Rahul Gandhi: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ರಾಹುಲ್ ಗಾಂಧಿ ಗೆಲುವಿನ ಸೂತ್ರ!

Rahul Gandhi in USA: ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿರುವ ರಾಹುಲ್, ಹಲವು ವಿಷಯಗಳ ಕುರಿತು ಮಾತನಾಡಿದರು. 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿಯನ್ನು ಸೋಲಿಸುವ ಸೂತ್ರವನ್ನೂ ಇದೇ ವೇಳೆ ಅವರು ಹೇಳಿದ್ದಾರೆ.

Written by - Puttaraj K Alur | Last Updated : May 31, 2023, 04:01 PM IST
  • ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಸೋಲಿಸಬಹುದು
  • ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಎಲ್ಲಾ ವಿಪಕ್ಷಗಳು ಒಂದಾಗಬೇಕು
  • ಪ್ರಧಾನಿ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ
Rahul Gandhi: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ರಾಹುಲ್ ಗಾಂಧಿ ಗೆಲುವಿನ ಸೂತ್ರ!  title=
2024ಕ್ಕೆ ರಾಹುಲ್ ಮಾಸ್ಟರ್ ಪ್ಲಾನ್!

ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿ ಕ್ಯಾಂಪಸ್ ವಿವಿಯಲ್ಲಿ ರಾಹುಲ್ ಗಾಂಧಿ ಭಾಷಣ: ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಇದೇ ವೇಳೆ ಭಾರತೀಯ ಮೂಲದ ಅಮೆರಿಕದ ಜನರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಅವರು ಮಾತನಾಡಿದ್ದಾರೆ. ತಮ್ಮ ಸುದೀರ್ಘ ಭಾಷಣದಲ್ಲಿ ಪ್ರಧಾನಿ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ (2024) ಬಿಜೆಪಿಯನ್ನು ಸೋಲಿಸಬಹುದು ಎಂದು ಹೇಳಿದ್ದಾರೆ. ತಮ್ಮ ವಿಜಯ ಮಂತ್ರವನ್ನು ವಿವರಿಸಿದ ರಾಹುಲ್ ಗಾಂಧಿ, ಭಾರತದ ಎಲ್ಲಾ ವಿರೋಧ ಪಕ್ಷಗಳು ಒಂದಾಗುವಂತೆ ಮನವಿ ಮಾಡಿದ್ದಾರೆ.

2024ಕ್ಕೆ ರಾಹುಲ್ ಮಾಸ್ಟರ್ ಪ್ಲಾನ್!

ಅಮೆರಿಕದಲ್ಲಿ ನೆಲೆಸಿರುವ ಜನರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೇಶದ ಸರ್ಕಾರವನ್ನು ಬದಲಾಯಿಸುವ ನಿಟ್ಟಿನಲ್ಲಿ ತಮ್ಮ ಪಕ್ಷವು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಪ್ರತಿಪಕ್ಷಗಳು ‘ಸರಿಯಾದ ಮೈತ್ರಿ’ ಮಾಡಿಕೊಂಡು ಸರಿಯಾಗಿ ಕೆಲಸ ಮಾಡಿದರೆ ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಬಹುದು ಎಂದು ಭಾಷಣದಲ್ಲಿ ಹೇಳಿದ್ದಾರೆ. ಮಂಗಳವಾರ ಸಾಂತಾಕ್ರೂಜ್‌ನ ಕ್ಯಾಲಿಫೋರ್ನಿಯಾ ವಿವಿಯ ಸಿಲಿಕಾನ್ ವ್ಯಾಲಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಡರೇಟರ್ ಮತ್ತು ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದ ರಾಹುಲ್ ಗಾಂಧಿ, ಬಿಜೆಪಿಯ ದೌರ್ಬಲ್ಯ ಮತ್ತು ನ್ಯೂನತೆಗಳನ್ನು ಸ್ಪಷ್ಟವಾಗಿ ನೋಡಬಹುದು ಎಂದು ಹೇಳಿದರು. ನಾವು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಅವಕಾಶಗಳಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Operation Pink: 2000 ರೂ ನೋಟುಗಳ ವಿನಿಮಯದ ಜಾಲ ಬೇಧಿಸಿದ ಜೀ ನ್ಯೂಸ್ ಕುಟುಕು ಕಾರ್ಯಾಚರಣೆ

ಬಿಜೆಪಿಗೆ ನಮ್ಮ ಕಾರ್ಯವಿಧಾನ ಅರ್ಥವಾಗಲಿಲ್ಲ!

ಕರ್ನಾಟಕದ ಗೆಲುವನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷವು ಈ ದೊಡ್ಡ ಗೆಲುವಿಗಾಗಿ ದೀರ್ಘಕಾಲ ಶ್ರಮಿಸಿತ್ತು. ಇಡೀ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಂಪೂರ್ಣ ಚುನಾವಣಾ ಕಾರ್ಯವಿಧಾನವನ್ನು ಬಿಜೆಪಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲವೆಂದು ಹೇಳಿದರು. ಇದಕ್ಕಾಗಿಯೇ ಕರ್ನಾಟಕದಲ್ಲಿ ಅದು ಹೀನಾಯವಾಗಿ ಸೋತಿತು ಮತ್ತು ಕರ್ನಾಟಕದ ವಿಜಯದ ಸಾರವನ್ನು ‘ಭಾರತ್ ಜೋಡೋ ಯಾತ್ರೆ’ಯಿಂದ ಪಡೆಯಲಾಗಿದೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ದೊಡ್ಡ ಆರೋಪ ಮಾಡಿದ ರಾಹುಲ್ ಗಾಂಧಿ, ತಮ್ಮ ‘ಭಾರತ್ ಜೋಡೋ ಯಾತ್ರೆ’ಯನ್ನು ತಡೆಯುವ ಪ್ರಯತ್ನ ನಡೆದಿತ್ತು ಎಂದು ಹೇಳಿದ್ದಾರೆ. ಪೊಲೀಸರನ್ನು ಬಳಸಿಕೊಂಡು ತಮ್ಮ ಯಾತ್ರೆಯನ್ನು ತಡೆಯುವ ಪ್ರಯತ್ನ ನಡೆದಿದೆ, ಆದರೆ ಸಾರ್ವಜನಿಕರು ಬೆಂಬಲ ನೀಡಿದ್ದರಿಂದ ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ರಾಹುಲ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿದ್ವೇಷ ಭಾಷಣಗಳು ನಿಮ್ಮ ರಾಜಕೀಯ ಪಕ್ಷಗಳನ್ನು ಹಾಳು ಮಾಡದಿರಲಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News