Lok Sabha Elections 2024: ದ್ವೇಷ ಭಾಷಣಕ್ಕೆ ಅವಕಾಶವಿಲ್ಲ, ಅಭ್ಯರ್ಥಿಗಳು ಶತ್ರುಗಳ ರೀತಿ ವರ್ತಿಸಬಾರದು!

Lok Sabha Elections 2024: ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್​ಪೋರ್ಟ್​ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್‌ ಕುಮಾರ್‌ ತಿಳಿಸಿದ್ದಾರೆ. 

Written by - Puttaraj K Alur | Last Updated : Mar 16, 2024, 05:43 PM IST
  • ಅಬ್ಯರ್ಥಿಗಳು ಯಾವುದೇ ಕಾರಣಕ್ಕೂ ರಾಜಕೀಯಪ್ರೇರಿತ ಭಾಷಣ ಮಾಡುವಂತಿಲ್ಲ
  • ವಿಷಯ ಆಧಾರಿತ ಪ್ರಚಾರ ಮಾಡಬೇಕು, ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ
  • ಯಾವುದೇ ಜಾತಿ ಅಥವಾ ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ
Lok Sabha Elections 2024: ದ್ವೇಷ ಭಾಷಣಕ್ಕೆ ಅವಕಾಶವಿಲ್ಲ, ಅಭ್ಯರ್ಥಿಗಳು ಶತ್ರುಗಳ ರೀತಿ ವರ್ತಿಸಬಾರದು!  title=
Lok Sabha Elections 2024

Lok Sabha Elections 2024: ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕೇಂದ್ರದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. 

ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವ ಕಾಪಾಡಿಕೊಳ್ಳಬೇಕು. ದ್ವೇಷ ಭಾಷಣ ಮಾಡಬಾರದು ಹಾಗೂ ಶತ್ರುಗಳ ರೀತಿ ವರ್ತಿಸಬಾರದು ಎಂದು ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜಕೀಯಪ್ರೇರಿತ ಭಾಷಣ ಮಾಡುವಂತಿಲ್ಲ. ವಿಷಯ ಆಧಾರಿತ ಪ್ರಚಾರ ಮಾಡಬೇಕು. ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ. ಯಾವುದೇ ಜಾತಿ ಅಥವಾ ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲವೆಂದು ಹೇಳಿದ್ದಾರೆ. 

ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ  

ಅಭ್ಯರ್ಥಿಗಳ ಖಾಸಗಿ ಜೀವನದ ಬಗ್ಗೆ ಟೀಕಿಸುವಂತಿಲ್ಲ. ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕಟಿಸಬಾರದು. ಪಕ್ಷದ ಜಾಹೀರಾತುಗಳನ್ನು ಸುದ್ದಿಯಾಗಿ ನೀಡುವಂತಿಲ್ಲ. ಪ್ರತಿಸ್ಪರ್ಧಿಗಳನ್ನು ನಿಂದಿಸುವ/ಅವಮಾನಿಸುವ ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಮೇಲೆ ನಿರ್ಬಂಧ ಹೇರಲಾಗುವುದು. ಸ್ಟಾರ್ ಪ್ರಚಾರಕರು ಪ್ರಚಾರದ ಗೌರವ ಕಾಪಾಡಿಕೊಳ್ಳಬೇಕು. ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲವೆಂದು ಹೇಳಿದ್ದಾರೆ. 

ರೈಲು & ವಿಮಾನ ನಿಲ್ದಾಣಗಳಲ್ಲಿ ತಪಾಸಣೆ  

ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್​ಪೋರ್ಟ್​ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್‌ ಕುಮಾರ್‌ ತಿಳಿಸಿದ್ದಾರೆ. 

ಸುಳ್ಳು ಸುದ್ದಿಗಳ ಮೇಲೆ ನಿಗಾ

ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲಾಗುವುದು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಫೇಕ್‌ ನ್ಯೂಸ್‌ಗಳ ಮೂಲಕ ತೆಗಳಲು ಅವಕಾಶವಿಲ್ಲ ಅಂತಾ ರಾಜೀವ್‌ ಕುಮಾರ್‌ ಹೇಳಿದ್ದಾರೆ. 

ಬ್ಯಾಂಕ್​ಗಳಿಗೆ ಚುನಾವಣಾ ಆಯೋಗ ನಿರ್ದೇಶನ

ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಬ್ಯಾಂಕುಗಳು ಮಾಹಿತಿ ನೀಡಬೇಕು. ಎಲ್ಲಾ ಬ್ಯಾಂಕ್​ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ರಾಜೀವ್ ಕುಮಾರ್ ದೇಶದ ಬ್ಯಾಂಕ್‌ಗಳಿಗೆ ನಿರ್ದೇಶ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News