ರೂ.500ಕ್ಕೆ ಗ್ಯಾಸ್ ಸಿಲಿಂಡರ್, 15 ಲಕ್ಷ ರೂ.ಗಳ ವಿಮೆ... ಕೇಂದ್ರ ಸಚಿವ ಅಮಿತ್ ಷಾ ಮಹತ್ವದ ಘೋಷಣೆ!

Five State Assembly Elections 2023: ಬಿಜೆಪಿ ಆಡಳಿತದ ಛತ್ತೀಸ್‌ಗಢದಲ್ಲಿ ಕೇಂದ್ರ ಸಚಿವ ಅಮಿತ್ ಷಾ ಮಹತ್ವದ ಘೋಷಣೆಗಳನ್ನು ಮೊಳಗಿಸಿದ್ದಾರೆ. ಈ ಘೋಷಣೆಗಳಲ್ಲಿ ರಾಜ್ಯದ ಜನತೆಗೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಮತ್ತು ರಾಣಿ ದುರ್ಗಾವತಿ ಯೋಜನೆ ಆರಂಭಿಸುವ ಭರವಸೆಯನ್ನು ಅವರು ನೀಡಿದ್ದಾರೆ. ದುರ್ಗಾವತಿ ಯೋಜನೆಯ ಅಡಿಯಲ್ಲಿ ಹುಡುಗಿಯರು ವಯಸ್ಕರಾದಾಗ ಅವರಿಗೆ 150,000 ರೂ. ನೀಡಲಾಗುವುದು ಎಂದು ಅವರು ಹೇಳಿದ್ದಾರೆ (Political News In Kannada).  

Written by - Nitin Tabib | Last Updated : Nov 3, 2023, 07:56 PM IST
  • ಭೂಪೇಶ್ ಬಘೇಲ್ ಅವರು 300 ಕ್ಕೂ ಹೆಚ್ಚು ಭರವಸೆಗಳನ್ನು ನೀಡಿದ್ದರು, ಅವು ಇದುವರೆಗೂ ಈಡೇರಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.
  • 'ನಾನು ಛತ್ತೀಸ್‌ಗಢದ ಜನತೆಗೆ ಹೇಳಲು ಬಯಸುತ್ತೇನೆ ಎಂದ ಅವರು, ಮೋದಿ ಜಿ ಛತ್ತೀಸ್‌ಗಢವನ್ನು ಅಭಿವೃದ್ಧಿಪಡಿಸಲು ಬಯಸುತ್ತಾರೆ.
  • ಆದರೆ ಭೂಪೇಶ್ ಬಘೇಲ್ ಅದಕ್ಕೆ ದೊಡ್ಡ ಅಡ್ಡಿಯಾಗಿದ್ದಾರೆ. ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದರೆ ಕುರ್ಚಿ ಕಳೆದುಕೊಳ್ಳುವ ಭೀತಿ ಬಘೇಲ್ ಅವರಿಗಿದೆ.
ರೂ.500ಕ್ಕೆ ಗ್ಯಾಸ್ ಸಿಲಿಂಡರ್, 15 ಲಕ್ಷ ರೂ.ಗಳ ವಿಮೆ... ಕೇಂದ್ರ ಸಚಿವ ಅಮಿತ್ ಷಾ ಮಹತ್ವದ ಘೋಷಣೆ! title=

ನವದೆಹಲಿ: ಐದು ರಾಜ್ಯಗಳ ವಿಧಾನಸಭೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಛತ್ತೀಸ್‌ಗಢದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಮಿತ್ ಶಾ, ರಾಜ್ಯದ ಲಕ್ಷಾಂತರ ಜನರೊಂದಿಗೆ ಚರ್ಚಿಸಿ ‘ಮೋದಿ ಗ್ಯಾರಂಟಿ’ ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ ಎಂದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಬಡ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಆಯುಷ್ಮಾನ್ ಭಾರತ್ ಯೋಜನೆಯಡಿ ಈಗಾಗಲೇ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ.ವರೆಗೆ ವಿಮೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. (Political News In Kannada)

ಇದನ್ನೂ ಓದಿ-'ನೈತಿಕ ಸಮಿತಿ ಸಭೆಯಲ್ಲಿ ನನ್ನ ವಸ್ತ್ರಾಪಹರಣ ನಡೆಸಲಾಗಿದೆ' ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದ ಮಹಿಳಾ ಸಂಸದೆ!

