Delhi Chalo protest: ದೆಹಲಿ ಚಲೋಗೆ ಹೊರಟಿದ್ದ ನೂರಾರು ರೈತರು ಪೊಲೀಸರ ವಶಕ್ಕೆ

Farmers protest Delhi Chalo: ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದ 130 ಕ್ಕೂ ಅಧಿಕ ರೈತ ಹೋರಾಟಗಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

Written by - Yashaswini V | Last Updated : Feb 12, 2024, 01:29 PM IST
  • ದೆಹಲಿ ಚಲೋಗೆ ಹೊರಟಿದ್ದ ರಾಜ್ಯದ ರೈತರು ಭೋಪಾಲ್ ನಲ್ಲಿ ಪೊಲೀಸರ ವಶಕ್ಕೆ
  • ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳಿದ್ದ ರೈತರು ಪೊಲೀಸರ ವಶಕ್ಕೆ
  • ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಮುಂಜಾನೆ 3ಕ್ಕೆ ದೆಹಲಿ ಚಲೋಗೆ ಹೊರಟಿದ್ದ ರೈತರನ್ನು ವಶಕ್ಕೆ ಪಡೆದ ಪೊಲೀಸರು
Delhi Chalo protest: ದೆಹಲಿ ಚಲೋಗೆ  ಹೊರಟಿದ್ದ  ನೂರಾರು ರೈತರು ಪೊಲೀಸರ ವಶಕ್ಕೆ  title=

Updates on Delhi Chalo protest: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದ ಪೊಲೀಸರು ಸೋಮವಾರ ಮುಂಜಾನೆ ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದ 130 ಕ್ಕೂ ಅಧಿಕ ರೈತ ಹೋರಾಟಗಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ- PMJJBY: ತಿಂಗಳಿಗೆ 36 ರೂ.ನಂತೆ 2 ಲಕ್ಷ ವಿಮೆ..! ಮೋದಿ ಸರ್ಕಾರದ ಅದ್ಭುತ ಯೋಜನೆ

ಚಾಮರಾಜನಗರದಿಂದ ಕಬ್ಬು ಬೆಳೆಗಾರರ ಸಂಘದ ಮೂಕಹಳ್ಳಿ ಮಹಾದೇವಸ್ವಾಮಿ, ಮೂಡ್ಲುಪುರ ಶಿವಮೂರ್ತಿ, ರೇವಣ್ಣ, ಉಡಿಗಾಲ ಲೋಕೇಶ್, ಬಸವಣ್ಣ, ಶೀಲಾ, ಪುಷ್ಪಾ, ಕಲಾವತಿ ಸೇರಿದಂತೆ 30 ಕ್ಕೂ ಅಧಿಕ ಮಂದಿ ತೆರಳಿದ್ದರು. ಮೈಸೂರಿನಿಂದಲೂ 70 ಕ್ಕೂ ಹೆಚ್ಚು ಮಂದಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಇವರೆಲ್ಲರನ್ನೂ ಇಂದು ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರೈತರ ಸಾಲಮನ್ನಾ ಮಾಡಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ಎಂಎಸ್‌ಪಿ ನಿಗದಿಯಾಗಬೇಕು, 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶದ ಬಹುಪಾಲು ರೈತ ಸಂಘಟನೆಗಳು ರಾಷ್ಟ್ರೀಯ ಕಿಸಾನ್ ಒಕ್ಕೂಟ ರಚನೆ ಮಾಡಿಕೊಂಡು ಫೆ.13 ರಂದು ಹೋರಾಟಕ್ಕೆ ಕರೆ ಕೊಟ್ಟಿದ್ದವು.

ಇದನ್ನೂ ಓದಿ- ನಿಮ್ಮ ಪೋಷಕರು ನನಗೆ ಮತ ಹಾಕದಿದ್ರೆ 2 ದಿನ ಊಟ ಬಿಡುವಂತೆ ಮಕ್ಕಳಿಗೆ MLA ಸಲಹೆ: ವಿಡಿಯೋ ವೈರಲ್

ಇನ್ನು, ಚಾಮರಾಜನಗರ ಕಬ್ಬು ಬೆಳೆಗಾರ ಸಂಘದ ಕಾರ್ಯದರ್ಶಿ ಎಚ್. ಮೂಕಹಳ್ಳಿ ಮಹದೇವಸ್ವಾಮಿ ಈ ಕುರಿತು ಪ್ರತಿಕ್ರಿಯಿಸಿದ್ದು,  ಮುಂಜಾನೆ ಮಲಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಪೊಲೀಸರು ವಶಕ್ಕೆ ಪಡೆಯುವ ವೇಳೆ ಕುರುಬೂರು ಶಾಂತಕುಮಾರ್ ಅವರ ಪತ್ನಿ ಪದ್ಮಾ ಶಾಂತಕುಮಾರ್ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ, ನಮ್ಮ‌ ರೈಲಿನಲ್ಲಿದ್ದ 150 ಕ್ಕೂ ಅಧಿಕ ಮಂದಿಯನ್ನು ಛತ್ರವೊಂದರಲ್ಲಿ ಇಟ್ಟಿದ್ದಾರೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News