ಕರಿಬೇವಿನ ನೀರನ್ನು ಪ್ರತಿದಿನ ಕುಡಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ

Curry Leaf Water Benefits: ಪ್ರತಿದಿನ ಕರಿಬೇವಿನ ನೀರು ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆಯುರ್ವೇದ ತಜ್ಞರು. ಇದರ ಗುಣಲಕ್ಷಣಗಳು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.  

Written by - Chetana Devarmani | Last Updated : Oct 9, 2023, 03:44 PM IST
  • ಪ್ರತಿದಿನ ಕರಿಬೇವಿನ ನೀರು ಕುಡಿಯಿರಿ
  • ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ
  • ರೋಗ್ಯ ಸಮಸ್ಯೆಗಳಿಂದ ಪರಿಹಾರ
ಕರಿಬೇವಿನ ನೀರನ್ನು ಪ್ರತಿದಿನ ಕುಡಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ  title=

Curry Leaf Water : ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಕರಿಬೇವಿನ ಎಲೆಗಳು ಪ್ರಮುಖ ಪಾತ್ರವಹಿಸುತ್ತವೆ. ಅದಕ್ಕಾಗಿಯೇ ಅನೇಕ ಜನರು ಇದನ್ನು ಅಡುಗೆಯಲ್ಲಿ ಬಳಸುತ್ತಾರೆ. ಆದರೆ, ಈ ಕರಿಬೇವು ಆಹಾರಕ್ಕೆ ಪರಿಮಳವನ್ನು ನೀಡುವುದಲ್ಲದೆ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು. ಇದರಲ್ಲಿ ಹಲವಾರು ಔಷಧೀಯ ಗುಣಗಳೂ ಇವೆ. ಆದ್ದರಿಂದ ತೀವ್ರವಾದ ಕಾಯಿಲೆಗಳನ್ನು ಸಹ ಸುಲಭವಾಗಿ ನಿವಾರಿಸುತ್ತವೆ. ಇದರೊಂದಿಗೆ ದೇಹವು ಕ್ರಿಯಾಶೀಲವಾಗುತ್ತದೆ.

ಪದೇ ಪದೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಕರಿಬೇವಿನ ಸೊಪ್ಪಿನಿಂದ ತಯಾರಿಸಿದ ಡಿಟಾಕ್ಸ್ ಪಾನೀಯವನ್ನು ಪ್ರತಿದಿನ ಸೇವಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು. 

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ: ದೇಹವನ್ನು ಆರೋಗ್ಯವಾಗಿಡಲು ಜೀರ್ಣಕ್ರಿಯೆಯ ಬೆಂಬಲ ಅತ್ಯಗತ್ಯ. ಆದ್ದರಿಂದ ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಕರಿಬೇವಿನ ಎಲೆಗಳ ಡಿಟಾಕ್ಸ್ ಪಾನೀಯವನ್ನು ಪ್ರತಿದಿನ ಕುಡಿಯಬೇಕು. ಇದರಲ್ಲಿರುವ ಕಿಣ್ವಗಳು ಕರುಳಿನ ಚಲನೆಯನ್ನು ಸುಗಮಗೊಳಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯನ್ನು ಸಹ ಸುಧಾರಿಸುತ್ತದೆ.

ಇದನ್ನೂ ಓದಿ : ಖಾಲಿ ಹೊಟ್ಟೆಯಲ್ಲಿ ಈ ತರಕಾರಿಯ ರಸ ಕುಡಿದರೆ ಒಂದೇ ವಾರದಲ್ಲಿ ಸರಾಗವಾಗಿ ಕರಗುತ್ತೆ ಹೊಟ್ಟೆಯ ಬೊಜ್ಜು 

ಒತ್ತಡವನ್ನು ಕಡಿಮೆ ಮಾಡುತ್ತದೆ: ಒತ್ತಡದ ಸಮಸ್ಯೆಗಳು ಸಾಮಾನ್ಯ..ಆದರೆ ಈ ಸಮಸ್ಯೆಗಳು ಚಿಕ್ಕ ಚಿಕ್ಕ ಭೇದವಿಲ್ಲದೆ ಎಲ್ಲರಲ್ಲೂ ಬರುತ್ತವೆ. ಆದ್ದರಿಂದ ನೀವು ಸಹ ಇಂತಹ ಸಮಸ್ಯೆಗಳಿಂದ ಬಳಲುತ್ತಿದ್ದರೆ ನೀವು ಕರಿ ಡಿಟಾಕ್ಸ್ ಪಾನೀಯವನ್ನು ಕುಡಿಯಬೇಕು. ಇದರ ಗುಣಲಕ್ಷಣಗಳು ಒತ್ತಡವನ್ನು ಸುಲಭವಾಗಿ ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ: ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಆದ್ದರಿಂದ ಪ್ರತಿದಿನ ಡಿಟಾಕ್ಸ್ ಪಾನೀಯವನ್ನು ಕುಡಿಯುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಹೃದ್ರೋಗದ ಅಪಾಯವೂ ಕಡಿಮೆಯಾಗುತ್ತದೆ.

ಮಧುಮೇಹ ನಿಯಂತ್ರಣ : ಮಧುಮೇಹಿಗಳಿಗೂ ಕರಿಬೇವಿನ ನೀರು ತುಂಬಾ ಪರಿಣಾಮಕಾರಿ. ಈ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶವೂ ನಿಯಂತ್ರಣದಲ್ಲಿರುತ್ತದೆ. ಇದರಲ್ಲಿರುವ ಕಾರ್ಬಜೋಲ್ ಆಲ್ಕಲಾಯ್ಡ್‌ಗಳು ಮಧುಮೇಹಿಗಳಲ್ಲಿ ಗ್ಲೂಕೋಸ್ ಮಟ್ಟವನ್ನು ಸಹ ಪರಿಣಾಮ ಬೀರುತ್ತವೆ.

ಇದನ್ನೂ ಓದಿ : ಡೆಂಗ್ಯೂ-ಮಲೇರಿಯಾ ಸೇರಿದಂತೆ 4 ಮಾರಕ ಕಾಯಿಲೆಗಳಿಗೆ ರಾಮಬಾಣ ಈ ಹಸಿರು ಎಲೆ!

(ಗಮನಿಸಿರಿ: ಇಲ್ಲಿ ನೀಡಲಾದ ಮನೆಮದ್ದಿನ ಮಾಹಿತಿ ನಿಮ್ಮ ಆರೋಗ್ಯಕ್ಕೆ  ಸಹಕಾರಿಯಾಗಬಹುದು. ಇಲ್ಲಿ ನೀಡಲಾದ ಸಲಹೆ ಪಾಲಿಸುವ ಮೊದಲು ಕಡ್ಡಾಯವಾಗಿ ನೀವು ವೈದ್ಯರ ಸಲಹೆ ಪಡೆದುಕೊಳ್ಳಿರಿ)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News