ಟಿ, ರಾಜ ಅಲಿ, ಶಿಲ್ಪ ಕುಮಟಾ, ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ್ ಹಾಗೂ ಕ್ರಿಯೇಟಿವ್ ಹೆಡ್ ಕೀರ್ತನ್ ಶೆಟ್ಟಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ "ವೇಷ" ಚಿತ್ರದ ಕುರಿತು ಮಾತನಾಡಿದರು. ಚಿತ್ರದ ವಿತರಣೆಯನ್ನು ಕೃಷಿ ಸ್ಟುಡಿಯೋಸ್ ಮತ್ತು ಸಚಿತ್ ಫಿಲ್ಮ್ಸ್ ನ ಮಾಲೀಕರಾದ ವೆಂಕಟ್‍ಗೌಡ ಅವರು ಮಾಡಲಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅಷ್ಟೇ ಬ್ಯೂಟಿಫುಲ್‌ ಅವರ ತಾಯಿ.. ಫೋಟೋ ನೋಡಿ ದೃಷ್ಟಿ ತೆಗೀರಿ ಅಂದ್ರು ನೆಟ್ಟಿಜನ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.