ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್ ನೀಡಿದ ಎಐಎಡಿಎಂಕೆ..!

ಎಐಎಡಿಎಂಕೆ-ಬಿಜೆಪಿ ಮೈತ್ರಿ ಸದ್ಯಕ್ಕೆ ಸ್ಥಗಿತಗೊಂಡಿದೆ.ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಅವರ ಆಪ್ತ ದಿವಂಗತ ಸಿಎನ್ ಅಣ್ಣಾದೊರೈ ಅವರ ಬಗ್ಗೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ಹೇಳಿಕೆಗಳ  ವಿರುದ್ಧ ಎಐಎಡಿಎಂಕೆ ಪಕ್ಷವು ಇಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Written by - Manjunath N | Last Updated : Sep 18, 2023, 04:42 PM IST
  • ಬಿಜೆಪಿ ಕಾರ್ಯಕರ್ತರು ಬಯಸಿದ್ದರೂ ಅಣ್ಣಾಮಲೈ ಅವರು ಎಐಎಡಿಎಂಕೆ ಜೊತೆ ಮೈತ್ರಿ ಬಯಸುವುದಿಲ್ಲ
  • ನಮ್ಮ ನಾಯಕರ ಈ ಟೀಕೆಗಳನ್ನೆಲ್ಲಾ ನಾವು ಸಹಿಸಬೇಕೇ?
  • ನಾವು ನಿಮ್ಮನ್ನು ಏಕೆ ಹೊತ್ತುಕೊಳ್ಳಬೇಕು?
ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್ ನೀಡಿದ ಎಐಎಡಿಎಂಕೆ..! title=

ನವದೆಹಲಿ: ಎಐಎಡಿಎಂಕೆ-ಬಿಜೆಪಿ ಮೈತ್ರಿ ಸದ್ಯಕ್ಕೆ ಸ್ಥಗಿತಗೊಂಡಿದೆ.ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಅವರ ಆಪ್ತ ದಿವಂಗತ ಸಿಎನ್ ಅಣ್ಣಾದೊರೈ ಅವರ ಬಗ್ಗೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ಹೇಳಿಕೆಗಳ  ವಿರುದ್ಧ ಎಐಎಡಿಎಂಕೆ ಪಕ್ಷವು ಇಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಈ ಎಲೆಯ ನೀರು ಹಚ್ಚಿದರೆ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುವುದು ಮಾತ್ರವಲ್ಲ ದಟ್ಟವಾಗಿ ಬೆಳೆಯುವುದು ಕೂಡಾ

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಎಐಎಡಿಎಂಕೆಯ ಹಿರಿಯ ನಾಯಕ ಡಿ.ಜಯಕುಮಾರ್ ಚುನಾವಣೆಗೂ ಮುನ್ನ ಮೈತ್ರಿ ಬಗ್ಗೆ ತೀರ್ಮಾನಿಸುತ್ತೇವೆ.ಅಣ್ಣಾಮಲೈ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಲು ಅನರ್ಹರು ... ಅವರು ತಮ್ಮನ್ನು ಬಿಂಬಿಸಿಕೊಳ್ಳಲು ಮಾತ್ರ ದಿವಂಗತ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ" ಎಂದು ಅವರು ಹೇಳಿದರು.

ದಿವಂಗತ ಜೆ ಜಯಲಲಿತಾ ಸೇರಿದಂತೆ ಎಐಎಡಿಎಂಕೆ ನಾಯಕರ ಬಗ್ಗೆ ಶ್ರೀ ಅಣ್ಣಾಮಲೈ ಟೀಕೆ ಟಿಪ್ಪಣಿಗಳನ್ನು ಮಾಡಿದಾಗ, ಬಿಜೆಪಿ ನಾಯಕನನ್ನು ಸಂಯಮದಿಂದ ಇರುವಂತೆ ಪಕ್ಷವು ಕೋರಿತ್ತು ಎಂದು ಶ್ರೀ ಜಯಕುಮಾರ್ ಹೇಳಿದರು. ದಿವಂಗತ ಮುಖ್ಯಮಂತ್ರಿಗೆ ಅವಮಾನ ಮಾಡಿದರೆ ಪಕ್ಷದ ಕಾರ್ಯಕರ್ತರು ಸಹಿಸುವುದಿಲ್ಲ ಎಂದರು.

ಇದನ್ನೂ ಓದಿ : ತ್ವಚೆಯ ಅಂದಕ್ಕೆ ಮನೆಮದ್ದು - ಇಲ್ಲಿದೆ ಸಿಂಪಲ್‌ ಟಿಪ್ಸ್‌!!

"ಬಿಜೆಪಿ ಕಾರ್ಯಕರ್ತರು ಬಯಸಿದ್ದರೂ ಅಣ್ಣಾಮಲೈ ಅವರು ಎಐಎಡಿಎಂಕೆ ಜೊತೆ ಮೈತ್ರಿ ಬಯಸುವುದಿಲ್ಲ. ನಮ್ಮ ನಾಯಕರ ಈ ಟೀಕೆಗಳನ್ನೆಲ್ಲಾ ನಾವು ಸಹಿಸಬೇಕೇ? ನಾವು ನಿಮ್ಮನ್ನು ಏಕೆ ಹೊತ್ತುಕೊಳ್ಳಬೇಕು? ಬಿಜೆಪಿ ಇಲ್ಲಿಗೆ ಕಾಲಿಡಲು ಸಾಧ್ಯವಿಲ್ಲ. ನಿಮ್ಮ ಮತ ಬ್ಯಾಂಕ್ ತಿಳಿದಿದೆ.ನೀವು ಇಲ್ಲಿ ಪರಿಚಯವಾಗಲು ನಾವು ಕಾರಣ, ಇನ್ಮುಂದೆ ನಾವು ನಮ್ಮ ನಾಯಕರ ಮೇಲಿನ ಟೀಕೆಗಳನ್ನು ಸಹಿಸುವುದಿಲ್ಲ" ಎಂದು ಅವರು ಹೇಳಿದರು.

ಇದು ಅವರ ವೈಯುಕ್ತಿಕ ಅಭಿಪ್ರಾಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಯಕುಮಾರ್, ನಾನು ನಿಮ್ಮೊಂದಿಗೆ ಎಂದಾದರೂ ಆ ಸ್ಥಾನದಲ್ಲಿ ಮಾತನಾಡಿದ್ದೇನೆಯೇ, ಪಕ್ಷ ಏನು ತೀರ್ಮಾನಿಸುತ್ತದೋ ಅದನ್ನು ಮಾತ್ರ ಮಾತನಾಡುತ್ತೇನೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News