ʼಕರಾಳ ಕೇರಳ ʼ... ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ವಯನಾಡು! ಸಾವಿನ ಸಂಖ್ಯೆ 84ಕ್ಕೆ ಏರಿಕೆ

Wayanad Landslide Updates: ಕೇರಳದ ಗುಡ್ಡಗಾಡು ಜಿಲ್ಲೆ ವಯನಾಡ್‌ʼನಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತವು ಹಾನಿಯನ್ನುಂಟುಮಾಡಿದೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್, ರಾಜ್ಯ ಪೊಲೀಸ್ ಮತ್ತು ಇತರ ಏಜೆನ್ಸಿಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.

Written by - Bhavishya Shetty | Last Updated : Jul 30, 2024, 05:49 PM IST
    • ಕೇರಳದ ವಯನಾಡ್‌ʼನಲ್ಲಿ ಜಲಪ್ರಳಯವೇ ಉಂಟಾಗಿದೆ
    • ಭೂಕುಸಿತದಿಂದ ಇದುವರೆಗೆ 84 ಜನರು ಸಾವನ್ನಪ್ಪಿರುವ ಮಾಹಿತಿ
    • ಆರ್ಮಿ ಇಂಜಿನಿಯರಿಂಗ್ ಗ್ರೂಪ್ ಕೂಡ ಶೀಘ್ರದಲ್ಲೇ ವಯನಾಡ್ ತಲುಪಲಿದೆ
ʼಕರಾಳ ಕೇರಳ ʼ... ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ವಯನಾಡು! ಸಾವಿನ ಸಂಖ್ಯೆ 84ಕ್ಕೆ ಏರಿಕೆ title=
Wayanad Landslide Update

Wayanad Landslide Updates: ಕೇರಳದ ವಯನಾಡ್‌ʼನಲ್ಲಿ ಜಲಪ್ರಳಯವೇ ಉಂಟಾಗಿದೆ. ಭದ್ರತಾ ಪಡೆಗಳು ಮತ್ತು ಏಜೆನ್ಸಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಭೂಕುಸಿತದಿಂದ ಇದುವರೆಗೆ 84 ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಇನ್ನುಳಿದಂತೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:  ವಯಸ್ಸು 42, ಸ್ಟಾರ್‌ ನಟರ ಜೊತೆ ಅಫೇರ್‌, ವಿದೇಶಿಗನ ಜೊತೆ ಮದುವೆ..! ಸಖತ್‌ ಹಾಟ್‌ ಆಗಿರೋ ಈ ಬ್ಯೂಟಿಯೇ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ

ಕೇರಳದ ಗುಡ್ಡಗಾಡು ಜಿಲ್ಲೆ ವಯನಾಡ್‌ʼನಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತವು ಹಾನಿಯನ್ನುಂಟುಮಾಡಿದೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್, ರಾಜ್ಯ ಪೊಲೀಸ್ ಮತ್ತು ಇತರ ಏಜೆನ್ಸಿಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣೆ ಹಾಗೂ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. 122 ಇನ್‌ ಫೆಂಟ್ರಿ ಬೆಟಾಲಿಯನ್ (ಟಿಎ) ಮದ್ರಾಸ್‌ʼನ ತಂಡವನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಆರ್ಮಿ ಇಂಜಿನಿಯರಿಂಗ್ ಗ್ರೂಪ್ ಕೂಡ ಶೀಘ್ರದಲ್ಲೇ ವಯನಾಡ್ ತಲುಪಲಿದೆ.

84 ಮಂದಿ ಸಾವು:
ಎನ್‌ ಡಿ ಆರ್‌ ಎಫ್‌ʼನ ಹಲವು ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಅಂಕಿಅಂಶಗಳ ಪ್ರಕಾರ, ಅಪಘಾತದ ಸ್ಥಳಗಳಿಂದ ಇದುವರೆಗೆ 84 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅನೇಕ ಜನರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಎಲ್ಲ ಸಂಪನ್ಮೂಲಗಳನ್ನು ಕ್ರೋಢೀಕರಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ. ನೌಕಾಪಡೆ, ವಾಯುಪಡೆ ಮತ್ತು ರಾಜ್ಯ ಪೊಲೀಸರು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಸಿಪಿಐ(ಎಂ) ಮತ್ತು ಕಾಂಗ್ರೆಸ್ ತಮ್ಮ ಕಾರ್ಯಕರ್ತರಿಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುವಂತೆ ಕರೆ ನೀಡಿವೆ.

ಸಂತ್ರಸ್ತರಿಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ಸಮನ್ವಯಗೊಳಿಸುವ ಜವಾಬ್ದಾರಿಯನ್ನು ವಿಶೇಷ ಕರ್ತವ್ಯದಲ್ಲಿರುವ ಮುಖ್ಯಮಂತ್ರಿಗಳ ಅಧಿಕಾರಿಗೆ ವಹಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಡ್ರೋನ್ ಮತ್ತು ಪೊಲೀಸ್ ಶ್ವಾನ ತಂಡಗಳನ್ನು ಬಳಸಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತದವರೆಗೆ ಎಲ್ಲಾ ಹಂತಗಳಲ್ಲಿ ರಕ್ಷಣಾ ಕಾರ್ಯಕ್ಕಾಗಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

 

ಇದನ್ನೂ ಓದಿ:  ಕ್ರಿಕೆಟರ್ ಜೊತೆ ಅಫೇರ್!! ಆದ್ರೆ ಕೊನೆಗೆ ಈ ನಟಿ ಮದುವೆಯಾಗಿದ್ದು ತನ್ನ ಸ್ನೇಹಿತೆಯ ಪತಿಯನ್ನೇ!!

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ನಂತರದ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಹೇಳಿದ್ದಾರೆ. ಕೇಂದ್ರ ಸರ್ಕಾರ ಕೇರಳಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡುತ್ತಿದೆ. ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News