ಈ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ: IMD ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಛತ್ತೀಸ್‌ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ, ಕೊಂಕಣ ಮತ್ತು ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ.

Written by - Bhavishya Shetty | Last Updated : Jul 25, 2022, 11:34 AM IST
  • ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
  • ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ
  • ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ
ಈ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ: IMD ಎಚ್ಚರಿಕೆ title=
IMD

ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಭಾನುವಾರದೊಳಗೆ ಪ್ರಭಾವ ಕೊಂಚ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 27 ರಿಂದ ಭಾರತದ ಉತ್ತರ ಭಾಗಗಳಲ್ಲಿ ಮಳೆಯು ಹೆಚ್ಚಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ. 

ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಛತ್ತೀಸ್‌ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ, ಕೊಂಕಣ ಮತ್ತು ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಪಶ್ಚಿಮ ರಾಜಸ್ಥಾನ, ಒಡಿಶಾ, ತಮಿಳುನಾಡು, ಪೂರ್ವ ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಕರ್ನಾಟಕದ ದಕ್ಷಿಣ ಒಳಭಾಗಗಳು, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಮತ್ತು ಪಂಜಾಬ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ.

ಇದನ್ನೂ ಓದಿ: ಇದಪ್ಪಾ ನಿಜವಾದ ವಿದ್ಯೆ ಅಂದ್ರೆ! ಈ ಶಾಲೆಯ ವಿದ್ಯಾಭ್ಯಾಸದ ಪದ್ಧತಿಗೆ ಪೋಷಕರು ಫಿದಾ

ಜುಲೈ ತಿಂಗಳಲ್ಲಿ ಉತ್ತರಾಖಂಡದಲ್ಲಿ ಮಳೆ ಮುಂದುವರೆದಿದೆ. ಜುಲೈ 27ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಚಾರ್‌ಧಾಮ ಯಾತ್ರೆಗೆ ತೊಂದರೆಯಾಗುತ್ತಿದೆ. ಎರಡು ದಿನಗಳ ಕಾಲ ರಾಜ್ಯದ ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಇಂದು ಡೆಹ್ರಾಡೂನ್, ಉತ್ತರಕಾಶಿ, ಬಾಗೇಶ್ವರ ಸೇರಿ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗರ್ವಾಲ್ ಮತ್ತು ಕುಮಾನ್ ಭಾಗಗಳಲ್ಲೂ ಮಳೆ ಅಬ್ಬರ ಪ್ರಾರಂಭವಾಗುವ ಸಾಧ್ಯತೆಯಿದೆ. ನೈನಿತಾಲ್, ಚಂಪಾವತ್, ಉಧಮ್ಸಿಂಗ್ನಗರದಲ್ಲಿ ಭಾರೀ ಮಳೆಯಾಗುವ ಸೂಚನೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.  

ದೆಹಲಿಯ ಹವಾಮಾನ ಸ್ಥಿತಿ:
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಲಘು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಶನಿವಾರದಂದು ಕನಿಷ್ಠ ತಾಪಮಾನ 25.5 ಡಿಗ್ರಿ ಸೆಲ್ಸಿಯಸ್, ಸಾಮಾನ್ಯಕ್ಕಿಂತ ಎರಡು ಹಂತಗಳು ಕಡಿಮೆ, ಗರಿಷ್ಠ ತಾಪಮಾನ 34.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಧ್ಯಪ್ರದೇಶದಲ್ಲಿ ಮಳೆ ಎಚ್ಚರಿಕೆ: 
ಮಧ್ಯಪ್ರದೇಶದ 52 ಜಿಲ್ಲೆಗಳ ಪೈಕಿ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, 16 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಈ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ನರ್ಮದಾ, ಪಾರ್ವತಿ ಬೇಟ್ವಾ ಮತ್ತು ಇತರ ನದಿಗಳಿಗೆ ನಿರ್ಮಿಸಲಾದ 52 ಪ್ರಮುಖ ಅಣೆಕಟ್ಟುಗಳ ಪೈಕಿ 14 ಅಣೆಕಟ್ಟುಗಳ ಕೆಲವು ಗೇಟ್‌ಗಳನ್ನು ತೆರೆದು ನೀರು ಬಿಡಲಾಗುತ್ತಿದೆ. ನದಿಯ ಸಮೀಪ ವಾಸಿಸುವ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. 

