ಭಾರತೀಯ ಸೇನಾ ಟ್ರಕ್ ಗೆ ಬೆಂಕಿ,ಉಗ್ರರು ಗ್ರೆನೇಡ್ ಬಳಸಿರುವ ಶಂಕೆ 

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಿಬ್ಬಂದಿಯ ಜೀವವನ್ನು ಬಲಿತೆಗೆದುಕೊಂಡಿದ್ದು, ಭಯೋತ್ಪಾದಕರು ಗ್ರೆನೇಡ್‌ಗಳಿಂದ ಉಡಾಯಿಸಿರುವ ಸಾಧ್ಯತೆಯಿದೆ ಎಂದು ಸೇನಾ ಯೋಧರು ಗುರುವಾರ ಹೇಳಿದ್ದಾರೆ.

Written by - Zee Kannada News Desk | Last Updated : Apr 20, 2023, 10:57 PM IST
  • ವಾಹನದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ, ನಂತರ ಅದು ಬೆಂಕಿಯಲ್ಲಿ ಸ್ಫೋಟಿಸಿತು
  • ಜೆ-ಕೆ ಯ ರಜೌರಿ ಸೆಕ್ಟರ್‌ನಲ್ಲಿ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ ಚಲಿಸುತ್ತಿದ್ದ ಸೇನಾ ವಾಹನದ ಮೇಲೆ ಇಂದು ಅಪರಿಚಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ.
  • ಭಯೋತ್ಪಾದಕರು ಗ್ರೆನೇಡ್‌ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ
 ಭಾರತೀಯ ಸೇನಾ ಟ್ರಕ್ ಗೆ ಬೆಂಕಿ,ಉಗ್ರರು ಗ್ರೆನೇಡ್ ಬಳಸಿರುವ ಶಂಕೆ  title=

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಿಬ್ಬಂದಿಯ ಜೀವವನ್ನು ಬಲಿತೆಗೆದುಕೊಂಡಿದ್ದು, ಭಯೋತ್ಪಾದಕರು ಗ್ರೆನೇಡ್‌ಗಳಿಂದ ಉಡಾಯಿಸಿರುವ ಸಾಧ್ಯತೆಯಿದೆ ಎಂದು ಸೇನಾ ಯೋಧರು ಗುರುವಾರ ಹೇಳಿದ್ದಾರೆ.

ಇದನ್ನೂ ಓದಿ: ವರುಣ ಬಳಿಕ ಚಾಮರಾಜನಗರದಲ್ಲಿ 2ನೇ ಸುತ್ತಿನ ಮತಬೇಟೆ

ಘಟನೆಯ ಕುರಿತು ಸೇನೆಯು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ವಾಹನದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ, ನಂತರ ಅದು ಬೆಂಕಿಯಲ್ಲಿ ಸ್ಫೋಟಿಸಿತು, ಬಹುಶಃ ಭಯೋತ್ಪಾದಕರು ಗ್ರೆನೇಡ್‌ಗಳ ಲಾಬಿಂಗ್‌ನಿಂದಾಗಿ ಸ್ಫೋಟಗೊಂಡಿರಬಹುದು ಎಂದು ಹೇಳಿದೆ."ಜೆ-ಕೆ ಯ ರಜೌರಿ ಸೆಕ್ಟರ್‌ನಲ್ಲಿ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ ಚಲಿಸುತ್ತಿದ್ದ ಸೇನಾ ವಾಹನದ ಮೇಲೆ ಇಂದು ಅಪರಿಚಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಭಯೋತ್ಪಾದಕರು ಗ್ರೆನೇಡ್‌ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ" ಎಂದು ಸೇನೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ-ʼಲಿಂಗಾಯತ ಸಿಎಂʼ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ : ಸಿಎಂ ಸ್ಪಷ್ಟನೆ

"ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಾಗಿ ನಿಯೋಜಿಸಲಾದ ರಾಷ್ಟ್ರೀಯ ರೈಫಲ್ಸ್ ಘಟಕದ ಐವರು ಸಿಬ್ಬಂದಿ ದುರದೃಷ್ಟವಶಾತ್ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ" ಎಂದು ಅದು ಹೇಳಿದೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಯೋಧನನ್ನು ತಕ್ಷಣವೇ ಸ್ಥಳಾಂತರಿಸಲಾಗಿದ್ದು, ರಾಜೌರಿಯಲ್ಲಿರುವ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಳಿಕೋರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನೆಯು ಮತ್ತಷ್ಟು ಮಾಹಿತಿ ನೀಡಿದೆ. ಈ ದಿನದ ಆರಂಭದಲ್ಲಿ ಭಾರತೀಯ ಸೇನೆಯ ಒಂದು ವಾಹನವು ಭಿಂಬರ್ ಗಲಿಯಿಂದ ಜಿಲ್ಲೆಯ ಪೂಂಚ್ (ಜೆ-ಕೆ) ನಲ್ಲಿರುವ ಸಂಗಿಯೋಟ್‌ಗೆ ಚಲಿಸುವಾಗ ಬೆಂಕಿ ಹೊತ್ತಿಕೊಂಡಿತು.ಈ ದುರಂತ ಘಟನೆಯಲ್ಲಿ, ಭಾರತೀಯ ಸೇನೆಯ ಐವರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸೇನೆ ಹೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News