ಉದ್ಯೋಗಾಕಾಂಕ್ಷಿಗಳಿಗೆ 'ಗುಡ್ ನ್ಯೂಸ್'​ ನೀಡಿದ ಕೇಂದ್ರ ಸರ್ಕಾರ!

ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 5 ಕೋಟಿ ಉದ್ಯೋಗವನ್ನ ಸೃಷ್ಟಿ ಮಾಡಲು ಕೇಂದ್ರ ಸರ್ಕಾರ ಅವಿರತ ಪ್ರಯತ್ನ

Last Updated : Dec 15, 2020, 09:46 PM IST
  • ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 5 ಕೋಟಿ ಉದ್ಯೋಗವನ್ನ ಸೃಷ್ಟಿ ಮಾಡಲು ಕೇಂದ್ರ ಸರ್ಕಾರ ಅವಿರತ ಪ್ರಯತ್ನ
  • ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಮತ್ತು ಎಂಸ್ಎಂಇ ಸಚಿನ ನಿತಿನ್ ಗಡ್ಕರಿ ಅವರಿಂದ ಹೇಳಿಕೆ
  • ಪ್ರಸ್ತುತ ದೇಶದಲ್ಲಿ ಗ್ರಾಮೀಣ ಕೈಗಾರಿಕೆಗಳ ವಹಿವಾಟು 80 ಸಾವಿರ ಕೋಟಿ ರೂಪಾಯಿ ಇದೆ. ಮುಂದಿನ 5 ವರ್ಷಗಳಲ್ಲಿ ಇದನ್ನ 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡುವ ಗುರಿ
ಉದ್ಯೋಗಾಕಾಂಕ್ಷಿಗಳಿಗೆ 'ಗುಡ್ ನ್ಯೂಸ್'​ ನೀಡಿದ ಕೇಂದ್ರ ಸರ್ಕಾರ! title=

ನವದೆಹಲಿ: ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 5 ಕೋಟಿ ಉದ್ಯೋಗವನ್ನ ಸೃಷ್ಟಿ ಮಾಡಲು ಕೇಂದ್ರ ಸರ್ಕಾರ ಅವಿರತ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಮತ್ತು ಎಂಸ್​ಎಂಇ ಸಚಿನ ನಿತಿನ್​ ಗಡ್ಕರಿ ಹೇಳಿದ್ದಾರೆ.

ಪ್ರಸ್ತುತ ದೇಶದಲ್ಲಿ ಗ್ರಾಮೀಣ ಕೈಗಾರಿಕೆಗಳ ವಹಿವಾಟು 80 ಸಾವಿರ ಕೋಟಿ ರೂಪಾಯಿ ಇದೆ. ಮುಂದಿನ 5 ವರ್ಷಗಳಲ್ಲಿ ಇದನ್ನ 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ರು.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ 'ಐವರು ಅನ್ನದಾತರ ದುರ್ಮರಣ'!

ಅಗ್ರೋವಿಷನ್​ ಫೌಂಡೇಶನ್​ ಆಯೋಜಿಸಿದ್ದ ಕೃಷಿ - ಆಹಾರ ಸಂಸ್ಕರಣಾ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವ್ರು, ಕೇಂದ್ರ ಸರ್ಕಾರ ಯೋಜನೆಗಳು ಮುಂದಿನ ದಿನಗಳಲ್ಲಿ ಕೃಷಿ ಹಾಗೂ ಆಹಾರ ಸಂಸ್ಕರಣೆ ವಿಭಾಗದಲ್ಲಿ ಉದ್ಯೋಗಾವಕಾಶ(Jobs)ಗಳನ್ನ ಸೃಷ್ಟಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತ್ಮಕಥೆ ಸ್ಥಗಿತಗೊಳಿಸಲು ಪ್ರಕಾಶಕರಿಗೆ ಪುತ್ರನ ಮನವಿ

ಭಾರತದಲ್ಲಿ ಪ್ರಸ್ತುತ 280 ಲಕ್ಷ ಟನ್​ ಅಕ್ಕಿ ಉತ್ಪಾದನೆಯಾಗುತ್ತಿದೆ. ಇದರರ್ಥ ವಿಶ್ವದ ಮಾರುಕಟ್ಟೆಗೆ ಪೂರೈಕೆ ಮಾಡುವಷ್ಟರ ಮಟ್ಟಿಗೆ ನಾವು ಅಕ್ಕಿ ಉತ್ಪಾದನೆ ಮಾಡುತ್ತಿದ್ದೇವೆ. ಎಥನಾಲ್​ನಿಂದ ಕೃಷಿ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂಪಾಯಿಗಳ ವಹಿವಾಟು ನಡೆಯುತ್ತದೆ. ಇದರಲ್ಲಿ 1 ಲಕ್ಷ ಕೋಟಿ ರೂಪಾಯಿ ದೇಶದ ರೈತರ ಜೇಬನ್ನ ಸೇರುತ್ತೆ ಎಂದು ಹೇಳಿದರು.

'ಬಿಜೆಪಿಯೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್​​!' ಬಿಜೆಪಿಯೊಂದಿಗಿದ್ದ ನಾಯಕನ ಹೇಳಿಕೆ!

Trending News