Daily GK Quiz: ಕರ್ನಾಟಕದ ಯಾವ ನಗರವನ್ನು ʼಚೋಟಾ ಬಾಂಬೆʼ ಎಂದು ಕರೆಯುತ್ತಾರೆ?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Oct 28, 2024, 04:04 PM IST
  • ಕರ್ನಾಟಕ ಏಕೀಕರಣ ಯಾರ ನೇತೃತ್ವದಲ್ಲಿ ಪ್ರಾರಂಭವಾಯಿತು?
  • ಕರ್ನಾಟಕದ ಜನತಾ ಪಕ್ಷದಿಂದ ಮೊದಲ ಮುಖ್ಯಮಂತ್ರಿ ಯಾರು?
  • ಸಿಲಿಕಾನ್‌ ಸಿಟಿ ಬೆಂಗಳೂರು ಸಮುದ್ರ ಮಟ್ಟದಿಂದ ಎಷ್ಟು ಎತ್ತರದಲ್ಲಿದೆ?
Daily GK Quiz: ಕರ್ನಾಟಕದ ಯಾವ ನಗರವನ್ನು ʼಚೋಟಾ ಬಾಂಬೆʼ ಎಂದು ಕರೆಯುತ್ತಾರೆ? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಕರ್ನಾಟಕ ಏಕೀಕರಣ ಯಾರ ನೇತೃತ್ವದಲ್ಲಿ ಪ್ರಾರಂಭವಾಯಿತು?

ಉತ್ತರ: ಆಲೂರು ವೆಂಕಟರಾಯರು

ಪ್ರಶ್ನೆ 2: ಕರ್ನಾಟಕದ ಅತಿ ಎತ್ತರದ ಶಿಖರ ಯಾವುದು?

ಉತ್ತರ: ಮುಳ್ಳಯ್ಯನಗಿರಿ (1,930 ಮೀ)

ಪ್ರಶ್ನೆ 3: ಮೈಸೂರಿನ ಗ್ರ್ಯಾಂಡ್-ಓಲ್ಡ್ ಮ್ಯಾನ್ ಎಂದು ಯಾರನ್ನು ಕರೆಯಲಾಗುತ್ತದೆ?

ಉತ್ತರ: ಎಂ. ವೆಂಕಟಕೃಷ್ಣಯ್ಯ

ಪ್ರಶ್ನೆ 4: ಯಾವ ನಗರವನ್ನು ಚೋಟಾ ಬಾಂಬೆ ಎಂದೂ ಕರೆಯುತ್ತಾರೆ?

ಉತ್ತರ: ಹುಬ್ಬಳ್ಳಿ

ಪ್ರಶ್ನೆ 5: ಕರ್ನಾಟಕದ ಜನತಾ ಪಕ್ಷದಿಂದ ಮೊದಲ ಮುಖ್ಯಮಂತ್ರಿ ಯಾರು?

ಉತ್ತರ: ರಾಮಕೃಷ್ಣ ಹೆಗಡೆ

ಇದನ್ನೂ ಓದಿ: Daily GK Quiz: ಕರ್ನಾಟಕ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಯಾರು?

ಪ್ರಶ್ನೆ 6: ಕರ್ನಾಟಕದ 30ನೇ ಜಿಲ್ಲೆ ಯಾವುದು?

ಉತ್ತರ: ಯಾದಗಿರಿ

ಪ್ರಶ್ನೆ 7: ಸಿಲಿಕಾನ್‌ ಸಿಟಿ ಬೆಂಗಳೂರು ಸಮುದ್ರ ಮಟ್ಟದಿಂದ ಎಷ್ಟು ಎತ್ತರದಲ್ಲಿದೆ?

ಉತ್ತರ: 920 ಮೀ

ಪ್ರಶ್ನೆ 8: ಮಂಗಳೂರು ಬಂದರು ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ?

ಉತ್ತರ: ದಕ್ಷಿಣ ಕನ್ನಡ

ಪ್ರಶ್ನೆ 9: 1934 ರಲ್ಲಿ ಬಿಡುಗಡೆಯಾದ ಮೊದಲ ಕನ್ನಡ ಟಾಕಿ ಚಿತ್ರ ಯಾವುದು?

ಉತ್ತರ: ಸತಿ ಸುಲೋಚನಾ

ಪ್ರಶ್ನೆ 10: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾವ ಜಿಲ್ಲೆಯಲ್ಲಿದೆ?

ಉತ್ತರ: ಬೆಂಗಳೂರು ನಗರ

ಇದನ್ನೂ ಓದಿ: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್; ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News