Karnataka ದಲ್ಲಿ ಭಾರಿ ಹಿನ್ನಡೆಯ ಬಳಿಕ ಬಿಜೆಪಿಗೆ ಆರ್ಎಸ್ಎಸ್ ಸಲಹೆ, ಕಾಂಗ್ರೆಸ್ ಗೆಲ್ಲಲು ಇದೇ ಕಾರಣ

RSS Adivce To BJP: ಕರ್ನಾಟಕದಲ್ಲಿ ಬಿಜೆಪಿಯ ಭಾರಿ ಸೋಲಿನ ಬಗ್ಗೆ, ಆರೆಸ್ಸೆಸ್ ತನ್ನ ಮುಖವಾಣಿ ಆರ್ಗನೈಸರ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಏಕೆ ಹಿನ್ನಡೆಯಾಗಿದೆ ಎಂಬುದರ ವಿವರಣೆಯನ್ನು ನೀಡಿದೆ.  

Written by - Nitin Tabib | Last Updated : Jun 8, 2023, 04:41 PM IST
  • ಈ ಎಲ್ಲಾ ಅಂಶಗಳನ್ನು ಆರ್ಗನೈಸರ್ ಸಂಪಾದಕ ಪ್ರಫುಲ್ಲ ಕೇತ್ಕರ್ ಅವರು ತನ್ನ ಮೇ 23ರ ಸಂಪಾದಕೀಯದಲ್ಲಿ ಬರೆದಿದ್ದಾರೆ,
  • ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕ ಚುನಾವಣೆಯಲ್ಲಿ
  • ಭ್ರಷ್ಟಾಚಾರದ ವಿಷಯದ ಬಗ್ಗೆ ಬಿಜೆಪಿ ರಕ್ಷಣಾತ್ಮಕವಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಗೆ ಸಂಘ ಸಲಹೆ ನೀಡಿದ್ದು ಇದೇ ಮೊದಲು.
Karnataka ದಲ್ಲಿ ಭಾರಿ ಹಿನ್ನಡೆಯ ಬಳಿಕ ಬಿಜೆಪಿಗೆ ಆರ್ಎಸ್ಎಸ್ ಸಲಹೆ, ಕಾಂಗ್ರೆಸ್ ಗೆಲ್ಲಲು ಇದೇ ಕಾರಣ title=

RSS Advice To BJP: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಲಭಿಸಿದ ಭಾರಿ ಸೋಲಿನ ಬಳಿಕ ಇದೀಗ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) 2024 ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷಕ್ಕೆ ಸಲಹೆಗಳನ್ನು ನೀಡಿದೆ. ಬಿಜೆಪಿಗೆ ಆತ್ಮಾವಲೋಕನ ಅಗತ್ಯವಿದೆ ಎಂದು ಸಂಘದ ಮುಖವಾಣಿ ಆರ್ಗನೈಸರ್‌ನಲ್ಲಿ ಹೇಳಲಾಗಿದೆ. ಪ್ರಬಲ ನೆಲೆ ಮತ್ತು ಪ್ರಾದೇಶಿಕ ನಾಯಕತ್ವ ಇಲ್ಲದೇ ಪಕ್ಷಕ್ಕೆ ಚುನಾವಣೆ ಗೆಲ್ಲುವುದು ಸುಲಭವಲ್ಲ ಎಂದು ಹೇಳಿದೆ.

ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತು ಹಿಂದುತ್ವದ ವಿಚಾರಗಳು ಚುನಾವಣೆ ಗೆಲ್ಲಲು ಸಾಕಾಗುವುದಿಲ್ಲ ಎಂದು ಬರೆಯಲಾಗಿದೆ. ಸಿದ್ಧಾಂತ ಮತ್ತು ಕೇಂದ್ರ ನಾಯಕತ್ವವು ಬಿಜೆಪಿಯ ಸಕಾರಾತ್ಮಕ ಅಂಶಗಳಾಗಿರಬಹುದು ಎಂದು ಅದು ಹೇಳಿದೆ.

