Diabetes: ಬೇಸಿಗೆಯಲ್ಲಿ ಮಧುಮೇಹವನ್ನು ನಿಯಂತ್ರಿಸುವ 5 ಸುಲಭ ವಿಧಾನಗಳು

Diabetes control in summer: ಬಿಸಿ ಮತ್ತು ಆರ್ದ್ರ ವಾತಾವರಣವು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಅವುಗಳನ್ನು ನಿಯಂತ್ರಣದಲ್ಲಿಡಲು ಹೆಚ್ಚು ಕಷ್ಟವಾಗುತ್ತದೆ. ಇದು ಮಧುಮೇಹಿಗಳ ಚಿಂತೆಗೆ ಕಾರಣವಾಗುತ್ತದೆ.   

Written by - Chetana Devarmani | Last Updated : Apr 19, 2023, 07:29 AM IST
  • ಬೇಸಿಗೆಯಲ್ಲಿ ಮಧುಮೇಹ ಹೆಚ್ಚುತ್ತಿದೆಯೇ?
  • ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವ ಚಿಂತೆಯೇ!
  • ಮಧುಮೇಹವನ್ನು ನಿಯಂತ್ರಿಸುವ 5 ಸುಲಭ ವಿಧಾನಗಳು
Diabetes: ಬೇಸಿಗೆಯಲ್ಲಿ ಮಧುಮೇಹವನ್ನು ನಿಯಂತ್ರಿಸುವ 5 ಸುಲಭ ವಿಧಾನಗಳು  title=
Diabetes

Diabetes control in summer: ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹರಸಾಹಸ ಪಡುವವರಿಗೆ ಬೇಸಿಗೆಯು ಕಷ್ಟಕರ ಸಮಯವಾಗಿರುತ್ತದೆ. ಬೇಸಿಗೆಯಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಕಾರಣ ಮಧುಮೇಹ ನಿಯಂತ್ರಣದಲ್ಲಿಡಲು ಹೆಚ್ಚು ಕಷ್ಟವಾಗುತ್ತದೆ. ಬೇಸಿಗೆಯಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗಲು ನಿರ್ಜಲೀಕರಣವು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ದೇಹದಲ್ಲಿ ನೀರಿನ ಕೊರತೆ ಉಂಟಾದಾಗ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳು ಬಿಡುಗಡೆಯಾಗುತ್ತವೆ. ಇದು ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಹೆಚ್ಚಿಸಬಹುದು. ಇನ್ನೊಂದು ಕಾರಣವೆಂದರೆ ಶಾಖದ ಕಾರಣದಿಂದಾಗಿ ಜನರುದೈಹಿಕವಾಗಿ  ಕಡಿಮೆ ಸಕ್ರಿಯರಾಗಬಹುದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹೆಚ್ಚು ಕಷ್ಟಕರವಾಗಬಹುದು. ಜನರು ಬೇಸಿಗೆಯ ತಿಂಗಳುಗಳಲ್ಲಿ ಹೆಚ್ಚು ಸಿಹಿತಿಂಡಿಗಳು ಅಥವಾ ಐಸ್ ಕ್ರೀಮ್, ತಂಪು ಪಾನೀಯಗಳನ್ನು ಸೇವಿಸುತ್ತಾರೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಏರಿಕೆಗೆ ಕಾರಣವಾಗಬಹುದು.

ಬೇಸಿಗೆಯಲ್ಲಿ ಮಧುಮೇಹವನ್ನು ಹೇಗೆ ನಿಯಂತ್ರಿಸುವುದು: 

ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಿರಿ: ಹಣ್ಣುಗಳು ಮತ್ತು ತರಕಾರಿಗಳಲ್ಲಿ ಫೈಬರ್ ಪ್ರಮಾಣವು ಅಧಿಕವಾಗಿದೆ ಮತ್ತು ಇದು ದೇಹಕ್ಕೆ ತುಂಬಾ ಉಪಯುಕ್ತವಾಗಿದೆ. ಇದು ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಕುಡಿಯಬೇಡಿ ಕಬ್ಬಿನ ಜ್ಯೂಸ್!

ಊಟಕ್ಕೆ ಟೈಮ್‌ ಟೇಬಲ್‌ ಹಾಕಿಕೊಳ್ಳಿ: ಬೇಸಿಗೆಯಲ್ಲಿ ಊಟದ ಸಮಯದ ನಡುವೆ ಹೆಚ್ಚು ಗ್ಯಾಪ್‌ ಇಟ್ಟುಕೊಳ್ಳಬೇಡಿ ಮತ್ತು ನಿಮ್ಮ ಊಟದ ಸಮಯವನ್ನು ನಿಯಮಿತವಾಗಿ ಇರಿಸಿ.  

ಡಿಹೈಡ್ರೇಷನ್‌ ಆಗದಂತೆ ಎಚ್ಚರವಹಿಸಿ: ಬೇಸಿಗೆಯಲ್ಲಿ ದೇಹದಿಂದ ಸಾಕಷ್ಟು ನೀರು ಹೊರಬರುತ್ತದೆ, ಆದ್ದರಿಂದ ದೇಹವನ್ನು ತೇವಾಂಶದಿಂದ ಇಡುವುದು ಬಹಳ ಮುಖ್ಯ. ಮಧುಮೇಹ ಇರುವವರು ದಿನಕ್ಕೆ ಕನಿಷ್ಠ 3-4 ಲೀಟರ್ ನೀರನ್ನು ಕುಡಿಯಬೇಕು.

ವ್ಯಾಯಾಮ: ಬೇಸಿಗೆಯಲ್ಲಿ ಈಜು, ಯೋಗ ಮುಂತಾದ ದೈಹಿಕ ಚಟುವಟಿಕೆಗಳನ್ನು ಮಾಡುವುದರಿಂದ ಮಧುಮೇಹ ರೋಗಿಗಳು ದೇಹದ ಉಷ್ಣತೆಯನ್ನು ಕಡಿಮೆ ಮಾಡಬಹುದು. ಅದು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ಚರ್ಮವನ್ನು ರಕ್ಷಿಸಿ: ಮಧುಮೇಹ ಹೊಂದಿರುವ ಜನರು ಚರ್ಮದ ಸಮಸ್ಯೆಗಳಿಗೆ ಹೆಚ್ಚು ಒಳಗಾಗುತ್ತಾರೆ. ಬಲವಾದ ಸೂರ್ಯನ ಬೆಳಕು ಈ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ. ತಿಳಿ ಬಣ್ಣದ ಬಟ್ಟೆ, ಅಗಲವಾದ ಅಂಚುಳ್ಳ ಟೋಪಿ ಧರಿಸಿ ನಿಮ್ಮ ಚರ್ಮವನ್ನು ರಕ್ಷಿಸಿ. ಅಲ್ಲದೆ, ಕನಿಷ್ಠ 30 SPF ಇರುವ ಸನ್‌ಸ್ಕ್ರೀನ್ ಅನ್ನು ಅನ್ವಯಿಸಿ.

ಇದನ್ನೂ ಓದಿ:  ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿ ತಿನ್ನುವುದರಿಂದಾಗುವ ಈ ಲಾಭಗಳು ನಿಮಗೆ ತಿಳಿದಿವೆಯೇ?

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಜೀ ಕನ್ನಡ ನ್ಯೂಸ್‌ ಪುಷ್ಠಿಕರಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News