Viral Video: ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯ ಬಂಧನ!

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ‌ ಸ್ಯಾಂಡಲ್‌ವುಡ್ ನಟ, ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ A2 ಆರೋಪಿಯಾಗಿರುವ ದರ್ಶನ್‌ ಸೇರಿದಂತೆ ನಾಲ್ವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ACMM ಕೋರ್ಟ್ ಆದೇಶಿಸಿತ್ತು. ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. 

Written by - Puttaraj K Alur | Last Updated : Jun 25, 2024, 05:43 PM IST
  • ನಿರ್ಮಾಪಕ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ ದರ್ಶನ್‌ ಅಭಿಮಾನಿ ಅರೆಸ್ಟ್!
  • ನಟ ಪ್ರಥಮ್‌ & ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಚೇತನ್
  • ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಚೇತನ್‌ ವಿರುದ್ಧ ಎಫ್‍ಐಆರ್ ದಾಖಲು
Viral Video: ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯ ಬಂಧನ! title=
ನಟ ದರ್ಶನ್‌ ಅಭಿಮಾನಿ ಅರೆಸ್ಟ್!

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ‌ ಸ್ಯಾಂಡಲ್‌ವುಡ್ ನಟ, ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ A2 ಆರೋಪಿಯಾಗಿರುವ ದರ್ಶನ್‌ ಸೇರಿದಂತೆ ನಾಲ್ವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಪ್ರಕರಣದ A೧ ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. 

ಇನ್ನು ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್‍ಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ಯಾರಕ್ ನಂ.3ರ ಭದ್ರತಾ ಕೊಠಡಿಯಲ್ಲಿರುವ ದರ್ಶಶ್‌ಗೆ ಜೈಲಿನ ಇನ್ಸ್‌ಪೆಕ್ಟರ್ ಮತ್ತು ಮೂವರು ಸಿಬ್ಬಂದಿ ಭದ್ರತೆ ನೀಡುತ್ತಿದ್ದಾರೆ. ದರ್ಶನ್ ನೋಡಲು ಜೈಲಿನ ಕೈದಿಗಳು ಬರವ ಸಾಧ್ಯತೆ ಹಿನ್ನೆಲೆ ಬ್ಯಾರಕ್ 3ರ ಬಳಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂಓದಿ: ನಟ ದರ್ಶನ್‌ & ಗ್ಯಾಂಗ್‌ಗೆ 3ನೇ ದಿನ ಜೈಲುವಾಸ

ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್‌ ಅಭಿಮಾನಿ ಅರೆಸ್ಟ್!

ನಟ ದರ್ಶನ್ ಅರೆಸ್ಟ್‌ ಆಗುತ್ತಿದ್ದಂತೆಯೇ ಅವರು ಲಕ್ಷಾಂತರ ಅಭಿಮಾನಿಗಳಿಗೆ ಆಘಾತವಾಗಿದೆ. ʼದಾಸʼನ ನೂರಾರು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ದರ್ಶನ್ ಬಂಧನ ಖಂಡಿಸಿರುವ ಅನೇಕರು ತಮ್ಮ ನೆಚ್ಚಿನ ನಟನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ದರ್ಶನ್‌ ವಿರುದ್ಧ ಮಾತನಾಡುವವರಿಗೆ ಬೆದರಿಕೆ ಹಾಕಿದ್ದಾರೆ. ಅದರಂತೆ ನಟ ಪ್ರಥಮ್ ಮತ್ತು ನಿರ್ಮಾಪಕ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಥಮ್ ಹಾಗೂ ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಚೇತನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತ್ತೂರಿನಲ್ಲಿ ದರ್ಶನ್ ಅಭಿಮಾನಿ ಚೇತನ್‌ನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಅಭಿಮಾನಿ ನಾಗೇಶ್ ಎಂಬಾತನಿಗೆ ಹುಡುಕಾಟ ನಡೆಸಲಾಗುತ್ತಿದೆ ಎನ್ನಲಾಗಿದೆ. 

ಇದನ್ನೂಓದಿ: ನಟ ದರ್ಶನ್‌ಗೆ ಕಾದಿದೆಯಾ ಮತ್ತೊಂದು ಶಾಕ್‌..?

ಬೆದರಿಕೆ ಹಾಕಿದ ಅಭಿಮಾನಿಗಳ ಮೇಲೆ PCR ದಾಖಲಿಸಲಾಗಿದೆ. ಕೋರ್ಟ್ ಸೂಚನೆಯಂತೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‍ಐಆರ್ ಸಹ ದಾಖಲಿಸಲಾಗಿದೆ. ಪೊಲೀಸರು ಅರೆಸ್ಟ್‌ ಮಾಡುತ್ತಿದ್ದಂತೆಯೇ ಉಮಾಪತಿಗೌಡ ಹಾಗೂ ಪ್ರಥಮ್‌ಗೆ ಚೇತನ್‌ ಕ್ಷೆಮೆ ಕೇಳಿದ್ದಾನೆ. ʼನನ್ನದು ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ. ನಾನು ಆ ರೀತಿ ಮಾತನಾಡಬಾರದಿತ್ತು. ಇನ್ಮುಂದೆ ನಾನು ಆ ರೀತಿ ಮಾತನಾಡುವುದಿಲ್ಲ. ನಾನು ಕಾನೂನು ಬದ್ಧವಾಗಿ ನಡೆದುಕೊಳ್ತೀನಿ, ಕ್ಷಮಿಸಿʼ ಅಂತಾ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News