ಮಾನ್ಸೂನ್ ಅಧಿವೇಶನದಲ್ಲಿ ಪ್ರತಿದಿನ ಸಂಸತ್ ಎದುರು ಪ್ರತಿಭಟನೆ ನಡೆಸಲು ರೈತರ ನಿರ್ಧಾರ

ಮಾನ್ಸೂನ್ ಅಧಿವೇಶನದಲ್ಲಿ ಪ್ರತಿದಿನ ರೈತರ ಗುಂಪು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಭಾನುವಾರ ಘೋಷಿಸಿದೆ.

Written by - Zee Kannada News Desk | Last Updated : Jul 4, 2021, 08:19 PM IST
  • ಮಾನ್ಸೂನ್ ಅಧಿವೇಶನದಲ್ಲಿ ಪ್ರತಿದಿನ ರೈತರ ಗುಂಪು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಭಾನುವಾರ ಘೋಷಿಸಿದೆ.
  • ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಪ್ರತಿನಿಧಿಗಳು ಸದನದೊಳಗೆ ಮೂರು ಕೃಷಿ ಕಾನೂನುಗಳ (Agriculture Laws) ವಿರುದ್ಧ ಪ್ರತಿಭಟಿಸುವಂತೆ ಒತ್ತಾಯಿಸಿ ಸಂಸತ್ತಿನ ಎಲ್ಲ ವಿರೋಧ ಪಕ್ಷಗಳಿಗೆ (ಸಂಸದರು) ಎಚ್ಚರಿಕೆ ಪತ್ರ ನೀಡಲಾಗುವುದು ಎಂದು ಹೇಳಿದೆ.
ಮಾನ್ಸೂನ್ ಅಧಿವೇಶನದಲ್ಲಿ ಪ್ರತಿದಿನ ಸಂಸತ್ ಎದುರು ಪ್ರತಿಭಟನೆ ನಡೆಸಲು ರೈತರ ನಿರ್ಧಾರ  title=
ಸಂಗ್ರಹ ಚಿತ್ರ

ನವದೆಹಲಿ: ಮಾನ್ಸೂನ್ ಅಧಿವೇಶನದಲ್ಲಿ ಪ್ರತಿದಿನ ರೈತರ ಗುಂಪು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಭಾನುವಾರ ಘೋಷಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಪ್ರತಿನಿಧಿಗಳು ಸದನದೊಳಗೆ ಮೂರು ಕೃಷಿ ಕಾನೂನುಗಳ (Agriculture Laws) ವಿರುದ್ಧ ಪ್ರತಿಭಟಿಸುವಂತೆ ಒತ್ತಾಯಿಸಿ ಸಂಸತ್ತಿನ ಎಲ್ಲ ವಿರೋಧ ಪಕ್ಷಗಳಿಗೆ (ಸಂಸದರು) ಎಚ್ಚರಿಕೆ ಪತ್ರ ನೀಡಲಾಗುವುದು ಎಂದು ಹೇಳಿದೆ.

"ನಾವು ಜುಲೈ 17 ರಂದು ಪ್ರತಿಪಕ್ಷದ ಸಂಸದರನ್ನು ಸದನದೊಳಗೆ ಪ್ರತಿದಿನವೂ ಈ ವಿಷಯವನ್ನು ಎತ್ತುವಂತೆ ಕೇಳುತ್ತೇವೆ, ಆದರೆ ನಾವು ಪ್ರತಿಭಟನೆಯಲ್ಲಿ ಹೊರಗೆ ಕುಳಿತುಕೊಳ್ಳುತ್ತೇವೆ.ಅಧಿವೇಶನದಿಂದ ಹೊರನಡೆಯುವ ಮೂಲಕ ಕೇಂದ್ರಕ್ಕೆ ಪ್ರಯೋಜನವಾಗದಂತೆ ನಾವು ಅವರಿಗೆ ಹೇಳುತ್ತೇವೆ. ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸುವವರೆಗೆ ಅಧಿವೇಶನವನ್ನು ನಡೆಸಲು ಬಿಡಬೇಡಿ "ಎಂದು ರೈತ ಮುಖಂಡ ಗುರ್ನಮ್ ಸಿಂಗ್ ಚಾರುನಿ ಹೇಳಿದರು.

ಇದನ್ನೂ ಓದಿ - ದೆಹಲಿ-ಯುಪಿ ಗಡಿ ಪ್ರದೇಶದಲ್ಲಿ ಮತ್ತಷ್ಟು ತೀವ್ರಗೊಂಡ ರೈತರ ಪ್ರತಿಭಟನೆ

40 ಕ್ಕೂ ಹೆಚ್ಚು ರೈತ ಸಂಘಗಳಿಂದ ತಲಾ ಐದು ಜನರು ಸಂಸತ್ತಿನ ಹೊರಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರೈತ ಮುಖಂಡ ಗುರ್ನಮ್ ಸಿಂಗ್ ಚಾರುನಿ ಹೇಳಿದರು.ಹೆಚ್ಚುತ್ತಿರುವ ಇಂಧನ ಬೆಲೆಗಳ ವಿರುದ್ಧ ಜುಲೈ 8 ರಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಕರೆ ನೀಡಿದೆ.

ಸಂಸತ್ತಿನ ಮಾನ್ಸೂನ್ ಅಧಿವೇಶನವನ್ನು ಜುಲೈ 19 ರಿಂದ ಆಗಸ್ಟ್ 13 ರವರೆಗೆ ನಡೆಸಬೇಕೆಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಮಂಗಳವಾರ ಶಿಫಾರಸು ಮಾಡಿತ್ತು.ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಈ ತಿಂಗಳ ಆರಂಭದಲ್ಲಿ ಮಾನ್ಸೂನ್ ಅಧಿವೇಶನವು ಜುಲೈನಲ್ಲಿ ತನ್ನ ಸಾಮಾನ್ಯ ವೇಳಾಪಟ್ಟಿಯಂತೆ ಪ್ರಾರಂಭವಾಗಲಿದೆ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ - 'ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳಿಂದ ದೇಶದ ಭವಿಷ್ಯ ಕರಾಳ'

ಮಾನ್ಸೂನ್ ಅಧಿವೇಶನವು ಸಾಮಾನ್ಯವಾಗಿ ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 15 ಕ್ಕೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News