500 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ
ಇದಲ್ಲದೇ ಬಿಜೆಪಿ ಆಡಳಿತದಲ್ಲಿ ಛತ್ತೀಸ್ ಗಢದ ಜನತೆಗೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ ಎಂದು ಅವರು ಹೇಳಿದ್ದಾರೆ. ಇದರ ಜೊತೆಗೆ ರಾಣಿ ದುರ್ಗಾವತಿ ಯೋಜನೆ ಆರಂಭಿಸಲಾಗುವುದು ಮತ್ತು ಅದರ ಅಡಿಯಲ್ಲಿ ಹುಡುಗಿಯರು ವಯಸ್ಕರಾದಾಗ ಅವರಿಗೆ 150,000 ರೂ. ನೀಡಲಾಗುವುದು ಎಂಬ ಭರವಸೆ ನೀಡಿದ್ದಾರೆ.  ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸುಳ್ಳು ಪ್ರಚಾರ ಮಾಡುವಲ್ಲಿ ಭೂಪೇಶ್ ಬಘೇಲ್‌ಗೆ ಇಡೀ ದೇಶದಲ್ಲಿ ಸರಿಸಾಟಿ ಇಲ್ಲ ಎಂದು ಹೇಳಿದ್ದಾರೆ. ಭೂಪೇಶ್ ಬಘೇಲ್ 5 ವರ್ಷಗಳ ಕಾಲ ಇಲ್ಲಿ ಸರ್ಕಾರ ನಡೆಸಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ. ಆದರೆ ಇದರಲ್ಲಿ ಅವರು ಹಗರಣಗಳನ್ನು ಮಾತ್ರ ನಡೆಸಿದ್ದಾರೆ. ಈ 5 ವರ್ಷಗಳಲ್ಲಿ ಭೂಪೇಶ್ ಬಘೇಲ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯ ವಿಷಯದಲ್ಲಿ ವಿಫಲವಾಗಿದೆ ಎಂದು ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-ದೇಶಾದ್ಯಂತ 1 ಕೋಟಿ ಫ್ಯಾನ್ ಹಾಗೂ 20 ಲಕ್ಷ ಇಂಡಕ್ಷನ್ ಒಲೆಗಳ ವಿತರಣೆಗೆ ಮುಂದಾದ ಸರ್ಕಾರ!

ಭೂಪೇಶ್ ಬಘೇಲ್ ಅವರು 300 ಕ್ಕೂ ಹೆಚ್ಚು ಭರವಸೆಗಳನ್ನು ನೀಡಿದ್ದರು, ಅವು ಇದುವರೆಗೂ ಈಡೇರಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ. 'ನಾನು ಛತ್ತೀಸ್‌ಗಢದ ಜನತೆಗೆ ಹೇಳಲು ಬಯಸುತ್ತೇನೆ ಎಂದ ಅವರು,  ಮೋದಿ ಜಿ ಛತ್ತೀಸ್‌ಗಢವನ್ನು ಅಭಿವೃದ್ಧಿಪಡಿಸಲು ಬಯಸುತ್ತಾರೆ. ಆದರೆ ಭೂಪೇಶ್ ಬಘೇಲ್ ಅದಕ್ಕೆ ದೊಡ್ಡ ಅಡ್ಡಿಯಾಗಿದ್ದಾರೆ. ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದರೆ ಕುರ್ಚಿ ಕಳೆದುಕೊಳ್ಳುವ ಭೀತಿ ಬಘೇಲ್ ಅವರಿಗಿದೆ. ಲಕ್ಷಾಂತರ ಜನರ ಜೊತೆಗೆ ಚರ್ಚಿಸಿ ‘ಮೋದಿ ಗ್ಯಾರಂಟಿ’ ಎಂಬ ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ. ಇದರಲ್ಲಿ ಕೃಷಿ ಉನ್ನತಿ ಯೋಜನೆ ಆರಂಭಿಸಿ ಎಕರೆಗೆ 21 ಕ್ವಿಂಟಾಲ್ ಭತ್ತವನ್ನು 3100 ರೂ.ಗೆ ಖರೀದಿಸಲು ನಿರ್ಧರಿಸಿದ್ದೇವೆ ಎಂದು ಅವರು ಈ  ಸಂದರ್ಭದಲ್ಲಿ ಹೇಳಿದ್ದಾರೆ. 

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News