ಕೇರಳದ ಅತ್ಯಂತ ಕಿರಿಯ ಮೇಯರ್ ಆದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ..!

21 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ಅವರು ತಿರುವನಂತಪುರಂನ ಮುಂದಿನ ಮೇಯರ್ ಆಗಲು ಸಜ್ಜಾಗಿದ್ದಾರೆ. ಅಧಿಕಾರ ವಹಿಸಿಕೊಂಡರೆ ರಾಜ್ಯದ ಅತ್ಯಂತ ಕಿರಿಯ ಮೇಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.ಸಿಪಿಎಂ ಅಭ್ಯರ್ಥಿಯಾಗಿದ್ದ ಆರ್ಯ, ಮುದವನ್ಮುಗಲ್ ವಾರ್ಡ್‌ನಿಂದ ಯುಡಿಎಫ್ ಅಭ್ಯರ್ಥಿ ಶ್ರೀಕಾಲ ಅವರನ್ನು 2872 ಮತಗಳಿಂದ ಸೋಲಿಸಿದರು.

Last Updated : Dec 25, 2020, 04:22 PM IST
ಕೇರಳದ ಅತ್ಯಂತ ಕಿರಿಯ ಮೇಯರ್ ಆದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ..! title=
Photo Courtesy: Facebook

ನವದೆಹಲಿ: 21 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ಅವರು ತಿರುವನಂತಪುರಂನ ಮುಂದಿನ ಮೇಯರ್ ಆಗಲು ಸಜ್ಜಾಗಿದ್ದಾರೆ.ಅವರು ಅಧಿಕಾರ ವಹಿಸಿಕೊಂಡರೆ ರಾಜ್ಯದ ಅತ್ಯಂತ ಕಿರಿಯ ಮೇಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.ಸಿಪಿಎಂ ಅಭ್ಯರ್ಥಿಯಾಗಿದ್ದ ಆರ್ಯ, ಮುದವನ್ಮುಗಲ್ ವಾರ್ಡ್‌ನಿಂದ ಯುಡಿಎಫ್ ಅಭ್ಯರ್ಥಿ ಶ್ರೀಕಾಲ ಅವರನ್ನು 2872 ಮತಗಳಿಂದ ಸೋಲಿಸಿದರು.

ದೇವಸ್ಥಾನದ ಆನೆಯನ್ನು ಕಟ್ಟಿ ಹಾಕಿ ಚಿತ್ರ ಹಿಂಸೆ: ವೀಡಿಯೋ ವೈರಲ್!

ಆರ್ಯ ಆಲ್ ಸೇಂಟ್ಸ್ ಕಾಲೇಜಿನ ತಿರುವನಂತಪುರಂನಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ಗಣಿತ ವಿದ್ಯಾರ್ಥಿನಿ, ಆರ್ಯ ಬಾಲಾ ಸಂಘದ ರಾಜ್ಯ ಅಧ್ಯಕ್ಷೆ ಮತ್ತು ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಎಸ್‌ಎಫ್‌ಐನ ರಾಜ್ಯ ಪದಾಧಿಕಾರಿಯೂ ಆಗಿದ್ದಾರೆ.ಅಷ್ಟೇ ಅಲ್ಲದೆ ಅವರು ಸಿಪಿಎಂ ಶಾಖಾ ಸಮಿತಿ ಸದಸ್ಯೆಯೂ ಹೌದು.ಅವರ ತಂದೆ ರಾಜೇಂದ್ರನ್ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಮತ್ತು ತಾಯಿ ಶ್ರೀಲತಾ ಎಲ್ಐಸಿ ಏಜೆಂಟರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Congratulations Miss.Arya Rajendran New and the youngest of all ... Mayor Thiruvananthapuram

Posted by RJ Neenu on Friday, 25 December 2020

ಶುಕ್ರವಾರ ಇಲ್ಲಿ ಭೇಟಿಯಾದ ಸಿಪಿಎಂ ಜಿಲ್ಲಾ ಸೆಕ್ರೆಟರಿಯಟ್ ಆರ್ಯ ಅವರ ಹೆಸರನ್ನು ಅಂತಿಮಗೊಳಿಸಿದೆ ಎನ್ನಲಾಗಿದೆ. ಯುವಜನರನ್ನು ಈ ಹುದ್ದೆಗೆ ಪರಿಗಣಿಸಬೇಕು ಎಂದು ನಿರ್ಧರಿಸಿದ್ದರಿಂದ ಪಕ್ಷವು ಅವಳ ಹೆಸರನ್ನು ಅಂತಿಮಗೊಳಿಸಿತು ಎನ್ನಲಾಗಿದೆ.ಈ ಹುದ್ದೆಗೆ ಸಂಬಂಧಿಸಿದಂತೆ ಪಕ್ಷದಿಂದ ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಆರ್ಯ ಹೇಳಿದ್ದಾರೆ ಮತ್ತು ತನಗೆ ನೀಡಲಾಗಿರುವ ಯಾವುದೇ ಜವಾಬ್ದಾರಿಯನ್ನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಹೇಳಿದರು.

ದೇಶದ ಮೊದಲ ರೋಬೋಟ್ ಪೊಲೀಸ್ ಉದ್ಘಾಟಿಸಿದ ಕೇರಳ ಸಿಎಂ

'ನಾನು ಇದೀಗ ಕೌನ್ಸಿಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ, ಆದರೆ ಪಕ್ಷವು ನನಗೆ ನೀಡಿದ ಜವಾಬ್ದಾರಿಗಳನ್ನು ನಾನು ತೆಗೆದುಕೊಳ್ಳುತ್ತೇನೆ 'ಎಂದು ಅವರು ಹೇಳಿದರು.ಮಹಿಳೆಯರ ಸಮಸ್ಯೆಗಳು ಮತ್ತು ಇತರ ಅಭಿವೃದ್ಧಿ ಚಟುವಟಿಕೆಗಳನ್ನು ಪರಿಹರಿಸುವಲ್ಲಿ ಅವರ ಮುಖ್ಯ ಗಮನವಿರುತ್ತದೆ ಎಂದು ಆರ್ಯ ಹೇಳಿದರು.

Trending News