ಕಾಂಗ್ರೆಸ್ ಗೆಲುವಿಗೆ ಕಾರಣಗಳೇನು?
ಚುನಾವಣೆಯಲ್ಲಿ ರಾಷ್ಟ್ರೀಯ ವಿಚಾರಗಳನ್ನು ತರಲು ಬಿಜೆಪಿ ನಾಯಕತ್ವ ಪ್ರಯತ್ನಿಸಿದೆ, ಆದರೆ ಕಾಂಗ್ರೆಸ್ ಸ್ಥಳೀಯ ಸಮಸ್ಯೆಗಳನ್ನು ಬಿಡಲಿಲ್ಲ ಎಂದು ಆರ್ಗನೈಸರ್‌ನಲ್ಲಿ ಬರೆಯಲಾಗಿದೆ. ಇದೇ ಕಾಂಗ್ರೆಸ್ ಗೆಲುವಿಗೆ ಬಹುದೊಡ್ಡ ಕಾರಣ ಎಂದು ಕೂಡ ಅದರಲ್ಲಿ ಹೇಳಲಾಗಿದೆ. ಕರ್ನಾಟಕ ಚುನಾವಣೆಯಲ್ಲಿ ಜಾತಿ ವಿಚಾರಗಳ ಮೂಲಕ ಮತ ಸೆಳೆಯುವ ಯತ್ನ ನಡೆದಿದೆ, ಆದರೆ ಈ ರಾಜ್ಯ ತಂತ್ರಜ್ಞಾನದ ಕೇಂದ್ರವಾಗಿದೆ ಎಂದು ಹೇಳಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಇದು ಆತಂಕದ ವಿಷಯವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ-Monsoon: ಕೇರಳ ಕದ ತಟ್ಟಿದ ಮಾನ್ಸೂನ್, ದೇಶದ ಬೇರೆ ಬೇರೆ ಭಾಗಗಳಲ್ಲಿ ಮುಂಗಾರಿನ ಸಿಂಚನ ಯಾವಾಗ?

ಈ ಎಲ್ಲಾ ಅಂಶಗಳನ್ನು ಆರ್ಗನೈಸರ್ ಸಂಪಾದಕ ಪ್ರಫುಲ್ಲ ಕೇತ್ಕರ್ ಅವರು ತನ್ನ ಮೇ 23ರ ಸಂಪಾದಕೀಯದಲ್ಲಿ ಬರೆದಿದ್ದಾರೆ, ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕ ಚುನಾವಣೆಯಲ್ಲಿ ಭ್ರಷ್ಟಾಚಾರದ ವಿಷಯದ ಬಗ್ಗೆ ಬಿಜೆಪಿ ರಕ್ಷಣಾತ್ಮಕವಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಗೆ ಸಂಘ ಸಲಹೆ ನೀಡಿದ್ದು ಇದೇ ಮೊದಲು.

ಇದನ್ನೂ ಓದಿ-Share Market Update: ಸತತ ನಾಲ್ಕು ದಿನಗಳ ಗೂಳಿ ಓಟಕ್ಕೆ ಬಿತ್ತು ಬ್ರೇಕ್, ಸೆನ್ಸೆಕ್ಸ್ ಸೂಚ್ಯಂಕದಲ್ಲಿ 300 ಅಂಕಗಳ ಕುಸಿತ

ಕರ್ನಾಟಕದ ಫಲಿತಾಂಶ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವುದು ಇಲ್ಲಿ ಗಮನಾರ್ಹ ಸಂಗತಿಯಾಗಿದೆ. ಒಟ್ಟು 224 ಸ್ಥಾನಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳನ್ನು ಉಳಿಸಿಕೊಂಡಿದೆ, ಬಿಜೆಪಿ 66 ಮತ್ತು ಜೆಡಿಎಸ್ 19 ಕ್ಕೆ ಇಳಿದಿದೆ. ಇದಾದ ಬಳಿಕ ಕಾಂಗ್ರೆಸ್ ರಾಜ್ಯದ ಅಧಿಕಾರವನ್ನು ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದೆ. ಚುನಾವಣೆಯಲ್ಲಿ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಆಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ ಎಂದು ಕೆತ್ಕರ್ ತಮ್ಮ ಸಂಪಾದಕೀಯದಲ್ಲಿ ಹೇಳಿದ್ದಾರೆ. 

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News