ದೆಹಲಿ ಹಿಂಸಾಚಾರ: ಕೇಂದ್ರ ಮತ್ತು ಕೇಜ್ರಿವಾಲ್ ಸರ್ಕಾರ ಮೂಕ ಪ್ರೇಕ್ಷಕರಾಗಿವೆ-ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಮತ್ತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು,ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಿರಂತರವಾಗಿ ನಡೆಯುತ್ತಿರುವ ಸಂದರ್ಭದಲ್ಲಿ ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಆರೋಪಿಸಿದರು. ಇದೇ ಮತ್ತೊಮ್ಮೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ವಜಾಗೊಳಿಸಬೇಕೆಂದು ಅವರು ಒತ್ತಾಯಿಸಿದರು.

Last Updated : Feb 27, 2020, 03:51 PM IST
ದೆಹಲಿ ಹಿಂಸಾಚಾರ: ಕೇಂದ್ರ ಮತ್ತು ಕೇಜ್ರಿವಾಲ್ ಸರ್ಕಾರ ಮೂಕ ಪ್ರೇಕ್ಷಕರಾಗಿವೆ-ಸೋನಿಯಾ ಗಾಂಧಿ  title=
Photo courtesy: Twitter

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಮತ್ತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು,ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಿರಂತರವಾಗಿ ನಡೆಯುತ್ತಿರುವ ಸಂದರ್ಭದಲ್ಲಿ ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಆರೋಪಿಸಿದರು. ಇದೇ ಮತ್ತೊಮ್ಮೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ವಜಾಗೊಳಿಸಬೇಕೆಂದು ಅವರು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಿಯೋಗ ಮುನ್ನಡೆಸಿದ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಂಸಾಚಾರ ಪೀಡಿತ ದೆಹಲಿಯಲ್ಲಿ ಶಾಂತಿ ಪರಿಸ್ಥಿತಿ ತರಲು ಮನವಿ ಮಾಡಿದರು.

ಪರಿಸ್ಥಿತಿಯನ್ನು ಪರಿಹರಿಸಲು ಅಥವಾ ಹರಡಲು ಸಕ್ರಿಯ ಕ್ರಮಗಳನ್ನು ತೆಗೆದುಕೊಳ್ಳುವ ಬದಲು, ಕೇಂದ್ರ ಸರ್ಕಾರವು ಹೊಸದಾಗಿ ಚುನಾಯಿತವಾದ ದೆಹಲಿ ಸರ್ಕಾರವು ಸಂಪೂರ್ಣವಾಗಿ ಬುದ್ದಿ ಹೀನ ಕೋಪ, ಮೂಕ ಪ್ರೇಕ್ಷಕರಾಗಿ ಉಳಿದಿದೆ, ಹಿಂಸೆ ಮತ್ತು ಸಂಘಟಿತ ಆಸ್ತಿ ಲೂಟಿ ನಗರದಲ್ಲಿ  ಅಬಾಧಿತವಾಗಿ ಮುಂದುವರೆದಿದೆ' ಎಂದು ಸೋನಿಯಾ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು. ಇದೇ ವೇಳೆ ತಮ್ಮ ಕಳವಳಗಳನ್ನು ಪರಿಶೀಲಿಸುವ ಬಗ್ಗೆ ನಿಯೋಗಕ್ಕೆರಾಷ್ಟ್ರಪತಿಗಳು ಭರವಸೆ ನೀಡಿದ್ದಾರೆ ಎಂದು ಸೋನಿಯಾ ಗಾಂಧಿ ಹೇಳಿದರು.

ಕಾಂಗ್ರೆಸ್ ಪಕ್ಷದ ಈ ನಿಯೋಗದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಪಕ್ಷದ ಮುಖಂಡರಾದ ಅಹ್ಮದ್ ಪಟೇಲ್ ಮತ್ತು ರಂದೀಪ್ ಸುರ್ಜೇವಲಾ ಇದ್ದರು.'ದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಏನಾಗಿದೆ ಎಂಬುದು ಬಹಳ ಕಳವಳಕಾರಿ ಮತ್ತು ರಾಷ್ಟ್ರೀಯ ಅವಮಾನದ ವಿಷಯವಾಗಿದೆ, ಇದರಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಜನರು ಗಾಯಗೊಂಡಿದ್ದಾರೆ. ಇದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯವಾಗಿದೆ ಎನ್ನುವುದನ್ನ ರಾಷ್ಟ್ರಪತಿಗಳಿಗೆ ವಿವರಿಸಿದ್ದೇವೆ' ಎಂದು ಡಾ.ಸಿಂಗ್ ಹೇಳಿದರು.

ತಿದ್ದುಪಡಿ ಮಾಡಿದ ಪೌರತ್ವ ಕಾನೂನಿನ ಮೇಲೆ ಈಶಾನ್ಯ ದೆಹಲಿಯ ಕೋಮು ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 34 ಆಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರದ ಸಂಸ್ಥೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಬುಧವಾರ ಸಭೆ ಸೇರಿ ದೆಹಲಿಯಲ್ಲಿನ ಹಿಂಸಾಚಾರವನ್ನು ಖಂಡಿಸಿ ನಿರ್ಣಯವನ್ನು ಅಂಗೀಕರಿಸಿತು. ಸಿಡಬ್ಲ್ಯುಸಿ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು.

 

Trending News