ಮಾಜಿ ಕೇಂದ್ರ ಸಚಿವ ಹನ್ಸರಾಜ್ ಬೆಂಗಾವಲು ವಾಹನ ಅಪಘಾತ; ಇಬ್ಬರು ಭದ್ರತಾ ಸಿಬ್ಬಂದಿ ಸಾವು

ಹನ್ಸ್‌ರಾಜ್ ಅಹಿರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿಮಿತ್ತ ದೆಹಲಿಗೆ ತೆರಳುತ್ತಿದ್ದರು ಎನ್ನಲಾಗಿದ್ದು, ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ. 

Last Updated : Sep 26, 2019, 02:33 PM IST
ಮಾಜಿ ಕೇಂದ್ರ ಸಚಿವ ಹನ್ಸರಾಜ್ ಬೆಂಗಾವಲು ವಾಹನ ಅಪಘಾತ; ಇಬ್ಬರು ಭದ್ರತಾ ಸಿಬ್ಬಂದಿ ಸಾವು title=

ನಾಗ್ಪುರ: ಕೇಂದ್ರ ಸಚಿವ ಹನ್ಸರಾಜ್ ಅಹಿರ್ ಅವರ ಬೆಂಗಾವಲು ವಾಹನಕ್ಕೆ ಅತಿವೇಗವಾಗಿ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಗುರುವಾರ ನಡೆದಿದೆ. 

ಚಂದ್ರಪುರ-ನಾಗ್ಪುರ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಹನ್ಸರಾಜ್ ಅಹಿರ್ ಅವರ ಭದ್ರತೆಗೆ ನಿಯೋಜಿಸಲಾದ ಸಿಆರ್‌ಪಿ ವಾಹನಕ್ಕೆ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸಿಆರ್‌ಪಿಎಫ್ ಯೋಧ ಮತ್ತು ಮಹಾರಾಷ್ಟ್ರ ಪೊಲೀಸ್ ಪೇದೆ (ಚಾಲಕ) ಮೃತಪಟ್ಟಿದ್ದಾರೆ. ಅಲ್ಲದೆ, ಈ ದುರ್ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಹನ್ಸ್‌ರಾಜ್ ಅಹಿರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿಮಿತ್ತ ದೆಹಲಿಗೆ ತೆರಳುತ್ತಿದ್ದರು ಎನ್ನಲಾಗಿದ್ದು, ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ. 

ಈ ಅಪಘಾತದಲ್ಲಿ ಮಾಜಿ ಗೃಹ ಸಚಿವ ಹನ್ಸ್ರಾಜ್ ಅಹಿರ್ ಅವರಿಗೂ ಅಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. 

Trending News