ಡಯಾಬಿಟಿಸ್ ರೋಗಿಗಳು ಬೆಲ್ಲ ತಿನ್ನಬಹುದೇ? ಕಾಡುವ ಪ್ರಶ್ನೆಗೆ ತಜ್ಞರ ಉತ್ತರವೇನು ?

ಮಧುಮೇಹ ಎನ್ನುವುದು ಈಗ ಸಣ್ಣ ವಯಸ್ಸಿನವರಲ್ಲಿಯೂ ಕಾಡುವ ಅಪಾಯಕಾರಿ ಕಾಯಿಲೆ. ಮಧುಮೇಹದ ಸಮಸ್ಯೆ ಇದ್ದವರು  ಸಕ್ಕರೆ ಬದಲು ಬೆಲ್ಲ ಸೇವಿಸಬಹುದೇ?  ಏನು ಹೇಳುತ್ತಾರೆ ತಜ್ಞರು ? 

Written by - Ranjitha R K | Last Updated : Aug 14, 2023, 03:57 PM IST
  • ಮಧುಮೇಹ ರೋಗಿಗಳು ಸಕ್ಕೆರೆ ಸೇವಿಸಬಾರದು
  • ಇದು ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ
  • ಹಾಗಿದ್ದರೆ ಬೆಲ್ಲ ಸೇವಿಸಬಹುದೇ?
ಡಯಾಬಿಟಿಸ್ ರೋಗಿಗಳು ಬೆಲ್ಲ ತಿನ್ನಬಹುದೇ?  ಕಾಡುವ ಪ್ರಶ್ನೆಗೆ ತಜ್ಞರ ಉತ್ತರವೇನು ?   title=

ಬೆಂಗಳೂರು : ಮಧುಮೇಹ ಎನ್ನುವುದು ಈಗ ಸಣ್ಣ ವಯಸ್ಸಿನವರಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಮಧುಮೇಹದ ಸಮಸ್ಯೆ ಇದ್ದವರು ತಮ್ಮ ಊಟ ತಿಂಡಿಯ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲವಾದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಿ, ಪ್ರಾಣಕ್ಕೆ ಸಂಚಕಾರವಾಗಬಹುದು. ಇನ್ನು ಹೆಚ್ಚಿನ ಗ್ಲೈಸೆಮಿಕ್ ಸೂಚ್ಯಂಕವಿರುವ ಆಹಾರವನ್ನು ಸೇವಿಸಿದರೆ, ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕೂಡಾ ಹೆಚ್ಚಿಸುತ್ತದೆ.

ಸಾಮಾನ್ಯವಾಗಿ ಮಧುಮೇಹ ರೋಗಿಗಳು ಸಕ್ಕೆರೆ ಸೇವಿಸಬಾರದು ಎಂದು ಹೇಳಲಾಗುತ್ತದೆ. ಆದರೆ ಸಕ್ಕರೆ ಬದಲು ಬೆಲ್ಲ ಸೇವಿಸಬಹುದು ಎನ್ನುವ ಅಭಿಪ್ರಾಯ ಬಹುತೇಕ ಮಂದಿಯದ್ದು. ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ ತಿನ್ನಬಾರದು ಬೆಳ್ಳ ತಿನ್ನಬಹುದು ಎನ್ನುವ ಅಭಿಪ್ರಾಯದೊಂದಿಗೆ ಸಕ್ಕರೆಗೆ ಪರ್ಯಾಯವಾಗಿ ಬೆಲ್ಲವನ್ನು ಬಳಸುತ್ತಾರೆ. ಇದು ಎಷ್ಟು ಸರಿ ? ನೀವು ಕೂಡಾ ಸಕ್ಕರೆಯ ಬದಲು ಬೆಲ್ಲವನ್ನು ಸೇವಿಸುತ್ತೀರಾ? ಹಾಗಿದ್ದರೆ ಈ ವಿಷಯವನ್ನು ತಿಳಿದುಕೊಳ್ಳುವುದು ಸೂಕ್ತ. ಮಧುಮೇಹಿಗಳು ಸಕ್ಕರೆ ಬದಲು ಬೆಲ್ಲ ಸೇವಿಸುತ್ತಿದ್ದರೆ ಅದು ಅವರ ಆರೋಗ್ಯಕ್ಕೆ ಹಾನಿಕಾರಕವಾಗಿ ಪರಿಣಮಿಸಬಹುದು.