ಇದಲ್ಲದೆ, ಹವಾಮಾನ ಇಲಾಖೆಯು ರಾಜ್ಯದ 16 ಜಿಲ್ಲೆಗಳಲ್ಲಿ, ಬೆತುಲ್, ನರ್ಮದಾಪುರಂ, ಹರ್ದಾ, ಉಮಾರಿಯಾ, ಶಹದೋಲ್, ಅನುಪ್ಪುರ್, ಶಿವಪುರಿ, ಶಿಯೋಪುರ್, ನೀಮುಚ್, ಮಂದಸೌರ್, ಖಾಂಡ್ವಾ, ಚಿಂದ್ವಾರಾ, ಸಿಯೋನಿ, ಮಂಡ್ಲಾ, ಬಾಲಘಾಟ್ ಮತ್ತು ನರಸಿಂಗ್‌ಪುರ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ವರದಿ ಮಾಡಿದೆ. ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಅವಧಿಯಲ್ಲಿ, ಹವಾಮಾನ ಇಲಾಖೆಯು ರಾಜ್ಯದ ರೇವಾ, ಸಾಗರ, ಜಬಲ್‌ಪುರ, ಭೋಪಾಲ್, ನರ್ಮದಾಪುರಂ, ಚಂಬಲ್ ಮತ್ತು ಗ್ವಾಲಿಯರ್ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಛತ್ತೀಸ್‌ಗಢದಲ್ಲಿ ಭಾರೀ ಮಳೆ: 
ಕಳೆದ ಕೆಲವು ದಿನಗಳಿಂದ ರಾಯ್‌ಪುರ ಸೇರಿದಂತೆ ಛತ್ತೀಸ್‌ಗಢದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಸಿಎಂ ಭೂಪೇಶ್ ಬಘೇಲ್ ಅಧಿಕಾರಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ದಕ್ಷಿಣ ಬಸ್ತಾರ್‌ನ ಬಿಜಾಪುರದ ಹಲವಾರು ಸಣ್ಣ ನದಿಗಳು ಮತ್ತು ಜಲಾಶಯಗಳಲ್ಲಿ ಪ್ರವಾಹದ ನೀರಿನಿಂದ ತುಂಬಿಹೋಗುತ್ತಿದೆ. 

ರಾಜಸ್ಥಾನದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಹಲವೆಡೆ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ಸವಾಯಿ ಮಾಧೋಪುರದ ಧೀಲ್ ಅಣೆಕಟ್ಟಿನಲ್ಲಿ 176 ಮಿಮೀ ಮಳೆ ದಾಖಲಾಗಿದೆ. ರಾಜಧಾನಿ ಜೈಪುರದಲ್ಲಿ ಹಲವು ದಿನಗಳಿಂದ ಮೋಡ ಕವಿದ ವಾತಾವರಣ ಮುಂದುವರಿದಿದೆ. ಜೈಪುರದ ಹವಾಮಾನ ಕೇಂದ್ರದ ಪ್ರಕಾರ, ಮುಂದಿನ ಮೂರು-ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಪ್ರಬಲವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಮುಂದಿನ 119 ದಿನಗಳವರೆಗೆ ಈ ಎರಡು ರಾಶಿಯವರ ಸಂಕಷ್ಟ ಹೆಚ್ಚಿಸಲಿದ್ದಾನೆ ವಕ್ರೀ ಗುರು

ಜೈಪುರದ ಹವಾಮಾನ ಕೇಂದ್ರದ ನಿರ್ದೇಶಕ ರಾಧೇಶ್ಯಾಮ್ ಶರ್ಮಾ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಜೂನ್ 30 ರಂದು ಮುಂಗಾರು ಪ್ರವೇಶಿಸಿದ್ದು, ಮಳೆಗಾಲ ಮುಂದುವರಿಯಲಿದೆ. ತಜ್ಞರ ಪ್ರಕಾರ, ನಗರ ಪ್ರದೇಶದ ಜನರಿಗೆ ಮಳೆಯು ಅನೇಕ ಬಾರಿ ತೊಂದರೆಗಳನ್ನುಂಟು ಮಾಡುತ್ತಿದ್ದರೂ, ಶ್ರಾವಣ ನಂತರ ಬಿತ್ತಿದ ಖಾರಿಫ್ ಬೆಳೆಗಳ ಚಟುವಟಿಕೆಗಳು ವೇಗವನ್ನು ಪಡೆದುಕೊಳ್ಳಲಿದೆ. ಇದು ರೈತರಿಗೆ ವರದಾನವಾಗಲಿದೆ ಎಂದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News