Leaves for diabetes : ಈ ಎರಡು ಮರಗಳ ಎಲೆಗಳನ್ನು ತಿನ್ನುವುದರಿಂದ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್

Leaves for diabetes : ಈ ಎರಡು ರೀತಿಯ ಎಲೆಗಳನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಸಾಧ್ಯವಾಗುತ್ತದೆ. ಈ ಎಲೆಗಳು ನಿಮ್ಮ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ನಿಮ್ಮ ರಕ್ತದೊತ್ತಡವನ್ನು ಕೂಡಾ ಕಡಿಮೆ ಮಾಡಲು ಸಹಾಯ ಮಾಡುತ್ತದೆ.   

Written by - Ranjitha R K | Last Updated : May 27, 2022, 12:41 PM IST
  • ದೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಹೆಚ್ಚಳವು ಮಧುಮೇಹದ ಸಂಕೇತವಾಗಿರುತ್ತದೆ.
  • ಮಧುಮೇಹ ಕೆಲವು ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತದೆ
  • ಮಧುಮೇಹ ರೋಗಿಗಳಿಗೆ ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸಬೇಕು
Leaves for diabetes : ಈ ಎರಡು ಮರಗಳ ಎಲೆಗಳನ್ನು ತಿನ್ನುವುದರಿಂದ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್  title=
Leaves for diabetes (file photo)

ನವದೆಹಲಿ : Leaves for diabetes : ದೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಹೆಚ್ಚಳವು ಮಧುಮೇಹದ ಸಂಕೇತವಾಗಿರುತ್ತದೆ. ಈ ಸ್ಥಿತಿಯು ನಿಮ್ಮ ಆಹಾರ ಮತ್ತು ಪಾನೀಯಕ್ಕೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಮುಂದೆ ಇದು ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕುರುಡುತನ, ಹೃದಯಾಘಾತ ಮುಂತಾದ ಗಂಭೀರ ಸಮಸ್ಯೆಗಳಿಗೆ ಇದು ಕಾರಣವಾಗುತ್ತದೆ. ಮಧುಮೇಹ ರೋಗಿಗಳಿಗೆ ಯಾವಾಗಲೂ ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸುವಂತೆ ಸೂಚಿಸಲಾಗುತ್ತದೆ. 

ಹಾಗಿದ್ದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ಏನು ಮಾಡಬೇಕು ಎಂಬ ಪ್ರಶ್ನೆ ಸಾಮಾನ್ಯವಾಗಿ ಮನಸ್ಸಿನಲ್ಲಿ ಮೂಡುತ್ತದೆ. ಸಾಮಾನ್ಯವಾಗಿ ರಕ್ತದಲ್ಲಿ ಅಧಿಕ ಮತ್ತು ಕಡಿಮೆ ಸಕ್ಕರೆ ಪ್ರಮಾಣ ಎರಡನ್ನೂ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುವ ವಸ್ತುಗಳನ್ನು ಸೇವಿಸಬೇಕು. ಈ ಎರಡು ರೀತಿಯ ಎಲೆಗಳನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಸಾಧ್ಯವಾಗುತ್ತದೆ.

ಇದನ್ನೂ ಓದಿ : High Cholesterol Food: ಈ ವಸ್ತುಗಳು ಇದ್ದಕ್ಕಿದ್ದಂತೆ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು

ಯಾವುವು ಆ ಎಲೆಗಳು ? : 
ಈ ಎಲೆಗಳು ನಿಮ್ಮ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ನಿಮ್ಮ ರಕ್ತದೊತ್ತಡವನ್ನು ಕೂಡಾ ಕಡಿಮೆ ಮಾಡಲು ಸಹಾಯ ಮಾಡುತ್ತದೆ.  ಅವುಗಳೆಂದರೆ 1-ಬೇವಿನ ಎಲೆಗಳು 2- ಕರಿಬೇವಿನ ಎಲೆಗಳು

ಮಧುಮೇಹದಲ್ಲಿ ಕರಿಬೇವಿನ ಪ್ರಯೋಜನಗಳು :
ಸಾಮಾನ್ಯವಾಗಿ ನಾವು ಮಾಡುವ ಎಲ್ಲಾ ಖಾದ್ಯಗಳಲ್ಲಿ ಕರಿಬೇವು ಸಿಗುತ್ತದೆ. ಯಾಕೆಂದರೆ ಪಲ್ಯ, ಸಾಂಬಾರ್, ರಸಂ, ಚಿತ್ರಾನಾ, ಮೊಸರನ್ನ , ಪುಲಿಒಗರೇ ಹೀಗೆ ಏನೇ ಅಡುಗೆ ಮಾಡಿದರೂ ಅದರ ಒಗ್ಗರಣೆಗೆ ಕರಿಬೇವು ಬಳಸಿಯೇ ಬಳಸುತ್ತೇವೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಅನೇಕ ಅದ್ಭುತ ಔಷಧೀಯ ಗುಣಗಳನ್ನು ಕೂಡಾ ಹೊಂದಿದೆ. ಕರಿಬೇವಿನ ಎಲೆಗಳಲ್ಲಿರುವ ಫೈಬರ್ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಇದರಿಂದಾಗಿ  ರಕ್ತದಲ್ಲಿನ ಹೆಚ್ಚಿನ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಖಾಲಿ ಹೊಟ್ಟೆಯಲ್ಲಿ ಈ ಎಲೆಯನ್ನು ಜಗಿಯುವುದರಿಂದ ಇನ್ಸುಲಿನ್ ಕೂಡ ಹೆಚ್ಚಾಗುತ್ತದೆ. ದಿನಕ್ಕೆ 10 ಎಲೆಗಳನ್ನು ಅಗಿಯಬಹುದು ಅಥವಾ  ಅದರ ರಸವನ್ನು ತೆಗೆದು ಕುಡಿಯಬಹುದು.

ಇದನ್ನೂ ಓದಿ : Weight Loss Drink: ತೂಕ ಇಳಿಸಿಕೊಳ್ಳಲು ಈ ವಿಶೇಷ ಕಾಫಿ ಕುಡಿಯಿರಿ

ಮಧುಮೇಹದಲ್ಲಿ ಬೇವಿನ ಎಲೆಗಳ ಪ್ರಯೋಜನಗಳು :
ಬೇವಿನ ಎಲೆಗಳನ್ನು ಜಗಿಯುವ ಮೂಲಕ  ದೇಹಕ್ಕೆ ಅನೇಕ ಔಷಧೀಯ ಪ್ರಯೋಜನಗಳನ್ನು ಪಡೆಯಬಹುದು. ಬೇವಿನ ಕಾಂಡ, ಹಣ್ಣುಗಳೆಲ್ಲವೂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಚರ್ಮ ರೋಗಗಳಿಂದ ಹಿಡಿದು ಜ್ವರ, ಹಲ್ಲುನೋವುಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಗಳನ್ನು ಜಗಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. 

 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News