ಬೆಳಗಿನ ಜಾವ 5 ಗಂಟೆವರೆಗೆ ನಡೆದ ಬಿಜೆಪಿ ಸಭೆ; ಛತ್ತೀಸ್​ಗಢದ ಹಾಲಿ ಸಂಸದರಿಗಿಲ್ಲ ಟಿಕೆಟ್!

ಮೂಲಗಳ ಪ್ರಕಾರ, ಅಮೇಥಿಯಿಂದ ಸ್ಮೃತಿ ಇರಾನಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ.

Last Updated : Mar 20, 2019, 09:47 AM IST
ಬೆಳಗಿನ ಜಾವ 5 ಗಂಟೆವರೆಗೆ ನಡೆದ ಬಿಜೆಪಿ ಸಭೆ; ಛತ್ತೀಸ್​ಗಢದ ಹಾಲಿ ಸಂಸದರಿಗಿಲ್ಲ ಟಿಕೆಟ್! title=
File Image

ನವದೆಹಲಿ: 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ಸಭೆ ಮಂಗಳವಾರ ಸಂಜೆ ಪ್ರಾರಂಭವಾಗಿ ಬುಧವಾರ ಬೆಳಗಿನ ಜಾವ 5 ಗಂಟೆವರೆಗೆ ನಡೆದಿದೆ. ಇಂದೂ ಸಹ ಈ ಸಭೆ ಮುಂದುವರೆಯಲಿದ್ದು ಸಭೆಯಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುವುದು. 

ಮೂಲಗಳಿಂದ ಲಭಿಸಿರುವ ಮಾಹಿತಿ ಪ್ರಕಾರ, ರಾತ್ರಿಯಿಡೀ ನಡೆದ ಸಭೆಯಲ್ಲಿ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಈ ವೇಳೆ ಹಲವು ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಇರಲು ಕೂಡ ನಿರ್ಧರಿಸಲಾಗಿದೆ. ಮೂಲಗಳ ಪ್ರಕಾರ, ಅಮೇಥಿಯಿಂದ ಸ್ಮೃತಿ ಇರಾನಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ. ಇದೇ ವೇಳೆ ಬೆಗುಸಾರೈನಿಂದ ಗಿರಿರಾಜ್ ಸಿಂಗ್ ಅವರಿಗೆ ಟಿಕೆಟ್ ನೀಡುವ ಸಂಭವವಿದೆ.

ಏತನ್ಮಧ್ಯೆ, ಛತ್ತೀಸ್​ಗಢದ ಹಾಲಿ ಸಂಸದರಿಗೆ ಟಿಕೆಟ್ ಕಡಿತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು, ಛತ್ತೀಸ್​ಗಢದ ಮಾಜಿ ಸಿಎಂ ರಮಣ್ ಸಿಂಗ್ ಪುತ್ರ ಸೇರಿದಂತೆ 10 ಸಂಸದರಿಗೆ ಟಿಕೆಟ್ ನೀಡದಿರಲು ಪಕ್ಷ ನಿರ್ಧರಿಸಿದೆ. ಈ ಸ್ಥಾನಗಳಿಗೆ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಛತ್ತೀಸ್​ಗಢದ ಕೋರ್ ಗ್ರೂಪ್ ನೊಂದಿಗೆ ಸಭೆ ನಡೆಸಿ 11 ಹೊಸ ಅಭ್ಯರ್ಥಿಗಳ ಹೆಸರನ್ನು ಸೂಚಿಸುವಂತೆ ಒಂದು ದಿನದ ಕಾಲಾವಕಾಶ ನೀಡಿದೆ. 

ಕಳೆದ ವರ್ಷ ನಡೆದ ಛತ್ತೀಸ್​ಗಢ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 

Trending News