ಪಾದಚಾರಿ ಮೇಲೆ ಕಾರು ಹಾಯಿಸಿ ಸಾವಿಗೆ ಕಾರಣವಾಗಿದ್ದ ಸಂಸದರ ಪುತ್ರಿಗೆ ಜಾಮೀನು

ಸೋಮವಾರದಂದು ರಾತ್ರಿ ಅವರ ಪುತ್ರಿ ಮಾಧುರಿ ಬಿಎಂಡಬ್ಲ್ಯು ಕಾರನ್ನು ತಮ್ಮ ಸ್ನೇಹಿತೆಯ ಜತೆಯಲ್ಲಿ ಓಡಿಸುತ್ತಿದ್ದರು. ಅವರು ಮದ್ಯದ ಅಮಲಿನಲ್ಲಿ ಚೆನ್ನೈನ ಬೆಸೆಂಟ್ ನಗರದಲ್ಲಿ ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ 24 ವರ್ಷದ ಪೇಂಟರ್ ಸೂರ್ಯ ಮೇಲೆ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

Written by - Manjunath N | Last Updated : Jun 19, 2024, 08:06 AM IST
  • ಮಾಧುರಿ ತಕ್ಷಣವೇ ಸ್ಥಳದಿಂದ ಓಡಿಹೋದಾಗ, ಆಕೆಯ ಸ್ನೇಹಿತೆ ಕಾರಿನಿಂದ ಇಳಿದು ಅಪಘಾತದ ನಂತರ ಜಮಾಯಿಸಿದ ಜನರೊಂದಿಗೆ ಜಗಳವಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ
  • ಸ್ವಲ್ಪ ಸಮಯದ ನಂತರ ಅವಳೂ ಹೊರಟು ಹೋದಳು
  • ಗುಂಪಿನಿಂದ ಕೆಲವರು ಸೂರ್ಯನನ್ನು ಆಸ್ಪತ್ರೆಗೆ ಸಾಗಿಸಿದರು, ಆದರೆ ಅವರು ಗಂಭೀರವಾಗಿ ಗಾಯಗೊಂಡಿದ್ದರಿಂದಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ
 ಪಾದಚಾರಿ ಮೇಲೆ ಕಾರು ಹಾಯಿಸಿ ಸಾವಿಗೆ ಕಾರಣವಾಗಿದ್ದ ಸಂಸದರ ಪುತ್ರಿಗೆ ಜಾಮೀನು title=

ಚೆನ್ನೈ: ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ರಾಜ್ಯಸಭಾ ಸಂಸದ ಬೀಡಾ ಮಸ್ತಾನ್‌ ರಾವ್‌ ಅವರ ಪುತ್ರಿ ಚೆನ್ನೈನ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ತನ್ನ BMW ಕಾರನ್ನು ಅನ್ನು ಚಲಾಯಿಸಿದ್ದರಿಂದ ಗಾಯಗೊಂಡ ವ್ಯಕ್ತಿ ಸಾವನ್ನಪ್ಪಿದ್ದು, ಈಗ ಮಹಿಳೆಗೆ ಜಾಮೀನು ಸಿಕ್ಕಿದೆ.

ಸೋಮವಾರದಂದು ರಾತ್ರಿ ಅವರ ಪುತ್ರಿ ಮಾಧುರಿ ಬಿಎಂಡಬ್ಲ್ಯು ಕಾರನ್ನು ತಮ್ಮ ಸ್ನೇಹಿತೆಯ ಜತೆಯಲ್ಲಿ ಓಡಿಸುತ್ತಿದ್ದರು.ಅವರು ಮದ್ಯದ ಅಮಲಿನಲ್ಲಿ ಚೆನ್ನೈನ ಬೆಸೆಂಟ್ ನಗರದಲ್ಲಿ ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ 24 ವರ್ಷದ ಪೇಂಟರ್ ಸೂರ್ಯ ಮೇಲೆ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

ಮಾಧುರಿ ತಕ್ಷಣವೇ ಸ್ಥಳದಿಂದ ಓಡಿಹೋದಾಗ, ಆಕೆಯ ಸ್ನೇಹಿತೆ ಕಾರಿನಿಂದ ಇಳಿದು ಅಪಘಾತದ ನಂತರ ಜಮಾಯಿಸಿದ ಜನರೊಂದಿಗೆ ಜಗಳವಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ವಲ್ಪ ಸಮಯದ ನಂತರ ಅವಳೂ ಹೊರಟು ಹೋದಳು. ಗುಂಪಿನಿಂದ ಕೆಲವರು ಸೂರ್ಯನನ್ನು ಆಸ್ಪತ್ರೆಗೆ ಸಾಗಿಸಿದರು, ಆದರೆ ಅವರು ಗಂಭೀರವಾಗಿ ಗಾಯಗೊಂಡಿದ್ದರಿಂದಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 'ಟ್ಯಾಂಕರ್ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ, ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ'

ಸೂರ್ಯ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಆತನ ಸಂಬಂಧಿಕರು ಮತ್ತು ಅವರ ಕಾಲೋನಿಯ ಜನರು ಜ-5 ಶಾಸ್ತ್ರಿನಗರ ಪೊಲೀಸ್ ಠಾಣೆಗೆ ಜಮಾಯಿಸಿ ಕ್ರಮಕ್ಕೆ ಒತ್ತಾಯಿಸಿದರು.ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಾರು ಬಿಎಂಆರ್ (ಬೀಡಾ ಮಸ್ತಾನ್ ರಾವ್) ಗ್ರೂಪ್‌ಗೆ ಸೇರಿದ್ದು ಮತ್ತು ಪುದುಚೇರಿಯಲ್ಲಿ ನೋಂದಣಿಯಾಗಿದೆ ಎಂದು ತಿಳಿದುಬಂದಿದೆ. ಮಾಧುರಿಯನ್ನು ಬಂಧಿಸಲಾಗಿದ್ದು, ಆದರೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನು ನೀಡಲಾಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

Trending News