ಲಕ್ನೋದಲ್ಲಿ ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿ ಹತ್ಯೆ

ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿ ಅವರು ಶುಕ್ರವಾರದಂದು ಲಖನೌದಲ್ಲಿನ ತಮ್ಮ ಕಚೇರಿಯೊಳಗೆ ಅಪರಿಚಿತ ದುಷ್ಕರ್ಮಿಗಳ ಹಲ್ಲೆಯಿಂದಾಗಿ ಸಾವನ್ನಪ್ಪಿದ್ದಾರೆ.

Last Updated : Oct 18, 2019, 05:20 PM IST
ಲಕ್ನೋದಲ್ಲಿ ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿ ಹತ್ಯೆ  title=
file photo

ನವದೆಹಲಿ: ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿ ಅವರು ಶುಕ್ರವಾರದಂದು ಲಖನೌದಲ್ಲಿನ ತಮ್ಮ ಕಚೇರಿಯೊಳಗೆ ಅಪರಿಚಿತ ದುಷ್ಕರ್ಮಿಗಳ ಹಲ್ಲೆಯಿಂದಾಗಿ ಸಾವನ್ನಪ್ಪಿದ್ದಾರೆ.

ದಾಳಿಯ ನಂತರ ತಿವಾರಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಂತರ ಅವರು ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.ಇದೇ ವೇಳೆ ಅಲ್ಲಿ ಉಪಸ್ಥಿತನಿದ್ದ ಹಿಂದೂ ಸಮಾಜ ಪಕ್ಷದ ಮುಖಂಡನ ಮೇಲೆಯೂ ಹಲ್ಲೆ ನಡೆಸಲಾಗಿದೆ. ಇದಾದ  ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕಮಲೇಶ್ ತಿವಾರಿ ಹಿಂದೂ ಮಹಾಸಭೆಯ ಮಾಜಿ ಸದಸ್ಯರಾಗಿದ್ದರು. ಈ ಹಿಂದೆ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸುದ್ದಿ ಮಾಡಿದ್ದರು. ಈಗ ಪೋಲಿಸರು ಈ ಘಟನೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Trending News