Padavi Poorva Trailer: ‘ಪದವಿಪೂರ್ವ’ ಟ್ರೈಲರ್ ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್

Padavi Poorva Trailer Launch: ಈ ಚಿತ್ರದ ಟ್ರೈಲರ್ ಅನ್ನು ಅಭಿಷೇಕ್ ಅಂಬರೀಶ್ ಅವರಿಂದ ಬಿಡುಗಡೆ ಮಾಡಿಸಬೇಕು ಅನ್ನೋದು ನನ್ನ ಹಾಗೂ ನಮ್ಮ ಚಿತ್ರತಂಡದ ಆಸೆಯಾಗಿತ್ತು ಎಂದು ಯೋಗರಾಜ್ ಭಟ್ ಹೇಳಿದರು.

Written by - Puttaraj K Alur | Last Updated : Dec 24, 2022, 10:46 PM IST
  • ‘ಪದವಿಪೂರ್ವ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ನಟ ಅಭಿಷೇಕ್ ಅಂಬರೀಶ್
  • ಯೋಗರಾಜ್ ಭಟ್ ನಿರ್ದೇಶನದ ಚಿತ್ರದ ಹೊಸತನದ ಬಗ್ಗೆ ಯಂಗ್ ರೆಬೆಲ್ ಸ್ಟಾರ್ ಮೆಚ್ಚುಗೆ
  • ಡಿ.30ಕ್ಕೆ ಬಿಡುಗೆಯಾಗಲಿರುವ ‘ಪದವಿಪೂರ್ವ’ ನೋಡಿ ಹಾರೈಸಿ ಎಂದ ಯೋಗರಾಜ್ ಭಟ್
Padavi Poorva Trailer: ‘ಪದವಿಪೂರ್ವ’ ಟ್ರೈಲರ್ ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್  title=
‘ಪದವಿಪೂರ್ವ’ ಟ್ರೈಲರ್ ಬಿಡುಗಡೆ

ಬೆಂಗಳೂರು: ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿರುವ ಹೊಸ ಪ್ರತಿಭೆಗಳ ‘ಪದವಿಪೂರ್ವ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ‘ಪದವಿಪೂರ್ವ’ ಚಿತ್ರದ ಟ್ರೈಲ್ ರಿಲೀಸ್ ಮಾಡಿದ್ದಾರೆ.  

ಈ ಚಿತ್ರದ ನಾಯಕ ಪೃಥ್ವಿ ಶಾಮನೂರು ಅವರ ಉತ್ಸಾಹ ನೋಡಿದರೆ ಖುಷಿಯಾಗುತ್ತಿದೆ. ಟ್ರೈಲರ್ ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ‌ ಅವರ ಸಂಗೀತ ನಿರ್ದೇಶನ ಹಾಗೂ ‌ರೀರೆಕಾರ್ಡಿಂಗ್ ಅದ್ಭುತವಾಗಿದೆ. ಎಲ್ಲಾ ಕಲಾವಿದರ ಅಭಿನಯ ಅಮೋಘವಾಗಿದೆ. ನಿರ್ದೇಶಕ ಹರಿಪ್ರಸಾದ್ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಹಿರಿಯ ನಿರ್ದೇಶಕ ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಅಭಿಷೇಕ್ ಅಂಬರೀಶ್ ಶುಭ ಹಾರೈಸಿದರು.

ಇದನ್ನೂ ಓದಿ: Video : ಜೈಲಿನಲ್ಲಿ ಹಾಟ್‌ ಬ್ಯೂಟಿ ಉರ್ಫಿ ಜಾವೇದ್‌ ಹೇಗಿದ್ದಾರೆ ನೋಡಿ..

ಈ ಚಿತ್ರದ ಟ್ರೈಲರ್ ಅನ್ನು ಅಭಿಷೇಕ್ ಅಂಬರೀಶ್ ಅವರಿಂದ ಬಿಡುಗಡೆ ಮಾಡಿಸಬೇಕು ಅನ್ನೋದು ನನ್ನ ಹಾಗೂ ನಮ್ಮ ಚಿತ್ರತಂಡದ ಆಸೆಯಾಗಿತ್ತು. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಅಭಿಷೇಕ್ ಅವರಿಗೆ ಧನ್ಯವಾದ. ಈ ಹೊಸತಂಡ, ಹೊಸತರಹದ ಪ್ರಮೋಷನ್ ಮೂಲಕ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಡಿಸೆಂಬರ್ 30ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ, ಪ್ರೋತ್ಸಾಹ ನೀಡಿ ಎಂದು ಯೋಗರಾಜ್ ಭಟ್ ಮನವಿ ಮಾಡಿಕೊಂಡರು.

ಅಭಿಷೇಕ್ ಅಂಬರೀಶ್ ಟ್ರೈಲರ್ ಬಿಡುಗಡೆ ಮಾಡಿಕೊಟ್ಟಿದ್ದು ತುಂಬಾ ಸಂತೋಷವಾಗಿದೆ. ಪ್ರಮೋಷನ್ ಗಾಗಿ ರಾಜ್ಯದ ಬೇರೆಬೇರೆ ಊರುಗಳಿಗೆ ಹೋಗುತ್ತಿದ್ದೇವೆ. ಹೋದ ಕಡೆ ಎಲ್ಲಾ ನಮ್ಮನ್ನು ಗುರುತಿಸಿ, ಚಿತ್ರದ ಹಾಡುಗಳು ಹಾಗೂ ಟೀಸರ್ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿದೆ. ಎಲ್ಲರ ಬೆಂಬಲವಿರಲಿ ಎಂದು ಚಿತ್ರದ ಯುವನಾಯಕ ಪೃಥ್ವಿ ಶಾಮನೂರು ಹೇಳಿದರು.

ಇದನ್ನೂ ಓದಿ: Sneha Divorce : ʼನೀನು ಪರ್ಫೆಕ್ಟ್ ಅಲ್ಲ...!ʼ ಕೊನೆಗೂ ಗಂಡನ ಕುರಿತು ಸತ್ಯ ಬಿಚ್ಚಿಟ್ಟ ನಟಿ ಸ್ನೇಹಾ..!

ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ಹೇಳಿದ್ದೇನೆ. ಇದೇ ಡಿ.30ರಂದು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಎಂದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ಮನವಿ ಮಾಡಿದರು. ನಾಯಕಿ ಅಂಜಲಿ ಅನೀಶ್, ಯಶಾ ಶಿವಕುಮಾರ್, ಛಾಯಾಗ್ರಾಹಕ ಸಂತೋಷ ರೈ ಪಾತಾಜೆ, ನೃತ್ಯ ನಿರ್ದೇಶಕ ಧನಂಜಯ್ ಹಾಗೂ ನಿರ್ಮಾಪಕ ರವಿ ಶಾಮನೂರು ಇದೇ ವೇಳೆ "ಪದವಿಪೂರ್ವ"ದ ಬಗ್ಗೆ ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News