ಇದನ್ನೂ ಓದಿ : ಏನೇ ಮಾಡಿದರೂ ಕೂದಲು ಉದುರುವುದು ನಿಲ್ಲುತ್ತಿಲ್ಲವೇ ? ಹಾಗಿದ್ದರೆ ದೇಹಕ್ಕೆ ಅಗತ್ಯವಿದೆ ಈ ಪೋಷಕಾಂಶ

ಬೆಲ್ಲವು ಹಾನಿಕಾರಕವಾಗಬಹುದು :
ಆಯುರ್ವೇದದ ಪ್ರಕಾರ ಮಧುಮೇಹ ರೋಗಿಗಳು ಬೆಲ್ಲವನ್ನು ತಿನ್ನಬಾರದು. ಶ್ವಾಸಕೋಶದ ಸೋಂಕು, ಗಂಟಲು ನೋವು, ಮೈಗ್ರೇನ್ ಮತ್ತು ಅಸ್ತಮಾ ಸಮಸ್ಯೆಯಲ್ಲಿ ಬೆಲ್ಲದ ಸೇವನೆ ಪ್ರಯೋಜನಕಾರಿಯಾಗಲಿದೆ. ಆದರೆ , ಮಧುಮೇಹದ ಸಮಸ್ಯೆಯಲ್ಲಿ ಬೆಲ್ಲ ಆರೋಗ್ಯವನ್ನು ಮತ್ತಷ್ಟು ಬಿಗಡಾಯಿಸಿ ಬಿಡಬಹುದು. ಬೆಲ್ಲದಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಮ್, ಪೊಟ್ಯಾಸಿಯಮ್, ತಾಮ್ರ ಮತ್ತು ರಂಜಕದಂತಹ ಅನೇಕ ಪೋಷಕಾಂಶಗಳಿವೆ. ಆದರೆ ಇದು ಮಧುಮೇಹ ರೋಗಿಗಳಿಗೆ ಸೂಕ್ತವಲ್ಲ.

ಹೆಚ್ಚಿನ ಗ್ಲೈಸೆಮಿಕ್ ಸೂಚ್ಯಂಕ :
ಬೆಲ್ಲದಲ್ಲಿ ಶೇಕಡಾ 65 ರಿಂದ 85 ರಷ್ಟು ಸುಕ್ರೋಸ್ ಇರುತ್ತದೆ. ಮಧುಮೇಹ ರೋಗಿಗಳಿಗೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಆಹಾರವನ್ನು ಸೇವಿಸಲು ಸಲಹೆ ನೀಡಲಾಗುತ್ತದೆ, ಆದರೆ ಬೆಲ್ಲದ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ಇದರ ಸೇವನೆಯು ಮಧುಮೇಹ ರೋಗಿಗಳಿಗೂ 
ಅಪಾಯಕಾರಿ.

ಇದನ್ನೂ ಓದಿ : ಕೆಂಪು ಮೆಣಸಿನಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳು..! ಕ್ಯಾನ್ಸರ್ ಮತ್ತು ಹೃದಯಕ್ಕೆ ಒಳ್ಳೆಯದು

ಬೆಲ್ಲದ ಬದಲಿಗೆ ಜೇನುತುಪ್ಪ ಬಳಸಿ : 
ಆರೋಗ್ಯ ತಜ್ಞರ ಪ್ರಕಾರ, ಮಧುಮೇಹ ರೋಗಿಗಳು ಬೆಲ್ಲವನ್ನು ತಿನ್ನಬಾರದು. ಆದರೆ ಸಿಹಿಗಾಗಿ ಬೆಲ್ಲದ ಬದಲು ಸಾವಯವ ಜೇನುತುಪ್ಪವನ್ನು ಸೇವಿಸಬಹುದು. ಸಕ್ಕರೆಯ ಬದಲು ಬೆಲ್ಲವನ್ನು ಸೇವಿಸಬಹುದು ಎಂಬ ಭಾವನೆ ಮಧುಮೇಹ ರೋಗಿಗಳಲ್ಲಿ ಇದೆ. ಆದರೆ ಇದು  ತಪ್ಪು ತಿಳುವಳಿಕೆ. ನಿಮಗೆ ಮಧುಮೇಹವಿಲ್ಲದಿದ್ದರೆ, ಸಕ್ಕರೆ ಬದಲು ಬೆಲ್ಲ ತಿನ್ನಬಹುದು. ಆದರೆ ಮಧುಮೇಹವಿದ್ದರೆ ಮಾತ್ರ ಸಕ್ಕರೆಯಂತೆ ಬೆಲ್ಲದಿಂದಲೂ ದೂರವಿರಬೇಕು. 

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News