/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಮುಂಬೈ: ಬಿಜೆಪಿ ಜೊತೆಗೆ ಕೈ ಜೋಡಿಸಿದ ಕೆಲವೇ ಗಂಟೆಗಳಲ್ಲಿ ಅಜಿತ್ ಪವಾರ್ ಅವರಿಗೆ ದೊಡ್ಡ ಉಡುಗೊರೆಯೊಂದು ದೊರೆತಿದ್ದು, ಮಹಾರಾಷ್ಟ್ರ ನೀರಾವರಿ ಹಗರಣದ ಭಾಗವಾಗಿ ತನಿಖೆ ನಡೆಸುತ್ತಿರುವ ಅಂದಾಜು 3,000 ಪ್ರಕರಣಗಳಲ್ಲಿ ಕೇವಲ ಒಂಬತ್ತು ಪ್ರಕರಣಗಳಲ್ಲಿ ಅಜಿತ್ ಪವಾರ್ ವಿರುದ್ಧ ಏಜೆನ್ಸಿ ಸಾಕ್ಷ್ಯಾಧಾರಗಳು ಕಂಡುಬಂದಿಲ್ಲ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮೂಲಗಳ ಪ್ರಕಾರ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿರುದ್ಧದ ಒಂಬತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಆದರೆ, ಇವುಗಳಲ್ಲಿ ಯಾವುದೂ ನೀರಾವರಿ ಪ್ರಕರಣಕ್ಕೆ ಸಂಬಂಧಿಸಿಲ್ಲ. ಇಂದು ಮುಚ್ಚಿದ ಪ್ರಕರಣಗಳು ಷರತ್ತುಬದ್ಧವಾಗಿವೆ ಮತ್ತು ಹೆಚ್ಚಿನ ಮಾಹಿತಿ ಬೆಳಕಿಗೆ ಬಂದರೆ ಅಥವಾ ನ್ಯಾಯಾಲಯಗಳು ಹೆಚ್ಚಿನ ವಿಚಾರಣೆಗೆ ಆದೇಶಿಸಿದರೆ ಮತ್ತೆ ತೆರೆಯಬಹುದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್-ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸರ್ಕಾರದ ಅವಧಿಯಲ್ಲಿ ಅಜಿತ್ ಪವಾರ್ ಮಹಾರಾಷ್ಟ್ರದ ನೀರಾವರಿ ಸಚಿವರಾಗಿದ್ದಾಗ, ಸಚಿವಾಲಯ ನೀಡುವ ಯೋಜನೆಗಳಲ್ಲಿ ಅಕ್ರಮಗಳ ಚುಕ್ಕಾಣಿ ಹಿಡಿದಿದ್ದಾರೆ ಎಂದು ಆರೋಪಿಸಲಾಯಿತು. ಆರೋಪಗಳಲ್ಲಿ ಅಜಿತ್ ಪವಾರ್ ಅವರು ದುಬಾರಿ ಬೆಲೆಯಲ್ಲಿ ಯೋಜನೆಗಳನ್ನು ನೀಡಿದರು ಎಂಬ ಹೇಳಿಕೆಗಳನ್ನು ಒಳಗೊಂಡಿತ್ತು.

ಆದರೆ ಎರಡು ದಿನಗಳ ಹಿಂದೆಯಷ್ಟೇ ಶರದ್ ಪವಾರ್ ವಿರುದ್ಧ ಬಂಡಾಯ ಸಾರಿದ ಅಜಿತ್ ಪವಾರ್ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರಿಗೆ ಬೆಂಬಲ ನೀಡುವ ಮೂಲಕ ಮಹಾರಾಷ್ಟ್ರದಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ವರದಿಗಳು ಬರುತ್ತಿವೆ. ಆದರೆ, ಇದು ಸತ್ಯವನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ. ಅಜಿತ್ ಪವಾರ್ ಸಚಿವರಾಗಿದ್ದ ಕಾಲದಿಂದ ವಾಸ್ತವವಾಗಿ 3,000 ನೀರಾವರಿ ಯೋಜನೆಗಳಿವೆ. ಈ ಪೈಕಿ ಎಸಿಬಿ ಕೇವಲ ಒಂಬತ್ತು ಪ್ರಕರಣಗಳಲ್ಲಿ ಪವಾರ್ ಭಾಗಿಯಾಗಿಲ್ಲ ಎಂದು ಕಂಡುಹಿಡಿದಿದೆ. ಈ ಒಂಬತ್ತು ಪ್ರಕರಣಗಳಲ್ಲಿ ಪವಾರ್ ವಿರುದ್ಧ ಎಸಿಬಿಗೆ ಯಾವುದೇ ಸಾಕ್ಷ್ಯಗಳು ಕಂಡುಬಂದಿಲ್ಲ ಎಂದು ನ್ಯಾಯಾಲಯಕ್ಕೆ ಟಿಪ್ಪಣಿ ಸಲ್ಲಿಸಿರುವ ಟಿಪ್ಪಣಿಯನ್ನು ಅಜಿತ್ ಪವಾರ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ತಪ್ಪಾಗಿ ಚಿತ್ರಿಸಲು ಬಳಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ನೀರಾವರಿ ಹಗರಣದ ತನಿಖೆಗಾಗಿ ಏಜೆನ್ಸಿಯು ನ್ಯಾಯಾಲಯದಲ್ಲಿ ಸ್ಥಿತಿ ವರದಿಯನ್ನು ಸಲ್ಲಿಸಬೇಕಾಗಿರುವುದರಿಂದ ಈ ಟಿಪ್ಪಣಿಯನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ವಿವರಿಸಿದೆ. ಇತರ ಯೋಜನೆಗಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಅವುಗಳಲ್ಲಿ ಅಜಿತ್ ಪವಾರ್ ಅವರ ಪಾತ್ರವನ್ನು ಪರಿಶೀಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Section: 
English Title: 
Ajit Pawar gets clean chit in nine corruption cases by Maharashtra ACB
News Source: 
Home Title: 

ಮಹಾರಾಷ್ಟ್ರ ಎಸಿಬಿಯಿಂದ 9 ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್!

ಮಹಾರಾಷ್ಟ್ರ ಎಸಿಬಿಯಿಂದ 9 ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್!
Author No use : 
Yashaswini V
Yes
Is Blog?: 
No
Tags: 
Facebook Instant Article: 
Yes
Mobile Title: 
ಮಹಾರಾಷ್ಟ್ರ: 9 ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್
Publish Later: 
No
Publish At: 
Monday, November 25, 2019 - 16:53
Created By: 
Yashaswini V
Updated By: 
Yashaswini V
Published By: 
Yashaswini V