Lok Sabha Elections 2024: ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದ್ರೆ ಜಾಮೀನು ರಹಿತ ಕೇಸ್- ರಾಜೀವ್ ಕುಮಾರ್

Lok Sabha Elections 2024: ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್​ಪೋಸ್ಟ್ ಇರಲಿವೆ, ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ​

Written by - Puttaraj K Alur | Last Updated : Mar 16, 2024, 05:26 PM IST
  • ಚುಣಾವಣೆ ವೇಳೆ ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್
  • ಚುನಾವಣಾ ಅಕ್ರಮಗಳನ್ನು ಮತದಾರರೇ ಬಯಲು ಮಾಡುವ ಅವಕಾಶ ನೀಡಲಾಗಿದೆ
  • ಎಲ್ಲಾ ಕಡೆ ಚೆಕ್​ಪೋಸ್ಟ್ ಇರಲಿವೆ, ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗುವುದು
Lok Sabha Elections 2024: ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದ್ರೆ ಜಾಮೀನು ರಹಿತ ಕೇಸ್- ರಾಜೀವ್ ಕುಮಾರ್ title=
Lok Sabha Elections 2024

Lok Sabha Elections 2024: ಚುಣಾವಣೆ ವೇಳೆ ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಬಿಡುಗಡೆ ಮಾಡಿದ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.  

ಅಪರಾಧ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಜನರೇ ಖುದ್ದು ಮಾಹಿತಿ ನೀಡಬಹುದು. ಈ ಬಗ್ಗೆ ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು. 11 ರಾಜ್ಯಗಳ ಚುನಾವಣೆಯಲ್ಲಿ 3,400 ಕೋಟಿ ರೂ. ಸೀಜ್ ಮಾಡಲಾಗಿದೆ. ಚುನಾವಣೆಯ ವೇಳೆ‌ ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಅಂತಾ ಹೇಳಿದ್ದಾರೆ.

ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ  

ಅಕ್ರಮದ ಬಗ್ಗೆ ಆ್ಯಪ್ ಮೂಲಕ ಮಾಹಿತಿ ನೀಡಿ

ಆ್ಯಪ್ ಮೂಲಕ ಜನರಿಗೆ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯವಿರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್​ನಲ್ಲಿರಲಿದೆ. ಇದರ ಸಹಕಾರದಿಂದ ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ  

ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್​ಪೋಸ್ಟ್ ಇರಲಿವೆ, ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. CRPF ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್​ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತಾರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News