ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ನ್ಯಾಯಾಲಯದ ಮುಂದೆ ಶರಣು

ಈ ಹಿಂದೆ ಏಪ್ರಿಲ್‌ 18ರಂದು ಸುಪ್ರೀಂ ಕೋರ್ಟ್‌ ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು.

Written by - Bhavishya Shetty | Last Updated : Apr 24, 2022, 06:01 PM IST
  • ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ
  • ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಶರಣು
  • ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿದ್ದ ಸುಪ್ರೀಂ
ಲಖಿಂಪುರ ಖೇರಿ ಪ್ರಕರಣ:  ಆಶಿಶ್ ಮಿಶ್ರಾ ನ್ಯಾಯಾಲಯದ ಮುಂದೆ ಶರಣು title=
Lakhimpur Kheri

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಭಾನುವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ. 

ಇದನ್ನು ಓದಿ: ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರನಿಗೆ ʼಸುಪ್ರೀಂʼ ಸಂಕಷ್ಟ

ಈ ಹಿಂದೆ ಏಪ್ರಿಲ್‌ 18ರಂದು ಸುಪ್ರೀಂ ಕೋರ್ಟ್‌ ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು. ಅದರಂತೆ ಒಂದು ದಿನ ಮುಂಚಿತವಾಗಿ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ. 

ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ರೈತ ಕುಟುಂಬಗಳು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 4ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿತ್ತು. ತೀರ್ಪನ್ನು ಏಪ್ರಿಲ್‌ 18ರವರೆಗೆ ಕಾಯ್ದಿರಿಸಿತ್ತು. ಬಳಿಕ ತೀರ್ಪು ಪ್ರಕಟಿಸಿದ ಕೋರ್ಟ್‌, ಅಲಹಾಬಾದ್ ಹೈಕೋರ್ಟ್‌ ಆಶಿಶ್‌ ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಆದೇಶ ನೀಡಿತ್ತು. 

ಇದನ್ನು ಓದಿ: RCB ಸೋಲಿಗೆ ಕಾರಣನಾದ SRH ಟೀಂನ ಈ 21 ವರ್ಷದ ಯುವ ಬ್ಯಾಟ್ಸ್‌ಮನ್!

ಏನಿದು ಘಟನೆ: 
ಅಕ್ಟೋಬರ್ 3, 2021 ರಂದು, ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈತರ ಆಂದೋಲನದ ಸಂದರ್ಭದಲ್ಲಿ ಉಂಟಾದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಈ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾದ ಆಶಿಶ್‌ಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಆದೇಶ ಹೊರಡಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News