ನವದೆಹಲಿ: ದೇಶದ ರೈತರ ಹಿತದೃಷ್ಟಿಯಿಂದ ಅನೇಕ ಯೋಜನೆಗಳು ಬರುತ್ತಿವೆ. ಕೇಂದ್ರ ಸರ್ಕಾರವು ರೈತರಿಗಾಗಿ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಲಿದೆ. ಈ ರೈತ ರೈಲು('ಕಿಸಾನ್ ರೈಲ್') ಸೇವೆಯಲ್ಲಿ ಶೈತ್ಯೀಕರಿಸಿದ ಬೋಗಿಗಳೂ ಇರಲಿವೆ.
ಕೇಂದ್ರ ಸರ್ಕಾರವು ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸಲು ಹಲವು ರೀತಿಯ ಕ್ರಮ ಕೈಗೊಳ್ಳುತ್ತಿದೆ. ಹೊಸ ಹಣಕಾಸು ವರ್ಷದಲ್ಲಿ ರೈತರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ (ಬಜೆಟ್ 2020) ನಲ್ಲಿ ಪ್ರಕಟಿಸಿದ್ದಾರೆ. ಕೇಂದ್ರ ಸರ್ಕಾರವು 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುತ್ತದೆ. ಈ ವರ್ಷದಿಂದ ಕಿಸಾನ್ ರೈಲು ಮತ್ತು ಕಿಸಾನ್ ಉಡಾನ್ ಯೋಜನೆ ಅನುಷ್ಠಾನಗೊಳಿಸುವ ಯೋಜನೆಯೂ ಇದೆ ಎಂದವರು ಬಜೆಟ್ ಭಾಷಣದಲ್ಲಿ ತಿಳಿಸಿದರು.
ಕೇಂದ್ರ ಹಣಕಾಸು ಸಚಿವರು ಬಜೆಟ್ನಲ್ಲಿ ರೈತರಿಗಾಗಿ...
Budget 2020: ದೇಶದಲ್ಲಿ ರೈತರಿಗಾಗಿ ಚಲಿಸಲಿದೆ 'ಕಿಸಾನ್ ರೈಲ್'