ಕೇರಳದ ಮಲಪ್ಪುರಂನಲ್ಲಿ ಹೌಸ್‌ಬೋಟ್ ಮುಳುಗಿ 16 ಜನರು ಸಾವು

ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್‌ಬೋಟ್ ಮುಳುಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಅದರಲ್ಲಿ ಹೆಚ್ಚಿನವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

Written by - Zee Kannada News Desk | Last Updated : May 8, 2023, 01:09 AM IST
  • ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ.
  • ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೇರಳದ ಮಲಪ್ಪುರಂನಲ್ಲಿ ಹೌಸ್‌ಬೋಟ್ ಮುಳುಗಿ 16 ಜನರು ಸಾವು title=
screengrab

ಮಲಪ್ಪುರಂ: ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್‌ಬೋಟ್ ಮುಳುಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಅದರಲ್ಲಿ ಹೆಚ್ಚಿನವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ.ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ವಯಂ ಸೇವಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಪೊಲೀಸರ ಪ್ರಕಾರ, ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.

ಇದನ್ನೂ ಓದಿ: "ನಿಜವಾದ ಡಬಲ್ ಇಂಜಿನ್ ಸರ್ಕಾರ ಎಂದರೆ ಆರ್ಥಿಕ ವಿಕಾಸ ಮತ್ತು ಸಾಮಾಜಿಕ ಸದ್ಭಾವನೆ ಇರುವಂತದ್ದು"

ಈ ದುರ್ಘಟನೆಗೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ "ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ.ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾವಿಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ್ದು, ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಿಎಂ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ನಾಳೆ ಬೆಳಗ್ಗೆ ತಾನೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Karnataka Election 2023: ವರುಣಾ ಸ್ಪರ್ಧೆಯ ಗುಟ್ಟು ಬಿಚ್ಚಿಟ್ಟ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ!

ಕೇರಳದ ಕ್ರೀಡಾ ಸಚಿವ ವಿ ಅಬ್ದುರಹಿಮಾನ್ ಅವರು ಪ್ರವಾಸೋದ್ಯಮ ಸಚಿವ ಪಿಎ ಮೊಹಮ್ಮದ್ ರಿಯಾಸ್ ಅವರೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಸಂಯೋಜಿಸುತ್ತಿದ್ದಾರೆ ಎಂದು ಪಿಟಿಐಗೆ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News